ಸರ್ಕಾರಿ ನೌಕರಿ ಕೊಡಿಸೋದಾಗಿ ಉದ್ಯಮಿಗೆ 1 ಕೋಟಿ ಟೋಪಿ ಹಾಕಿದ ಬ್ರದರ್ಸ್‌..!

Published : Jun 21, 2022, 07:45 AM IST
ಸರ್ಕಾರಿ ನೌಕರಿ ಕೊಡಿಸೋದಾಗಿ ಉದ್ಯಮಿಗೆ 1 ಕೋಟಿ ಟೋಪಿ ಹಾಕಿದ ಬ್ರದರ್ಸ್‌..!

ಸಾರಾಂಶ

*   ಸಂಬಂಧಿಕರಿಗೆ ಸರ್ಕಾರಿ ಉದ್ಯೋಗ ಕೊಡಿಸಲು ಹೋಗಿ ಮೋಸ ಹೋದ ಉದ್ಯಮಿ *   ಬಿಆರ್‌ಸಿ, ಆತನ ಸಹೋದನ ವಿರುದ್ಧ ಕೇಸ್‌ *   ಸರ್ಕಾರಿ ಉದ್ಯೋಗ ಕೊಡಿಸಲು ಉದ್ಯಮಿ ಸಂಬಂಧಿ ಬೇಡಿಕೆ  

ಬೆಂಗಳೂರು(ಜೂ.21):  ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ 1.02 ಕೋಟಿ ಪಡೆದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಆತನ ಸೋದರ ಟೋಪಿ ಹಾಕಿರುವ ಘಟನೆ ನಡೆದಿದೆ.

ಬೆಂಗಳೂರು ನಗರದ ಸಹಕಾರ ನಗರದ ಎಸ್‌.ನಾಗೇಂದ್ರರಾವ್‌ ಮೋಸ ಹೋದವರು. ಈ ಸಂಬಂಧ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿಆರ್‌ಸಿ (ಹೈಸ್ಕೂಲ್‌) ಬಸವನಗೌಡ ಪಾಟೀಲ್‌ ಹಾಗೂ ಆತನ ಸೋದರ ಬಳ್ಳಾರಿಯ ವೆಂಕಟರೆಡ್ಡಿ ಮೇಲೆ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Yadgir ಅಂಚೆ ಸಿಬ್ಬಂದಿಯಿಂದಲೇ ಫಲಾನುಭವಿಗಳಿಗೆ 1 ಕೋಟಿ 27 ಲಕ್ಷ ರೂ. ವಂಚನೆ!

ಕೆಲ ವರ್ಷಗಳ ಹಿಂದೆ ಸ್ನೇಹಿತರ ಮೂಲಕ ಈ ಸೋದರರು ನಾಗೇಂದ್ರರಾವ್‌ ಅವರಿಗೆ ಪರಿಚಯವಾಗಿದ್ದರು. ಈ ಸ್ನೇಹದಲ್ಲಿ ತಮಗೆ ಸರ್ಕಾರ ಮಟ್ಟದ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿ ನಾಗೇಂದ್ರರಾವ್‌ ಅವರ ಸಂಬಂಧಿಗಳಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಟೋಪಿ ಹಾಕಿದ ಸೋದರರು:

ಉದ್ಯಮಿ ನಾಗೇಂದ್ರ ರಾವ್‌ ಅವರು, ತಮ್ಮ ಕುಟುಂಬದ ಜತೆ ಸಹಕಾರ ನಗರದಲ್ಲಿ ನೆಲೆಸಿದ್ದಾರೆ. ಉದ್ಯಮ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಹೀಗಿರುವಾಗ ಇದೇ ವರ್ಷದ ಜನವರಿಯಲ್ಲಿ ನಾಗೇಂದ್ರರಾವ್‌ ಅವರನ್ನು ಭೇಟಿಯಾದ ಅವರ ಸಂಬಂಧಿಕರು, ಸರ್ಕಾರಿ ನೌಕರಿ ಕೊಡಿಸುವಂತೆ ಮನವಿ ಮಾಡಿದ್ದರು. ಆಗ ತಮ್ಮ ಸ್ನೇಹಿತರ ಮೂಲಕ ಸರ್ಕಾರಿ ನೌಕರಿ ಕೊಡಿಸುವ ಭರವಸೆ ಕೊಟ್ಟಿದ್ದರು. ಅಂತೆಯೇ ನಾಲ್ಕು ವರ್ಷಗಳಿಂದ ತಮಗೆ ಪರಿಚಯವಿದ್ದ ವೆಂಕಟರೆಡ್ಡಿ ಅವರನ್ನು ಸಂಪರ್ಕಿಸಿದ ನಾಗೇಂದ್ರರಾವ್‌ ಅವರು, ನಮ್ಮ ಬಂಧುವಿಗೆ ಸರ್ಕಾರಿ ಹುದ್ದೆ ಕೊಡಿಸಲು ನೆರವಾಗುವಂತೆ ಮನವಿ ಮಾಡಿದ್ದಾರೆ. ಈ ಮಾತಿಗೆ ದಾವಣೆಗೆರೆ ಜಿಲ್ಲೆ ಜಗಳೂರು ತಾಲೂಕಿನಲ್ಲಿ ಬಿಆರ್‌ಸಿ ಆಗಿರುವ ‘ನನ್ನ ಸೋದರ ಬಸವನಗೌಡ ಪಾಟೀಲ್‌ಗೆ ಸರ್ಕಾರದ ಮಟ್ಟದಲ್ಲಿ ಒಳ್ಳೆಯ ಸಂಪರ್ಕ ಇದೆ. ಆತನ ನಿಮಗೆ ಸಹಾಯ ಮಾಡುತ್ತೇನೆ. ನಿಮಗೆ ಆತನನ್ನು ಪರಿಚಯಿಸುವುದಾಗಿ ನಾಗೇಂದ್ರ ರಾವ್‌’ಗೆ ವೆಂಕಟರೆಡ್ಡಿ ಹೇಳಿದ್ದ.

ಕೊನೆಗೆ ಬೆಂಗಳೂರಿನ ರಾಮಮೂರ್ತಿ ನಗರದ ಹೋಟೆಲ್‌ನಲ್ಲಿ ನಾಗೇಂದ್ರ ಅವರನ್ನು ಸೋದರರು ಭೇಟಿಯಾಗಿ ಡೀಲ್‌ ಕುದುರಿಸಿದ್ದರು. ವಂಚಕ ಸೋದರರ ಮಾತು ನಂಬಿದ ರಾವ್‌, ಹಂತ ಹಂತವಾಗಿ ಸೋದರರ ಬ್ಯಾಂಕ್‌ ಖಾತೆಗಳಿಗೆ 1.02 ಕೋಟಿ ಜಮೆ ಮಾಡಿದ್ದರು. ಹಣ ಸಂದಾಯವಾದ ಬಳಿಕ ಸೋದರರು, ನಾಗೇಂದ್ರ ಅವರ ಸಂಪರ್ಕ ಕಡಿತಕೊಂಡಿದ್ದಾರೆ. ಈ ವರ್ತನೆಯಿಂದ ತಾವು ವಂಚನೆಗೊಳಗಾಗಿರುವುದು ಉದ್ಯಮಿಗೆ ಅರಿವಾಗಿದೆ. ಕೊನೆಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ