Bomb blast: ಭಟ್ಕಳಕ್ಕೆ ಬಂದಿತ್ತು ಬಾಂಬ್‌ ಬ್ಲಾಸ್ಟ್ ಬೆದರಿಕೆ ಲೆಟರ್: ಇನ್ನೂ ಸಿಗದ ಆರೋಪಿ

Published : Jan 05, 2023, 02:47 PM ISTUpdated : Jan 05, 2023, 05:12 PM IST
Bomb blast: ಭಟ್ಕಳಕ್ಕೆ ಬಂದಿತ್ತು ಬಾಂಬ್‌ ಬ್ಲಾಸ್ಟ್ ಬೆದರಿಕೆ ಲೆಟರ್: ಇನ್ನೂ ಸಿಗದ ಆರೋಪಿ

ಸಾರಾಂಶ

ಚನ್ನೈ, ಧರ್ಮಸ್ಥಳ, ಭಟ್ಕಳಕ್ಕೆ ಬಾಂಬ್‌ ಬ್ಲಾಸ್ಟ್‌ ಬೆದರಿಕೆ ಪತ್ರ ರವಾನೆ ಹೊಸ ವರ್ಷ, ಕ್ರಿಸ್‌ಮಸ್‌ ವೇಳೆ ಬಾಂಬ್‌ ಬ್ಲಾಸ್ಟ್‌ ಮಾಡುವುದಾಗಿ ಉಲ್ಲೇಖ ಉರ್ದು ಹಾಗೂ ಇಂಗ್ಲೀಷ್‌ ಭಾಷೆಯಲ್ಲಿ ಲೆಟರ್ ಬರೆದು ರವಾನೆ

ಉತ್ತರಕನ್ನಡ (ಜ.05): ರಾಜ್ಯದ ಮಂಗಳೂರಿನಲ್ಲಿ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ ಕುಕ್ಕರ್‌ ಬಾಂಬ್‌ ಸ್ಪೋಟಿಸಿದ ಬೆನ್ನಲ್ಲೇ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ದಿನಾಚರಣೆ ವೇಳೆ ಬಾಂಬ್‌ ಬ್ಲಾಸ್ಟ್‌ ಘಟನೆಗಳು ನಡೆಯದಂತೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಆದರೂ, ಕಡಲ ತೀರದ ಪ್ರದೇಶ ಭಟ್ಕಳದಲ್ಲಿ ಹೊಸ ವರ್ಷದ ವೇಳೆ ಬಾಂಬ್ ಬ್ಲಾಸ್ಟ್ ಮಾಡುವ ಬೆದರಿಕೆಯ ಪತ್ರವೊಂದು ಬಂದಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಡಿ.16-17ರ ಅಂದಾಜಿಗೆ ಭಟ್ಕಳ ಪೊಲೀಸ್‌ ಠಾಣೆಗೆ ಬಂದಿದ್ದ ಓಪನ್ ಕಾರ್ಡ್ ಲೆಟರ್ ಅನ್ನು ಪೊಲೀಸರು ತೆರೆದು ನೋಡಿದ್ದರು. ಪತ್ರದಲ್ಲಿ ಕ್ರಿಸ್‌ಮಸ್‌ ದಿನವಾದ ಡಿ.25ರಂದು  ಭಟ್ಕಳದಲ್ಲಿ ಬ್ಲಾಸ್ಟ್ ಮಾಡುವುದಾಗಿ ಲೆಟರ್‌ನಲ್ಲಿ ಬರೆದಿತ್ತು. ಆದರೆ, ಆರೋಪಿ ಉರ್ದು ಹಾಗೂ ಇಂಗ್ಲೀಷ್‌ನಲ್ಲಿ ಎರಡೂ ಸೇರಿ ಅರ್ಧಂಬರ್ಧ ಭಾಷೆಯಲ್ಲಿ ಲೆಟರ್ ಬರೆದಿದ್ದನು. ರಾಜ್ಯದಲ್ಲಿ ಭಟ್ಕಳ ಪೊಲೀಸ್ ಠಾಣೆಗೆ ಒಂದು ಪತ್ರ ಹಾಗೂ ಇನ್ನೊಂದು ಪತ್ರ ತಮಿಳುನಾಡಿನ ಪುಲಿಯಂತೋಪ್ ಕಮಿಷನರೇಟ್ ವ್ಯಾಪ್ತಿಗೆ ಪತ್ರ ರವಾನೆ ಆಗಿತ್ತು. ಮತ್ತೊಂದು ಪತ್ರ ಧರ್ಮಸ್ಥಳಕ್ಕೆ ಓಪನ್ ಕಾರ್ಡ್ ಲೆಟರ್ ಕಳುಹಿಸಿದ್ದನು.

Bengaluru: ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಬೆದರಿಕೆ ಹಾಕಿದ್ದ ವಿದ್ಯಾರ್ಥಿ ಜೈಲು ಪಾಲು

ಚನ್ನೈ ಮೂಲದ ವ್ಯಕ್ತಿಯಿಂದ ಬ್ಲಾಸ್ಟ್‌ ಸಂಚು: ಪೊಲೀಸ್‌ ಠಾಣೆಗೆ ಬಾಂಬ್‌ ಬ್ಲಾಸ್ಟ್‌ ಪತ್ರವನ್ನು ಬರೆದಿದ್ದ ಆರೋಪಿಯನ್ನು ಚೆನ್ನೈ ಮೂಲದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆರೋಪಿ ಧರ್ಮಸ್ಥಳಕ್ಕೆ ಬರುವ ಮುನ್ನ ಸುಳ್ಯ, ಸುಬ್ರಹ್ಮಣ್ಯ ಪ್ರದೇಶದಲ್ಲೂ ತಿರುಗಾಡಿದ್ದನು. ಇನ್ನು ಲೆಟರ್ ಕಂಡ ಕೂಡಲೇ ಕಾರ್ಯಾಚರಣೆ ನಡೆಸಿದ್ದ ಭಟ್ಕಳ ಪೊಲೀಸರಿಗೆ, ಆರೋಪಿ ಸುಳ್ಯ ಮೂಲದ ತೇಜುಕುಮಾರ್ ಎಂಬವರ ದಾಖಲೆಗಳನ್ನು ಸಿಮ್ ಕಾರ್ಡ್ ಖರೀದಿಸಿರುವುದು ಪತ್ತೆಯಾಗಿದೆ. ತೇಜು ಕುಮಾರ್ ಅವರ ವಿಳಾಸ ಇರುವ ದಾಖಲೆ ಮತ್ತು ಆರೋಪಿಯ ಫೋಟೊ ಬಳಸಿ ಸಿಮ್ ಖರೀದಿ ಮಾಡಿದ್ದನು. ಈ ತೇಜುಕುಮಾರ್‌ ಸುಬ್ರಹ್ಮಣ್ಯದಲ್ಲಿ ರಿಕ್ಷಾ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. 

ಆರೋಪಿಗಾಗಿ ಮುಂದುವರೆದ ಶೋಧ: ಇನ್ನು ಬಾಂಬ್‌ ಬ್ಲಾಸ್ಟ್‌ ಆರೋಪಿಗಾಗಿ ಭಟ್ಕಳ ಹಾಗೂ ಚೆನ್ನೈ ಪೊಲೀಸರಿಂದ ಹುಡುಕಾಟ ಮುಂದುವರಿದಿದೆ. ಈ ಹಿಂದೆ ಚೆನ್ನೈನ ಲ್ಯಾಪ್‌ಟಾಪ್ ರಿಪೇರಿ ಅಂಗಡಿಯೊಂದರಲ್ಲಿ ಆರೋಪಿ ತನ್ನ ಲ್ಯಾಪ್‌ಟಾಪ್ ನೀಡಿದ್ದನು. ಆದರೆ, ದುರಸ್ತಿ ಮಾಡುವ ಉದ್ದೇಶದಿಂದ ಅಂಗಡಿಯವ ಲ್ಯಾಪ್‌ಟಾಪ್‌ಗೆ ಪಾಸ್‌ವರ್ಡ್ ಹೇಳುವಂತೆ ಕೇಳಿದ್ದರೂ, ಅದನ್ನು ಹೇಳದೇ ಮುಚ್ಚಿಟ್ಟಿದ್ದನು. ಅಂಗಡಿಯವನಿಗೆ ಡೌಟ್ ಬಂದು ಪಾಸ್‌ವರ್ಡ್ ನೀಡದಿದ್ರೆ ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದನು. ಇದನ್ನು ಕೇಳಿ ಅಂಗಡಿಯವನಿಗೆ ಕೊಲೆ ಬೆದರಿಕೆ ಹಾಕಿ ಮಕ್ಕಳನ್ನು ಕಿಡ್ನ್ಯಾಪ್ ಮಾಡುವುದಾಗಿ ಬೆದರಿಸಿದ್ದನು. 

ಪಂಜಾಬ್ ಸಿಎಂ ಮನೆ ಮುಂದೆ ಬಾಂಬ್ : ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ

ಲ್ಯಾಪ್‌ಟಾಪ್‌ ಪಾಸ್ವರ್ಡ್ ಕೇಳಿದರೆ ಜೀವ ಬೆದರಿಕೆ: ದುರಸ್ತಿ ಅಂಗಡಿಯವನಿಂದ ತನ್ನ ಲ್ಯಾಪ್‌ಟಾಪ್ ವಾಪಾಸ್ ಪಡೆದಿದ್ದ ಆರೋಪಿ, ಪೊಲೀಸರು ತನಿಖೆ ಮಾಡುವಾಗ ಅಂಗಡಿಗೆ ನೀಡಿದ್ದ ನಂಬರ್ ಹಾಗೂ ಧರ್ಮಸ್ಥಳದಲ್ಲಿ ಕಾಣಿಸಿದ್ದ ನಂಬರ್ ಒಂದೇ ಆಗಿತ್ತು. ಈ ನಂಬರ್ ಆಧಾರದ ಮೇಲೆ ತನಿಖೆ ಮಾಡುವಾಗ ಸುಳ್ಳು ವಿಳಾಸ ನೀಡಿ ಖರೀದಿಸಿತ್ತು ತಿಳಿದುಬಂದಿತ್ತು. ತಂಡ ರಚಿಸಿ ಆರೋಪಿಯ ಬಂಧನಕ್ಕಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಟ್ಕಳ, ಮಂಗಳೂರು, ಉಡುಪಿ ಕಡಲ ತೀರ ಪ್ರದೇಶಗಳು ಸೇರಿ ವಿವಿಧ ಪ್ರದೇಶಗಳಲ್ಲಿ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ದಿನಾಚರಣೆ ವೇಳೆ ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?