
ವಿಜಯಪುರ(ಏ. 26) ಕೊರೋನಾ ನಡುವೆ ಮತ್ತೊಂದು ಕೆಟ್ಟ ಸುದ್ದಿ ಬಂದಿದೆ. ಬಟ್ಟೆ ತೊಳೆಯಲು ಬಾವಿಗಿಳಿದಿದ್ದ ಅಣ್ಣ, ತಮ್ಮ ನೀರಲ್ಲಿ ಮುಳುಗಿ ದುರ್ಮರಣಹೊಂದಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳಪಟ್ಟಣದ ಆಶ್ರಯ ಕಾಲೋನಿಯ ಬಾವಿಯಲ್ಲಿ ದುರ್ಘಟನೆ ನಡೆದಿದೆ. ಪಟ್ಟಣದ ಆಶ್ರಯ ಕಾಲನಿ ನಿವಾಸಿಗಳಾದ ಪ್ರೇಮು ಹಡಪದ(14), ಪುನೀತ ಹಡಪದ(10) ನೀರಲ್ಲಿ ಮುಳುಗಿ ಸಾವು ಕಂಡಿದ್ದಾರೆ.
ಆಸ್ತಿಗಾಗಿ ಅಣ್ಣನ ಹತ್ಯೆ ಮಾಡಿದ ತಮ್ಮ
ತಮ್ಮ ಬಟ್ಟೆ ತೊಳೆಯಲೆಂದು ನೀರಿಗೆ ಇಳಿದ ವೇಳೆಯಲ್ಲಿ ಕಾಲು ಜಾರಿ ನೀರಲ್ಲಿ ಬಿದ್ದು ಅವಘಡ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಬಿ.ಎಸ್.ನೇತೃತ್ವದಲ್ಲಿ ಬಾಲಕರ ಮೃತ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ