
ಬೆಳಗಾವಿ, (ಅ.27): ರಾಜ್ಯದ ಗಡಿಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದ ಬಳಿ ದೂಧಗಂಗಾ ನದಿಯ ದಾನವಾಡ-ಯಕ್ಸಂಬಾ ಸೇತುವೆಯ ಕೆಳಭಾಗದಲ್ಲಿ ಅಪರಿಚಿತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಂದು ಶವವನ್ನು ನದಿ ತೀರಕ್ಕೆ ಎಸೆದು ಆಗಂತುಕರು ಪರಾರಾಗಿದ್ದಾರೆ.
ಸುಮಾರು 35ರಿಂದ 38 ವರ್ಷ ವಯಸ್ಸಿನ ಈ ಯುವಕನ ಹಿನ್ನೆಲೆ ಇನ್ನೂ ತಿಳಿದುಬಂದಿಲ್ಲ. ಬೆಳ್ಳಂ ಬೆಳಗ್ಗೆ ಗ್ರಾಮಸ್ಥರು ಶವವನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.ಘಟನೆಯ ಸ್ಥಳವು ದೂಧಗಂಗಾ ನದಿಯ ಗಡಿಯ ಭಾಗವಾಗಿದ್ದು, ಯಕ್ಸಂಬಾ ಗ್ರಾಮದಿಂದ ಕೆಲವೇ ಕಿ.ಮೀ. ದೂರದಲ್ಲಿದೆ.
ಇದನ್ನೂ ಓದಿ: ಬೆಂಗಳೂರು: ಅಕ್ರಮವಾಗಿ ಪಿಸ್ತೂಲ್ ಇಟ್ಟುಕೊಂಡಿದ್ದ ಕ್ರಿಮಿನಲ್ ರೋಷನ್ ಅಹಮದ್ ಬಂಧನ
ಬೆಳಿಗ್ಗೆ ಸುಮಾರು 6 ಗಂಟೆಗೆ ಸ್ಥಳೀಯರು ಸೇತುವೆಯ ಕೆಳಗೆ ಮುಳುಗಿದ ಶವವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಗ್ರಾಮಸ್ಥರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಸದಲಗಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕೊಲೆಯ ಹಿನ್ನೆಲೆ ಏನಾದರೂ ರಾಜಕೀಯ ಅಥವಾ ಆರ್ಥಿಕ ಕಾರಣಗಳಿವೆಯೇ? ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ