ಬೆಂಗಳೂರು: ಸಿಗ್ನಲ್‌ ಜಂಪ್‌ ಮಾಡಿ ಕಾನ್‌ಸ್ಟೇಬಲ್‌ಗೆ ಹೊಡೆದ ಬೈಕ್‌ ಸವಾರ ಜೈಲಿಗೆ

Published : Mar 22, 2024, 06:17 AM IST
ಬೆಂಗಳೂರು: ಸಿಗ್ನಲ್‌ ಜಂಪ್‌ ಮಾಡಿ ಕಾನ್‌ಸ್ಟೇಬಲ್‌ಗೆ ಹೊಡೆದ ಬೈಕ್‌ ಸವಾರ ಜೈಲಿಗೆ

ಸಾರಾಂಶ

ವೈಯಾಲಿಕಾವಲ್‌ ನಿವಾಸಿ ಪ್ರತೀಕ್‌ ಆರ್‌.ಶಿಂಧೆ ಬಂಧಿತ. ಸದಾಶಿವನಗರ ಸಂಚಾರ ಪೊಲೀಸ್‌ ಠಾಣೆಯ ಕಾನ್‌ಸ್ಟೇಬಲ್‌ ಪಿ.ವೈ.ಶಿವರಾಜು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಬೆಂಗಳೂರು(ಮಾ.22):  ಟ್ರಾಫಿಕ್‌ ಸಿಗ್ನಲ್‌ ಜಂಪ್‌ ಮಾಡಿದ್ದಲ್ಲದ್ದೇ ಕರ್ತವ್ಯ ನಿರತ ಸಂಚಾರ ಪೊಲೀಸ್‌ ಕಾನ್‌ಸ್ಟೇಬಲ್‌ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದ ದ್ವಿಚಕ್ರ ವಾಹನ ಸವಾರನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವೈಯಾಲಿಕಾವಲ್‌ ನಿವಾಸಿ ಪ್ರತೀಕ್‌ ಆರ್‌.ಶಿಂಧೆ(25) ಬಂಧಿತ. ಸದಾಶಿವನಗರ ಸಂಚಾರ ಪೊಲೀಸ್‌ ಠಾಣೆಯ ಕಾನ್‌ಸ್ಟೇಬಲ್‌ ಪಿ.ವೈ.ಶಿವರಾಜು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕೇಸ್, ಮೂರು ಎಫ್‌ಐಆರ್!, ಗೂಂಡಾ ಕಾಯ್ದೆಯಡಿ ಮಂಗಳೂರು ಹಿಂದೂ ಕಾರ್ಯಕರ್ತನ ಬಂಧನ!

ಏನಿದು ಘಟನೆ?:

ಸಂಚಾರ ಕಾನ್‌ಸ್ಟೇಬಲ್‌ ಶಿವರಾಜು ಅವರು ಮಾ.19ರಂದು ರಾತ್ರಿ 8.30ರ ಸುಮಾರಿಗೆ ಸದಾಶಿವನಗರ ಪೊಲೀಸ್‌ ಠಾಣೆ ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಎಂ.ಎಸ್‌.ರಾಮಯ್ಯ ಜಂಕ್ಷನ್‌ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಸ್ನೇಹಿತೆಯನ್ನು ಕೂರಿಸಿಕೊಂಡು ಆರೋಪಿ ಪ್ರತೀಕ್ ಬಂದಿದ್ದಾನೆ. ಈ ವೇಳೆ ಸಿಗ್ನಲ್‌ ಜಂಪ್‌ ಮಾಡಿದ ಆರೋಪಿಯು ಶಿವರಾಜು ಸಿಗ್ನಲ್‌ ಕಂಟ್ರೋಲ್‌ ಮಾಡುತ್ತಿದ್ದ ಐಲ್ಯಾಂಡ್‌ ಬಳಿಗೆ ಬಂದು ಏಕವಚನದಲ್ಲಿ ಸರಿಯಾಗಿ ಸಿಗ್ನಲ್‌ ನೀಡಲು ಬರುವುದಿಲ್ಲವಾ ಎಂದು ಶಿವರಾಜು ಅವರನ್ನು ಪ್ರಶ್ನಿಸಿದ್ದಾನೆ. ಈ ವೇಳೆ ಆತನ ಜತೆಯಲ್ಲಿ ಇದ್ದ ಯುವತಿ ‘ಹೀಗೆ ಮಾತನಾಡುವುದು ತಪ್ಪು. ಇಲ್ಲಿಂದ ಹೋಗೋಣ ಬಾ’ ಎಂದು ಕರೆದಿದ್ದಾಳೆ. ಆದರೂ ಆರೋಪಿ ಪ್ರತೀಕ್‌ ಅವಾಚ್ಯ ಶಬ್ಧಗಳಿಂದ ಶಿವರಾಜು ಅವರನ್ನು ನಿಂದಿಸಿದ್ದಾನೆ.

ಬೆನ್ನಟ್ಟಿ ಹಿಡಿದ ಪೇದೆ

ಶಿವರಾಜು ಅವರು ಪ್ರತೀಕ್‌ನನ್ನು ಹಿಡಿಯಲು ಮುಂದಾದಾಗ, ಆರೋಪಿ ಪ್ರತೀಕ್‌ ಕೈಗಳಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೂ ಬಿಡದ ಶಿವರಾಜು ಸ್ಥಳೀಯರ ನೆರವಿನಿಂದ ಆತನನ್ನು ಬೆನ್ನಟ್ಟಿ ಹಿಡಿದಿದ್ದರು. ಬಳಿಕ ಗಸ್ತು ಪೊಲೀಸರನ್ನು ಸ್ಥಳಕ್ಕೆ ಕರೆಸಿಕೊಂಡು ಆರೋಪಿಯನ್ನು ಒಪ್ಪಿಸಿದ್ದರು. ಈ ಸಂಬಂಧ ನೀಡಿದ ದೂರಿನ ಮೇರೆಗೆ ಸದಾಶಿವನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು