
ಚಿಕ್ಕಮಗಳೂರು (ಡಿ.1): ರಾತ್ರಿ ವೇಳೆ ಮಂಕಿ ಕ್ಯಾಪ್ ಧರಿಸಿಕೊಂಡು ಬಂದ ವ್ಯಕ್ತಿಯಿಂದ ಬಿಜೆಪಿ ಜಿಲ್ಲಾ ಕಚೇರಿ ಕಾರ್ಯದರ್ಶಿ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಚಿಕ್ಕಮಗಳೂರಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ದುರ್ಗೆಶ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಲೆ, ಮೂಗು, ಕೈಗೆ ಗಂಭೀರ ಗಾಯಗಳಾಗಿವೆ. ರಾತ್ರಿ ವೇಳೆ ಸಿಸಿಟಿವಿಯಲ್ಲಿ ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಬಂದಿದ್ದ ದುಷ್ಕರ್ಮಿ. ಬಂದವನೇ ಏಕಾಏಕಿ ಹಲ್ಲೆ ನಡೆಸಿ ಪರಾರಿ. ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದ್ದ ದುರ್ಗೇಶ್ ರನ್ನ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಸೋನಿಯಾ, ರಾಹುಲ್, ಸುರ್ಜೇವಾಲಾ ವಕೀಲರಾಗಿರುವ ಸಿಎಂ ಸಿದ್ದರಾಮಯ್ಯನ ದಾರಿ ತಪ್ಪಿಸಿದ್ದಾರೆ!
ಆಸ್ಪತ್ರೆಗೆ ಸಿಟಿ ರವಿ ಭೇಟಿ:
ಹಲ್ಲೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಸಿಟಿ ರವಿ. ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ದುರ್ಗೆಶ್ ಆರೋಗ್ಯ ವಿಚಾರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಹೋಗಲ್ಲವೆಂದ ಸಿ.ಟಿ. ರವಿ ಮುನಿಸು ತಣಿಸಿದ್ರಾ ವಿಜಯೇಂದ್ರ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ