
ಚನ್ನಪಟ್ಟಣ(ಸೆ.13): ಜಮೀನು ವಿಚಾರಕ್ಕೆ ತಂಗಿಯ ಮೇಲೆ ಅಣ್ಣ ಮತ್ತು ಆತನ ಮನೆಯವರು ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕುರಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಮ್ಮ ಎಂಬುವವರ ಕುರಿ ಮೇಯಿಸಿಕೊಂಡು ಮನೆಗೆ ಹಿಂದಿರುಗುವಾಗ ಸಹೋದರ ರಾಜಣ್ಣ, ಅವರ ಮಗ ಮಧುಕುಮಾರ್ ಮತ್ತು ಅವರ ಮನೆಯವರು ಜಯಮ್ಮ ಮೇಲೆ ಏಕಾಏಕಿ ದಾಳಿ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.
ಜಯಮ್ಮ ಅವರನ್ನು ಮನಸೋ ಇಚ್ಛೆ ಥಳಿಸಿ, ಕಾಲಿಂದ ಒದ್ದು ಹಲ್ಲೆ ಮಾಡಿದ್ದಾರೆ. ಬಿಡಿಸಲು ಬಂದ ಜಯಮ್ಮ ಅವರ ಸೊಸೆ ಅರ್ಪಿತಾ ಮೇಲೂ ಹಲ್ಲೆ ನಡೆಸಿದ್ದು, ಅವರು ಮೊಬೈಲ್ನಲ್ಲಿ ಮಾಡಿದ್ದ ವಿಡಿಯೋ ಡಿಲೀಟ್ ಮಾಡುವಂತೆ ಬೆದರಿಸಿದ್ದಾರೆ.
ಮಚ್ಚಿನಿಂದ ಪತ್ನಿ ಕೊಚ್ಚಿ ಕೊಂದ ಪತಿ: ಮಾವನ ಮೇಲೂ ಮಾರಣಾಂತಿಕ ಹಲ್ಲೆ
ಗಾಯಾಳು ಜಯಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ರಾಜಣ್ಣ, ಮಧುಕುಮಾರ್ ಸೇರಿದಂತೆ 7 ಮಂದಿ ಮೇಲೆ ಜಯಮ್ಮ ಸೊಸೆ ಅರ್ಪಿತಾ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ