
ಹೈದರಾಬಾದ್ (ಮಾ. 10) ಯುವಕನ ಕಿರುಕುಳ ತಾಳಲಾರದೆ ಯುವತಿ ಮಗಳು ನೇಣಿಗೆ ಶರಣಾಗಿದ್ದಾಳೆ ಎಂದು ಹುಡುಗಿಯ ಪಾಲಕರು ಆರೋಪ ಮಾಡಿದ್ದಾರೆ.
ತೆಲಂಗಾಣದ ಮೈಲಾದೇರ್ವಪಲ್ಲಿಯಿಂದ ಘಟನೆ ವರದಿಯಾಗಿದೆ. ಲೀಜಾ ( 19) ಸುಸೈಡ್ ಮಾಡಿಕೊಂಡಿದ್ದಾರೆ. ಸ್ಥಳೀಯ ಯುವಕ ಅಕ್ರಮ್ ಎಂಬಾತ ಕಿರುಕುಳ ನೀಡುತ್ತಿದ್ದ ಎಂದು ಪಾಲಕರು ಆರೋಪಿಸಿದ್ದಾರೆ.
ಒಂದೇ ಏರಿಯಾದಲ್ಲಿ ಇದ್ದ ಕಾರಣ ಆಗಾಗ ಕರೆ ಮಾಡುವುದು, ತನ್ನ ಜತೆ ಸುತ್ತಾಡಲು ಬೈಕ್ ನಲ್ಲಿ ಬಾ ಎಂದು ಯುವತಿಯನ್ನು ಪೀಡಿಸುತ್ತಿದ್ದ ಎಂದು ಆರೋಪಿಸಿದ್ದಾರೆ.
ಮಹಿಳಾ ದಿನಾಚರಣೆ ದಿನ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಯುವತಿ ಮತ್ತು ಅಕ್ರಂ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇದಾದ ಮೇಲೆ ಯುವತಿ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡು ನೇಣಿಗೆ ಶರಣಾಗಿದ್ದಾಳೆ. ಯುವತಿ ಕರೆ ಕಟ್ ಮಾಡಿದ ಮೇಲೆ ಸುಮಾರು 150 ಕ್ಕೂ ಅಧಿಕ ಸಾರಿ ಅಕ್ರಂ ಕರೆ ಮಾಡಿದ್ದು ತನಿಖೆಯಲ್ಲಿ ಗೊತ್ತಾಗಿದೆ. ಒರಿಸ್ಸಾ ಮೂಲದ ಹುಡುಗಿಯ ಕುಟುಂಣ ಇಪ್ಪತ್ತು ವರ್ಷದ ಹಿಂದೆ ಆಂಧ್ರಪ್ರದೇಶಕ್ಕೆ ಬಂದು ನೆಲೆಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ