ಲಂಚ ಪಡೆದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಅರೆಸ್ಟ್‌: ಸುದೀರ್ಘ ಲೋಕಾಯುಕ್ತ ದಾಳಿ ಅಂತ್ಯ

Published : Mar 03, 2023, 08:38 AM ISTUpdated : Mar 03, 2023, 08:39 AM IST
ಲಂಚ ಪಡೆದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಅರೆಸ್ಟ್‌: ಸುದೀರ್ಘ ಲೋಕಾಯುಕ್ತ ದಾಳಿ ಅಂತ್ಯ

ಸಾರಾಂಶ

9 ಗಂಟೆ -30 ನಿಮಿಷಗಳವರೆಗೆ ನಡೆದ ಸುದೀರ್ಘ ಪರಿಶೀಲನೆ ಅಂತ್ಯಗೊಳಿಸಲಾಗಿದೆ. ನಿನ್ನೆ(ಗುರುವಾರ) ಸಂಜೆ 6-30 ಕ್ಕೆ ಲೋಕಾಯುಕ್ತ ದಾಳಿ ನಡೆದಿತ್ತು, ಇಂದು(ಶುಕ್ರವಾರ) ಬೆಳಗಿನ ಜಾವ 4 ಗಂಟೆಗೆ ಪರಿಶೀಲನೆ ಅಂತ್ಯವಾಗಿದೆ. 

ಬೆಂಗಳೂರು(ಮಾ.03):  ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಚೀಫ್ ಅಕೌಂಟೆಂಟ್ ಪ್ರಶಾಂತ್ ಮಾಡಾಳ್‌ ಲಂಚ ಸಮೇತ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಪ್ರಶಾಂತ್ ಕಚೇರಿ ಮೇಲೆ ನಡೆಸಿದ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. 9 ಗಂಟೆ -30 ನಿಮಿಷಗಳವರೆಗೆ ನಡೆದ ಸುದೀರ್ಘ ಪರಿಶೀಲನೆ ಅಂತ್ಯಗೊಳಿಸಲಾಗಿದೆ. ನಿನ್ನೆ(ಗುರುವಾರ) ಸಂಜೆ 6-30 ಕ್ಕೆ ಲೋಕಾಯುಕ್ತ ದಾಳಿ ನಡೆದಿತ್ತು, ಇಂದು(ಶುಕ್ರವಾರ) ಬೆಳಗಿನ ಜಾವ 4 ಗಂಟೆಗೆ ಪರಿಶೀಲನೆ ಅಂತ್ಯವಾಗಿದೆ ಅಂತ ತಿಳಿದು ಬಂದಿದೆ. ಶಾಸಕನ ಪುತ್ರ ಸೇರಿ ನಾಲ್ಕು ಜನರನ್ನ  ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.  

ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಗ ಪ್ರಶಾಂತ್‌ 40 ಲಕ್ಷ ಸಮೇತ ಲೋಕಾ ಬಲೆಗೆ: BWSSB ಚೀಫ್‌ ಅಕೌಂಟೆಂಟ್‌ ಆಗಿ ಸೇವೆ

ಪ್ರಶಾಂತ್  ಮಾಡಾಳ್, ಸಿದ್ದೇಶ್, (ಸಂಬಂಧಿ), ಸುರೇಂದ್ರ (ಅಕೌಂಟೆಂಟ್), ನಿಕೋಲಸ್ (ದುಡ್ಡು ಕೊಡಲು ಬಂದವನು) ಹಾಗೂ ಗಂಗಾಧರ್(ದುಡ್ಡು ಕೊಡಲು ಬಂದವನು) ಅವರನ್ನ ಬಂಧಿಸಿಸಲಾಗಿದೆ.  M ಸ್ಟುಡಿಯೋದಲ್ಲಿರುವ ದಾಖಲಾತಿಗಳು, ನಗದನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನ ಬಂಧಿಸಿ ಕರೆದೊಯ್ದಿದ್ದಾರೆ ಲೋಕಾಯುಕ್ತ ಅಧಿಕಾರಿಗಳು. ಇದುವರೆಗೆ ಒಟ್ಟು ಒಂದು ಮುಕ್ಕಾಲು ಕೋಟಿ ನಗದನ್ನ ವಶಕ್ಕೆ ಪಡೆಯಲಾಗಿದೆ. 
ಇಂದು ಲೋಕಾಯುಕ್ತ ನ್ಯಾಯಾಲಯದ ಮುಂದೆ ಹಾಜರು ಪಡೆಸಿ ಅರೋಪಿಗಳ ವಶಕ್ಕೆ ಪಡೆಯಲಿದ್ದಾರೆ ಅಧಿಕಾರಿಗಳು. ಹಣದ ಮೂಲ ಮತ್ತು ಯಾವ ಯಾವ ಟೆಂಡರ್ ಗಾಗಿ ಹಣ ಪಡೆಯಲಾಗಿತ್ತು ಎಂದು ತನಿಖೆಯನ್ನ ಮುಂದುವರಿಸಿದ್ದಾರೆ. 

ಶಾಸಕರ ಮನೆಯಲ್ಲಿ ಮುಂದುವರಿದ ಪರಿಶೀಲನೆ 

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಒಡೆತನದ  ಮಾನ್ಷಿಯನ್ ಮೇಲೆ ದಾಳಿ ಮುಂದುವರೆದಿದೆ. ಡಿವೈ ಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ಮುಂದುವರೆಸಲಾಗಿದೆ. 

ಇನ್ನು ಕೆಎಸ್‌ಡಿಎಲ್ ಎಂಡಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಕೆಎಸ್‌ಡಿಎಲ್ ಎಂಡಿ ಮಹೇಶ್ ಮನೆಯನ್ನ ಅಧಿಕಾರಿಗಳು ಸರ್ಚ್ ಮಾಡಿದ್ದಾರೆ. ತಡರಾತ್ರಿ ಬನಶಂಕರಿ ಬಳಿ ಇರೋ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದ್ರೆ ಮಹೇಶ್ ಅವರ ಮನೆಯಲ್ಲಿ ಅಂತಹ ಯಾವುದೇ ದಾಖಲೆಗಳು, ಹಣಗಳು ಪತ್ತೆಯಾಗಿಲ್ಲ ಅಂತ ತಿಳಿದು ಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!