
ಹಾಸನ (ಡಿ.24): ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯಶವಂತ್- ಗೌರಿ ಎಂಬವರ ಮಗ, ನಾಲ್ಕುವರೆ ವರ್ಷದ ರೋಷನ್ ಮೃತಪಟ್ಟ ಬಾಲಕ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆತರಲು ಮನೆಗಳಿಗೆ ಹೋದಾಗ ನಿನ್ನೆ (ಶುಕ್ರವಾರ) ಘಟನೆ ನಡೆದಿದೆ.
ಹಾವು ಕಚ್ಚಿದ ತಕ್ಷಣ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದೆ ಹೋದುದರಿಂದ, ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಗುವನ್ನು ತಂದೆ ಬೈಕ್ನಲ್ಲೇ ಕರೆತಂದಿದ್ದಾರೆ. ಹೆತ್ತೂರಿನಿಂದಲೂ ಸಕಲೇಶಪುರಕ್ಕೆ ಆಂಬ್ಯುಲೆನ್ಸ್ ಸಿಕ್ಕಿಲ್ಲ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದೇ ಬಾಲಕ ಸಾವನ್ನಪ್ಪಿದ್ದಾನೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಕಲೇಶಪುರಕ್ಕೆ ಬೈಕ್ನಲ್ಲಿ ಬಾಲಕನನ್ನು ಕೊಂಡೊಯ್ಯುತ್ತಿದ್ದಾಗ ಅರ್ಧ ದಾರಿಯಲ್ಲಿ ಆಂಬ್ಯುಲೆನ್ಸ್ ಎದುರಾಗಿದೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ಕಶ ಶಬ್ದ ಮಾಡುವ ವಾಹನಗಳ ಸೈಲೆನ್ಸರ್ಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆ
ಆಕಸ್ಮಿಕ ಗುಂಡು ಹಾರಿ ಬಾಲಕ ಸಾವು: ತೋಟದ ಮನೆಯೊಂದರಲ್ಲಿ ಸುರಕ್ಷಿತೆಗಾಗಿ ಇಟ್ಟುಕೊಂಡಿದ್ದ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಓರ್ವ ಬಾಲಕ ಸಾವನ್ನಪ್ಪಿರುವ ಧಾರುಣ ಘಟನೆ ತಾಲೂಕಿನ ಗಡಿಭಾಗ ಕಾಡಶಿವನಹಳ್ಳಿಯಲ್ಲಿ ನಡೆದಿದೆ. ಅಮಿನುಲ್ಲಾ ಮತ್ತು ಸಮ್ ಸೂನ್ ದಂಪತಿ ಪುತ್ರ ಶಮಾ ಮೃತ ಬಾಲಕ. ಮತ್ತೊಬ್ಬ ಪುತ್ರ ಸಾಜೀದ್(16) ಕೈಯಲ್ಲಿದ್ದ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ದುರ್ಘಟನೆ ಸಂಭವಿಸಿದೆ.
ಘಟನೆ ವಿವರ: ಕಾಡಶಿವನಹಳ್ಳಿ ಗ್ರಾಮದ ಮಲ್ಲೇಶ್ ಎಂಬುವರ ಜಮೀನಿನಲ್ಲಿ ಮೂರು ದಿನಗಳ ಹಿಂದೆಯಷ್ಟೇ ಕೂಲಿ ಕೆಲಸಕ್ಕೆಂದು ಉತ್ತರ ಪ್ರದೇಶದಿಂದ ಅಮಿನುಲ್ಲಾ ಹಾಗೂ ಸಮ… ಸೂನ್ ದಂಪತಿ ಸಾಜೀದ್ ಮತ್ತು ಶಮಾ ಅವರೊಂದಿಗೆ ಬಂದಿದ್ದರು. ಪೋಷಕರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಕ್ಕಳು ಅಲ್ಲಿಯೇ ಆಟವಾಡುತ್ತಿದ್ದರು. ಈ ವೇಳೆ ಮನೆಯಲ್ಲಿದ್ದ ತೋಟದ ಮಾಲೀಕ ಮಲ್ಲೇಶ್ ಅವರಿಗೆ ಸೇರಿದ ನಾಡ ಬಂದೂಕನ್ನು ಆಟ ವಾಡಲು ತೆಗೆದುಕೊಂಡ ಸಮಯದಲ್ಲಿ ಮಕ್ಕಳು ಕೈಗೆತ್ತಿಕೊಂಡಿದ್ದಾರೆ.
ಚನ್ನಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ: ಸ್ಥಳದಲ್ಲೇ 3 ಜನರ ಸಾವು
ಆಟ ಆಡುವಾಗ ಸಾಜೀದ್ ನಾಡಬಂದೂಕಿನ ಟ್ರಿಗರ್ ಒತ್ತಿದ ಹಿನ್ನೆಲೆಯಲ್ಲಿ ಗುಂಡು ಹಾರಿ ಬಾಲಕ ಶಮಾಗೆ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತೋಟದ ಮನೆಯಲ್ಲಿ ಯಾವುದೇ ಸುರಕ್ಷತಾ ನಿಯಮ ಪಾಲಿಸದೇ ಬಂದೂಕು ಇಟ್ಟಿದ್ದ ಮಾಲೀಕ ಮಲ್ಲೇಶ್ ಮೇಲೆ ನಿರ್ಲಕ್ಷ್ಯ ಪ್ರಕರಣದಡಿ ದೂರು ದಾಖಲಿಸಿಕೊಂಡ ಕೋಡಿಹಳ್ಳಿ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಗುಂಡು ಹಾರಿಸಿದ ಬಾಲಕ ಸಾದಿಕ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ