ಬೆಂಗಳೂರು: ಜೈಲಿಂದಲೇ ಆಶ್ಲೀಲ ಫೋಟೋ ಕಳುಹಿಸಿ ಬ್ಲ್ಯಾಕ್ಮೇಲ್

Published : Feb 16, 2024, 06:44 AM IST
ಬೆಂಗಳೂರು: ಜೈಲಿಂದಲೇ ಆಶ್ಲೀಲ ಫೋಟೋ ಕಳುಹಿಸಿ ಬ್ಲ್ಯಾಕ್ಮೇಲ್

ಸಾರಾಂಶ

ಯಲಹಂಕ ಉಪನಗರದ ರೌಡಿ ಮನೋಜ್ ಅಲಿಯಾಸ್‌ ಕೆಂಚ ಹಾಗೂ ಆತನ ಸಹಚರ ಕಾರ್ತಿಕ್ ಈ ಕೃತ್ಯ ಎಸಗಿದ್ದು, ಸಂತ್ರಸ್ತೆ ದೂರು ಆಧರಿಸಿ ನ್ಯೂಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ತನಿಖೆಯನ್ನು ಸಿಸಿಬಿ ವಹಿಸಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಆರೋಪಿಯನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. 

ಬೆಂಗಳೂರು(ಫೆ.16): ಪರಪ್ಪನ ಅಗ್ರಹಾರ ಕಾರಾಗೃಹದಿಂದಲೇ ಮಹಿಳೆಯೊಬ್ಬರಿಗೆ ಅವರ ಪುತ್ರಿಯ ಮಾರ್ಫಿಂಗ್‌ ಆಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ರೌಡಿ ಬ್ಲ್ಯಾಕ್‌ಮೇಲ್ ಮಾಡಿರುವ ಘಟನೆ ಯಲಹಂಕ ನ್ಯೂಟೌನ್‌ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಯಲಹಂಕ ಉಪನಗರದ ರೌಡಿ ಮನೋಜ್ ಅಲಿಯಾಸ್‌ ಕೆಂಚ ಹಾಗೂ ಆತನ ಸಹಚರ ಕಾರ್ತಿಕ್ ಈ ಕೃತ್ಯ ಎಸಗಿದ್ದು, ಸಂತ್ರಸ್ತೆ ದೂರು ಆಧರಿಸಿ ನ್ಯೂಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ತನಿಖೆಯನ್ನು ಸಿಸಿಬಿ ವಹಿಸಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಆರೋಪಿಯನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಶ್ಲೀಲ ಫೋಟೋ ಇದೆ ಎಂದು ₹65 ಲಕ್ಷ ಸುಲಿಗೆ! ಹುಡುಗಿಯಿಂದಲೂ ಲಕ್ಷ ಲಕ್ಷ ಸುಲಿದ ಮಿತ್ರದ್ರೋಹಿಗಳು!

ಕೆಂಚ ವೃತ್ತಿಪರ ಕ್ರಿಮಿನಲ್ ಆಗಿದ್ದು, ಆತನ ಮೇಲೆ ಕೊಲೆ ಯತ್ನ, ಸುಲಿಗೆ ಹಾಗೂ ದರೋಡೆ ಸೇರಿದಂತೆ ಇತರೆ ಪ್ರಕರಣಗಳು ದಾಖಲಾಗಿವೆ. ಐದು ತಿಂಗಳ ಹಿಂದೆ ಯುವಕನ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಕೆಂಚನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಯಲಹಂಕ ಉಪನಗರ ಠಾಣೆ ಪೊಲೀಸರು ಅಟ್ಟಿದ್ದರು. ಅಂದಿನಿಂದ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಕೆಂಚ, ಸೆರೆಮನೆಯಲ್ಲೇ ಕುಳಿತೇ ಬ್ಲ್ಯಾಕ್‌ಮೇಲ್ ಮೂಲಕ ಹಣ ಸುಲಿಗೆ ಮಾಡಿದ್ದಾನೆ.
ಕೆಲ ತಿಂಗಳ ಹಿಂದೆ ಯಲಹಂಕ ಉಪನಗರ ನಿವಾಸಿಯಾದ ಸಂತ್ರಸ್ತೆ ತಾಯಿಯ ವಾಟ್ಸಾಪ್‌ಗೆ ಅವರ ಪುತ್ರಿಯ ತಿರುಚಿದ ಆಶ್ಲೀಲ ಫೋಟೋವೊಂದನ್ನು ಕಳುಹಿಸಿದ್ದ. ಆ ಫೋಟೋ ನೋಡಿದ ಆತಂಕಗೊಂಡ ಅವರು, ತಕ್ಷಣವೇ ಕೆಂಚನಿಗೆ ಕರೆ ಮಾಡಿದ್ದರು. ಆಗ ನನ್ನ ಬಳಿ ಹಲವು ನಿಮ್ಮ ಮಗಳ ಬೆತ್ತಲೆ ಫೋಟೋಗಳಿವೆ. ನಾನು ಹೇಳಿದಂತೆ ನೀವು ಕೇಳದೆ ಹೋದರೆ ಅ‍ವುಗಳನ್ನು ನಿಮ್ಮ ಅಳಿಯನಿಗೂ ಕಳುಹಿಸುತ್ತೇನೆ ಎಂದು ಬೆದರಿಸಿದ್ದ. ಇದಕ್ಕೆ ಹೆದರಿದ ಸಂತ್ರಸ್ತೆ ತಾಯಿ, ಕೆಂಚನಿಗೆ ₹40 ಸಾವಿರ ನೀಡಿದ್ದರು.

ಇದಾದ ನಂತರ ಸುಮ್ಮನಿದ್ದ ಕೆಂಚ, ಮತ್ತೆ ಫೆ.9 ರಂದು ಸಂತ್ರಸ್ತೆಗೆ ಕಾಟ ಕೊಡಲಾರಂಭಿಸಿದ್ದ. ಅಂದು ತನ್ನ ಸಹಚರ ಕಾರ್ತಿಕ್ ಮೂಲಕ ಸಂತ್ರಸ್ತೆ ತಾಯಿಗೆ ಕರೆ ಮಾಡಿಸಿದ ಕೆಂಚ, ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ. ಇದಾದ ನಂತರ ಫೆ.12ರಂದು ಮತ್ತೆ ಕರೆ ಮಾಡಿ ಹಣ ಕೊಡುವಂತೆ ಕೆಂಚ ಬೆದರಿಕೆ ಹಾಕಿದ್ದ. ಈ ರೌಡಿ ಉಪಟಳ ಸಹಿಸಲಾರದೆ ಯಲಹಂಕ ಉಪನಗರ ಠಾಣೆಗೆ ಸಂತ್ರಸ್ತೆ ತಾಯಿ ದೂರು ನೀಡಿದ್ದಾರೆ. ತಮ್ಮ ಮಗಳ ಭಾವಚಿತ್ರವನ್ನು ಅಪರಿಚಿತ ದೇಹಕ್ಕೆ ಜೋಡಿಸಿದ್ದಾನೆ ಎಂದು ದೂರಿದ್ದಾರೆ.

ಜೈಲಿನಲ್ಲಿ ರೌಡಿಗೆ ಮೊಬೈಲ್: ತನಿಖೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ರೌಡಿ ಕೆಂಚನಿಗೆ ಮೊಬೈಲ್ ಪೂರೈಸಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಜೈಲಿನಿಂದಲೇ ಸಂತ್ರಸ್ತೆಗೆ ಕೆಂಚ ಕರೆ ಮಾಡಿರುವುದು ತನಿಖೆಯಲ್ಲಿ ಖಚಿತವಾಗಿದೆ. ಹೀಗಾಗಿ ಆತನಿಗೆ ಅಕ್ರಮವಾಗಿ ಮೊಬೈಲ್ ಬಳಕೆಗೆ ಅವಕಾಶ ನೀಡಿದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?