
ಬೆಂಗಳೂರು (ಆ.27): ಹುಟ್ಟುಹಬ್ಬದ ಸಂಭ್ರಮಾಚರಣೆ ಖುಷಿಯಲ್ಲಿ ಕೆರೆಯಲ್ಲಿ ಈಜಾಡಲು ಹೋಗಿ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಕಮ್ಮನಹಳ್ಳಿ ನಿವಾಸಿ ಸೋಲೋಮನ್ (28) ಹಾಗೂ ಬಿಟಿಎಂ ಲೇಔಟ್ ನಿವಾಸಿ ಅಭಿಷೇಕ್ (29) ಮೃತರು. ಮೂರು ದಿನಗಳ ಹಿಂದೆ ಚಿಕ್ಕಕಮ್ಮನಹಳ್ಳಿ ಕೆರೆಯಲ್ಲಿ ಕುಡಿದ ಮತ್ತಿನಲ್ಲಿ ಈ ಗೆಳೆಯರು ಈಜಾಡಲು ನೀರಿಗಿಳಿದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಸೋಲೊಮನ್ಗೆ ಮದುವೆ ನಿಶ್ಚಿತಾರ್ಥ: ಸೆಕೆಂಡ್ ಹ್ಯಾಂಡ್ ಕಾರ್ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದ ಸೋಲೋಮನ್ಗೆ ಇತ್ತೀಚೆಗೆ ಯುವತಿಯ ಜತೆ ಮದುವೆ ನಿಶ್ಚಿಯವಾಗಿತ್ತು. ಹೀಗಾಗಿ ಕೆಂಬತ್ತನಹಳ್ಳಿಯಲ್ಲಿ ನೆಲೆಸಿದ್ದ ಆತನ ಪೋಷಕರು, ಚಿಕ್ಕಕಮ್ಮನಹಳ್ಳಿಯಲ್ಲಿ ಮಗನಿಗೆ ಪ್ರತ್ಯೇಕವಾಗಿ ಮನೆ ಭೋಗ್ಯಕ್ಕೆ ಹಾಕಿಕೊಟ್ಟಿದ್ದರು. ಕಾಲ್ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಅಭಿಷೇಕ್, ಬಿಟಿಎಂ ಲೇಔಟ್ನಲ್ಲಿ ನೆಲೆಸಿದ್ದ. ಹಲವು ವರ್ಷಗಳಿಂದ ಇಬ್ಬರು ಆತ್ಮೀಯ ಸ್ನೇಹಿತರಾಗಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.
ಅಡ್ಡಾದಿಡ್ಡಿ ಚಲಿಸಿದ ಲಾರಿ, ಸಿಕ್ಕ ಸಿಕ್ಕ ವಾಹನಗಳಿಗೆ ಗುದ್ದಿ ಸರಣಿ ಅಪಘಾತ: ಸವಾರ ಬಲಿ
ಬುಧವಾರ ಸಂಜೆ ಸೋಲೋಮನ್ ಹುಟ್ಟುಹಬ್ಬದ ಆಚರಣೆಗೆ ಆತನ ಮನೆಗೆ ಅಭಿಷೇಕ್ ಬಂದಿದ್ದ. ಆ ವೇಳೆ ಮನೆಯಲ್ಲೇ ಇಬ್ಬರು ಮದ್ಯ ಸೇವಿಸಿದ್ದಾರೆ. ಬಳಿಕ ಮನೆ ಸಮೀಪದ ಕೆರೆಗೆ ಈಜಾಡಲು ತೆರಳಿದ್ದಾರೆ. ಆದರೆ ಹೂಳಿನಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಸೊಲೊಮನ್ ನಗರದ ಕೆಂಬತ್ತನಹಳ್ಳಿ ನಿವಾಸಿಯಾಗಿದ್ದು, ಮದುವೆ ಮಾಡಿಕೊಳ್ಳವ ಉದ್ದೇಶದಿಂದ ಚಿಕ್ಕಕಮ್ಮನಹಳ್ಳಿಯ ಮನೆಯೊಂದನ್ನು ಲೀಜ್ಗೆ ಪಡೆದು ವಾಸವಿದ್ದ ಎನ್ನಲಾಗಿದೆ. ಅದೇ ಮನೆಯಲ್ಲಿಯೇ ಬರ್ತ್ ಡೇ ಸೆಲೆಬ್ರೆಟ್ ಮಾಡುವ ಉದ್ದೇಶದಿಂದ ಮಹಾರಾಷ್ಟ್ರ ಮೂಲದ ಕಾಲ್ ಸೆಂಟರ್ ಉದ್ಯೋಗಿ ಅಭಿಷೇಕ್ ಮತ್ತು ಸ್ನೇಹಿತರು ಬಂದಿದ್ದಾರೆ. ಬರ್ತ್ ಡೇ ಪಾರ್ಟಿಯಲ್ಲಿ ಕಂಠಪೂರ್ತಿ ಕುಡಿದ ಬರ್ತ್ ಡೇ ಬಾಯ್ ಸೊಲೊಮನ್ ಮತ್ತು ಅಭಿಷೇಕ್ ಈಜಾಡಲು ಸಮೀಪದ ಕೆರೆಗೆ ತೆರಳಿದ್ದಾರೆ. ಆಗ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಲ್ಲದೆ ಕೆರೆಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿಲ್ಲ. ಕಳೆದ ಐದಾರು ತಿಂಗಳಿಂದ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ವಿದ್ಯಾರ್ಥಿ ಅಪಹರಿಸಿ ಹಲ್ಲೆ: ಎಸ್ಡಿಪಿಐ ಮುಖಂಡನ ಪುತ್ರ ಸಹಿತ 7 ಜನರ ಬಂಧನ
ಘಟನೆ ಸಂಬಂದ ಹುಳಿಮಾವು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದ್ರೆ ಬರ್ತ್ ಡೇ ಪಾರ್ಟಿ ನಶೆಯಿಂದಾಗಿ ತಡರಾತ್ರಿ ಕೆರೆಗಿಳಿದು ಯುವಕರು ತಮ್ಮ ಸಾವನ್ನು ತಾವೇ ತಂದುಕೊಂಡರಾ? ಅಥವಾ ಯಾರಾದರೂ ಕೊಲೆ ಮಾಡಿ ಕೆರೆಗೆ ಎಸೆದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ