Bengaluru Crime: ಬೆಂಗಳೂರಲ್ಲಿ ಬೈಕ್‌ ಕದ್ದು ಉತ್ತರ ಕರ್ನಾಟಕದಲ್ಲಿ ಮಾರಾಟ: ಇಬ್ಬರ ಬಂಧನ

Published : Dec 05, 2022, 07:10 AM IST
Bengaluru Crime: ಬೆಂಗಳೂರಲ್ಲಿ ಬೈಕ್‌ ಕದ್ದು ಉತ್ತರ ಕರ್ನಾಟಕದಲ್ಲಿ ಮಾರಾಟ: ಇಬ್ಬರ ಬಂಧನ

ಸಾರಾಂಶ

 ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮನೆ ಎದುರು ಹಾಗೂ ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು, ಕೊಪ್ಪಳ, ಗದಗ, ರಾಯಚೂರು, ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆ ಆರೋಪಿಗಳು ಹ್ಯಾಂಡಲ್‌ ಲಾಕ್‌ ಮುರಿದು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದರು.

ಬೆಂಗಳೂರು (ಡಿ.5) : ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮನೆ ಎದುರು ಹಾಗೂ ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಮೂಲದ ರಘು ನಾಯ್‌್ಕ ಅಲಿಯಾಸ್‌ 220 ಮತ್ತು ದೌಲತ್‌ ಖಾನ್‌ ಬಂಧಿತರು. ಆರೋಪಿಗಳಿಂದ .16 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 24 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಆನಂದರಾವ್‌ ಎಂಬುವವರು ನ.12ರಂದು ಮಧ್ಯಾಹ್ನ ಜೆ.ಪಿ.ನಗರ 3ನೇ ಹಂತದ ಮಾಂಡೋವಿ ಶೋ ರೂಮ್‌ ಬಳಿ ತಮ್ಮ ದ್ವಿಚಕ್ರ ವಾಹನ ನಿಲ್ಲಿಸಿ ಕಾರ್ಯ ನಿಮಿತ್ತ ತೆರಳಿದ್ದರು. ಕೆಲ ಹೊತ್ತಿನ ಬಳಿಕ ವಾಪಾಸ್‌ ಬಂದಾಗ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bengaluru crime: ಬಾಡಿಗೆ ಮನೆ ಅಡ್ವಾನ್ಸ್‌ಗಾಗಿ ಕಳ್ಳತನಕ್ಕಿಳಿದ ದಂಪತಿ!

ಆರೋಪಿಗಳು ಬೆಳ್ಳಂದೂರಿನ ಕಾರ್ಮಿಕರ ಶೆಡ್‌ನಲ್ಲಿ ನೆಲೆಸಿದ್ದರು. ಇಬ್ಬರೂ ವೃತ್ತಿಪರ ಕಳ್ಳರಾಗಿದ್ದಾರೆ. ಈ ಹಿಂದೆ ಕೆಲ ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೆ ತಮ್ಮ ಹಳೇ ಚಾಳಿ ಮುಂದುವರೆಸಿದ್ದರು.

ಬೆಂಗಳೂರು, ಕೊಪ್ಪಳ, ಗದಗ, ರಾಯಚೂರು, ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆ ಆರೋಪಿಗಳು ಹ್ಯಾಂಡಲ್‌ ಲಾಕ್‌ ಮುರಿದು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದರು. ಕದ್ದ ದ್ವಿಚಕ್ರ ವಾಹನಗಳನ್ನು ಉತ್ತರ ಕರ್ನಾಟಕದ ಹಳ್ಳಿಗಳಿಗೆ ತೆಗೆದುಕೊಂಡು ಹೋಗಿ ಪರಿಚಿತರಿಗೆ ಕಡಿಮೆ ಹಣಕ್ಕೆ ಮಾರಾಟ ಮಾಡುತ್ತಿದ್ದರು. ತಿಂಗಳ ಬಳಿಕ ದಾಖಲೆ ನೀಡುತ್ತೇವೆ. ಬಳಿಕ ಉಳಿದ ಹಣ ಕೊಡಿ ಎಂದು ಹೇಳುತ್ತಿದ್ದರು. ನಂತರ ಆರೋಪಿಗಳು ಆ ಕಡೆಗೆ ಹೋಗುತ್ತಿರಲಿಲ್ಲ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Bengaluru Crime: ಟೆಕ್ಕಿಯ ಅಪಹರಿಸಿ 8 ಲಕ್ಷ ಸುಲಿದವರ ಸೆರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ