ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿ ಮದುವೆ ನಿರಾಕರಣೆ: ಪ್ರಿಯಕರ ಆತ್ಮಹತ್ಯೆ

Published : May 30, 2022, 04:25 PM IST
ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿ ಮದುವೆ ನಿರಾಕರಣೆ:  ಪ್ರಿಯಕರ ಆತ್ಮಹತ್ಯೆ

ಸಾರಾಂಶ

"ನನಗೆ ಗಾನವಿ ಮೋಸ ಮಾಡಿದಳು ಎಂದು ವಾಯ್ಸ್ ಮೆಸೇಜ್ ಕಳುಹಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು (ಮೇ 30): ಪ್ರೀತಿಸಿದ ಹುಡುಗಿ ಮದುವೆಗೆ ನಿರಾಕರಿಸಿದ ಹಿನ್ನೆಲೆ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಎನ್.ಆರ್. ಪುರ ತಾಲೂಕಿನ ಮುತ್ತಿನಕೊಪ್ಪ ಬಳಿಯ ಶಂಕರಪುರದಲ್ಲಿ ನಡೆದಿದೆ. ನೇಣುಬಿಗಿದುಕೊಂಡು ಚೇತನ್ (31) ಸಾವಿಗೆ ಶರಣಾಗಿದ್ದಾರೆ. "ನನಗೆ ಗಾನವಿ ಮೋಸ ಮಾಡಿದಳು ಎಂದು ವಾಯ್ಸ್ ಮೆಸೇಜ್ ಕಳುಹಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. "ನಾನು ಗಾನವಿ ಒಂಬತ್ತು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದೀವಿ,  ನನ್ನಿಂದ ಗಾನವಿ ನಾಲ್ಕು ಲಕ್ಷ ಹಣವನ್ನು ಕಿತ್ತುಕೊಂಡಿದ್ದಾಳೆ" ಎಂದು ವಾಯ್ಸ್ ಮೆಸೇಜಿನಲ್ಲಿ ಚೇತನ್ ಆರೋಪ ಮಾಡಿದ್ದಾರೆ. 

ಅಲ್ಲದೇ  ಚೇತನ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ. "ನನ್ನ ಸಾವಿಗೆ ನ್ಯಾಯ ಸಿಗಬೇಕೆಂದರೆ ಆಕೆಗೆ ಶಿಕ್ಷೆಯಾಗಬೇಕು,  ನನ್ನ ಚಿತೆಗೆ ಗಾನವಿ ಬೆಂಕಿ ಇಡಬೇಕು, ಆಕೆ ಬರುವತನಕ ಹೆಣವನ್ನು ಕೆಳಗಿಳಿಸಬೇಡಿ. ನನಗೆ ಮಾನಸಿಕ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ" ಎಂದು ಸಂಬಂಧಿಕರಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಚೇತನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ  ಎನ್.ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

ಇದನ್ನೂ ಓದಿ: Chitradurga: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ ಪತ್ನಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ