ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Published : Sep 25, 2023, 08:05 AM ISTUpdated : Sep 25, 2023, 11:58 AM IST
ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಸಾರಾಂಶ

ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ತಡರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಮೆಟ್ರೋ ನಿಲ್ದಾಣದ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. 

ಬೆಂಗಳೂರು (ಸೆ.25): ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ತಡರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಮೆಟ್ರೋ ನಿಲ್ದಾಣದ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಯಶವಂತ್ (26) ಮೃತ ದುರ್ದೈವಿ. ಮೆಟ್ರೋ ನಿಲ್ದಾಣದ ಕೆಳಭಾಗದಲ್ಲಿ ಅವೈಜ್ಞಾನಿಕವಾಗಿ ಲಾರಿ ಚಾಲಕರು ಪಾರ್ಕಿಂಗ್ ಮಾಡಿದ್ದರು.  

ಈ ವೇಳೆ ಬನಶಂಕರಿ ಮಾರ್ಗದಿಂದ ಸೌತ್ ಎಂಡ್ ಸರ್ಕಲ್ ಕಡೆ ಹೊರಟಿದ್ದ ಮೃತ ಯುವಕ. ಹೀಗಿರುವಾಗ ಜಯನಗರ ಮೆಟ್ರೋ ನಿಲ್ದಾಣದ ಸ್ಥಳದಲ್ಲಿ ವೇಗವಾಗಿ ಬಂದಿದ್ದು ನಿಯಂತ್ರಣ ಸಿಗದೆ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಅದರ ರಭಸಕ್ಕೆ ಲಾರಿ ಹಿಂಬದಿ ಬೈಕ್ ಸಮೇತ ಯುವಕ ಸಿಲುಕಿಕೊಂಡಿದ್ದಾನೆ.  ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಜಯನಗರ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಸುಮಾರು 3-4 ಗಂಟೆಗಳ ಕಾಲ ಬಾಡಿ ಹೊರತೆಗೆಯಲು ಪೊಲೀಸರಿಂದ ಹರಸಾಹಸಪಟ್ಟಿದ್ದಾರೆ. 

ಮೃತ ಯುವಕ ಯಲಚೇನಹಳ್ಳಿ ನಿವಾಸಿಯಾಗಿದ್ದು ಇತ್ತೀಚೆಗಷ್ಟೇ ಮದುವೆಯಾಗಿದ್ದ. ಸತತ ಪ್ರಯತ್ನದ ಬಳಿಕ ಬೆಳಗ್ಗಿನ ಜಾವ ಮೂರು ಗಂಟೆಗೆ ಪೊಲೀಸರು ಮೃತದೇಹ ಹೊರತೆಗೆದರು. ಮೃತದೇಹ ಹೊರತೆಗೆಯುತ್ತಲೇ ಸ್ಥಳಕ್ಕೆ ಮೃತ ಯಶವಂತ್ ತಾಯಿ ಮತ್ತು ಸಹೋದರ ಧಾವಿಸಿದ್ದು, ಯಶವಂತ್ ಸ್ಥಿತಿ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.ಬಳಿಕ ಆ್ಯಂಬುಲೆನ್ಸ್ ಮೂಲಕ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 

ಕಾವೇರಿ ವಿಷಯದಲ್ಲಿ ಪ್ರಧಾನಿ ಮೋದಿ ಮೌನ ಸರಿಯಲ್ಲ: ಸಚಿವ ರಾಮಲಿಂಗಾರೆಡ್ಡಿ

ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯಶವಂತ್, ಆರು ತಿಂಗಳ ಹಿಂದಷ್ಟೇ ಹೊಸ ಕಂಪನಿ ಸೇರಿದ್ದ. ಹೆಂಡತಿ ಮತ್ತು ಎಂಟು ತಿಂಗಳ ಮಗುವನ್ನು ಅಗಲಿರುವ ಯಶವಂತ್, ಯಾವುದೇ ಬ್ಯಾಡ್ ಹ್ಯಾಬಿಟ್ ಇರೋ ಹುಡುಗ ಅಲ್ಲ ಎಂದು ಅವನ ಸ್ನೇಹಿತರು ಪೊಲೀಸರಿಗೆ ಹೇಳಿದ್ದಾರೆ. ಆ ಏರಿಯಾಕೆ ಯಶವಂತ್ ಯಾಕೆ ಬಂದ ಅನ್ನುವುದೂ ಸ್ನೇಹಿತರಿಗೆ ಗೊಂದಲವಾಗಿದ್ದು, ಯಾರೋ ಬೆನ್ನಟ್ಟಿ ಬಂದಿರಬಹುದು ಅಂತ ಆತನ ಸ್ನೇಹಿತರು ಶಂಕೆ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು