ಮೈಸೂರು ಜಿಲ್ಲೆಯಲ್ಲೊಂದು ಮನಕಲಕುವ ಘಟನೆ: ತಮ್ಮನ ಆತ್ಮಹತ್ಯೆ ವಿಷಯ ತಿಳಿದು ಅಣ್ಣನೂ ಸೂಸೈಡ್‌

Suvarna News   | Asianet News
Published : Feb 26, 2021, 11:51 AM ISTUpdated : Feb 26, 2021, 12:57 PM IST
ಮೈಸೂರು ಜಿಲ್ಲೆಯಲ್ಲೊಂದು ಮನಕಲಕುವ ಘಟನೆ: ತಮ್ಮನ ಆತ್ಮಹತ್ಯೆ ವಿಷಯ ತಿಳಿದು ಅಣ್ಣನೂ ಸೂಸೈಡ್‌

ಸಾರಾಂಶ

ಅಕ್ಕಪಕ್ಕದಲ್ಲೇ ಉರಿದು ಹೋದ ಅಣ್ಣ-ತಮ್ಮನ ಚಿತೆಗಳು| ತಮ್ಮನ ಸಾವಿಗೆ ನಾನೇ ಕಾರಣವಾದೆ ಎಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡ ಅಣ್ಣ| ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಮೈಸೂರು(ಫೆ.26):  ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಸಹ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ಇಂದು(ಶುಕ್ರವಾರ) ನಡೆದಿದೆ. ವೆಂಕಟೇಶ್(28), ಹರೀಶ್(26) ಮೃತ ಸಹೋದರರಾಗಿದ್ದಾರೆ. 

"

ರೈತನಾಗಿದ್ದ ಹರೀಶ್​ ಟ್ರ್ಯಾಕ್ಟರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ, ಹರೀಶ್​ ಟ್ರ್ಯಾಕ್ಟರ್ ರ್ಯಾಶ್ ಡ್ರೈವ್ ಮಾಡುತ್ತಿದ್ದನು. ಈ ಬಗ್ಗೆ ತಂದೆ ಚಿನ್ಮಯಿಗೌಡ ಬುದ್ದಿ ಹೇಳಿದ್ದರು. ಇನ್ನೂ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಕೂಡ ತಮ್ಮನಿಗೆ ಕರೆಮಾಡಿ ಬುದ್ಧಿವಾದ ಹೇಳಿದ್ದನು ಎಂದು ತಿಳಿದು ಬಂದಿದೆ. 

ಕಲಬುರಗಿ: ಸಾಲಗಾರರ ಕಿರುಕುಳ, ಖಾಸಗಿ ಶಿಕ್ಷಣ ಸಂಸ್ಥೆ ಮಾಲೀಕ ಆತ್ಮಹತ್ಯೆ

ಆತ್ಮೀಯನಾಗಿದ್ದ ಅಣ್ಣ ಬೈದಿದ್ದರಿಂದ ತೀವ್ರವಾಗಿ ಮನನೊಂದ ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮ ನೇಣು ಬಿಗಿದುಕೊಂಡಿರುವ ದೃಶ್ಯಗಳನ್ನು ಸ್ನೇಹಿತರು ಅಣ್ಣನ ಮೊಬೈಲ್ ಫೋನ್​ಗೆ ಕಳುಹಿಸಿದ್ದರು. ಹರೀಶ್ ಸಾವಿಗೆ ನಾನೇ ಕಾರಣವಾದೆ ಎಂದು ಭಾವಿಸಿದ್ದ ವೆಂಕಟೇಶ್, ಊರಿಗೆ ಬರುವ ಬದಲು ಸರಗೂರು ರಸ್ತೆ ಕಡೆ ಹೋಗಿ ತಾನೂ ಕೂಡ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!