'ನೀನು ಮುಸಲ್ಮಾನಾ.. ಥೂ' ಎಂದ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ ವಿರುದ್ಧ ಧರ್ಮ ನಿಂದನೆ ಕೇಸ್!

Published : Nov 01, 2023, 09:20 AM IST
'ನೀನು ಮುಸಲ್ಮಾನಾ.. ಥೂ' ಎಂದ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ ವಿರುದ್ಧ ಧರ್ಮ ನಿಂದನೆ ಕೇಸ್!

ಸಾರಾಂಶ

ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಮೂರನೇ ಪೊಲೀಸ್ ದೂರು ದಾಖಲಾಗಿದ್ದು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ಬೆಂಗಳೂರು (ನ.01): ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಮೂರನೇ ಪೊಲೀಸ್ ದೂರು ದಾಖಲಾಗಿದ್ದು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೊಲೀಸ್ ಅಧಿಕಾರಿ ಮುಸ್ಲಿಂ ಎಂದು ಧರ್ಮವನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಆ್ಯಡಂ ಬಿದ್ದಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ಧರ್ಮ ನಿಂದನೆ ಪ್ರಕರಣ ದಾಖಲಿಸಲಾಗಿದೆ.

ಕಳೆದ ವಾರ, ಟ್ರಾಫಿಕ್ ಪೊಲೀಸರು ಕುಡಿದು ವಾಹನ ಚಾಲನೆ ಮಾಡಿದ ಮತ್ತು ರೋಡ್ ರೇಜ್ ಪ್ರಕರಣಗಳಲ್ಲಿ ಆ್ಯಡಂ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದರು.  ಈಗ ಆ್ಯಡಂ ಪೊಲೀಸ್ ಅಧಿಕಾರಿಯ ಧರ್ಮವನ್ನು ಅವಮಾನಿಸಿದ ವಿಡಿಯೋ ವೈರಲ್ ಆಗಿದದ್ದು, ಈ ಸಂಬಂಧ ಮತ್ತೊಂದು ಕೇಸ್ ದಾಖಲಿಸಲಾಗಿದೆ. ಎಲ್ಲಾ ಮೂರು ಪ್ರಕರಣಗಳು ಒಂದೇ ಘಟನೆಗೆ ಸಂಬಂಧಿಸಿವೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಗೆ ಸಹಾಯಕ ಸಬ್ ಇನ್ಸ್‌ಪೆಕ್ಟರ್ 45 ವರ್ಷದ ಗೌಸ್ ಪಾಷಾ ಆ್ಯಡಂ ವಿರುದ್ಧ ದೂರು ನೀಡಿದ್ದಾರೆ.  

ಅಕ್ಟೋಬರ್ 25ರ ರಾತ್ರಿ ಯಲಹಂಕದ ರೈಲ್ ವೀಲ್ ಫ್ಯಾಕ್ಟರಿ ಬಳಿ ಆ್ಯಡಂ ಬಿದ್ದಪ್ಪ ಅವರು ಅಪಾಯಕಾರಿಯಾಗಿ ಕಾರು ಚಲಾಯಿಸಿಕೊಂಡು ಬಂದು ರಾಹುಲ್ ಎಂಬಾತನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದರು. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಕಾರು ಚಲಾಯಿಸುತ್ತಿದ್ದ ಆರೋಪಿ ಬಳಿಗೆ ಬಂದು ಪ್ರಶ್ನಿಸಿದಾಗ, ಆರೋಪಿ ಆ್ಯಡಂ ಬಿದ್ದಪ್ಪ ಅಧಿಕಾರಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ಈ ವೇಳೆ ಆ್ಯಡಂ ‘ಗೌಸ್, ಗೌಸ್ ಪಾಷಾ, ಒಬ್ಬ ಮುಸ್ಲಿಂ’ ಎನ್ನುತ್ತಾ ಪೋಲೀಸರ ಮೇಲೆ ಉಗುಳುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. 

ಕಾಂಗ್ರೆಸ್ ಮನೆಯೊಂದು ನೂರು ಬಾಗಿಲಿನಂತಾಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್

ಆ್ಯಡಂ ಕುಡಿದು ಗಲಾಟೆ ಮಾಡಿರುವುದು ಇದೇ ಮೊದಲೇನಲ್ಲ, ಈ ಹಿಂದೆ ಕೂಡ ಇದೇ ರೀತಿ ಪ್ರಕರಣದಲ್ಲಿ ಸಿಲುಕಿ ಬಂಧನವಾಗಿತ್ತು. ಸ್ಯಾಂಡಲ್​ವುಡ್​ ಖ್ಯಾತ ನಟಿಯೊಬ್ಬರಿಗೆ ಕಳೆದ ವರ್ಷ ಫೆಬ್ರವರಿ ತಿಂಗಳ ಮಧ್ಯರಾತ್ರಿ ಆ್ಯಡಂ ಬಿದ್ದಪ್ಪ ಅಶ್ಲೀಲ ಮೆಸೇಜ್ ಕಳಿಸಿದ್ದಾರೆ ಎಂದು ದೂರು ನೀಡಿ, ಬಂಧನವಾಗಿದ್ದನು. ಈತ ನಟ ಅಭಿಷೇಕ್‌ ಅಂಬರೀಶ್ ಅವರ ಪತ್ನಿ ಅವಿವಾ ಬಿದ್ದಪ್ಪ ಅವರ ಸಹೋದರ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ