ಸಿಎಂ ನಿವಾಸದ ಮುಂದೆ ಜಾಗ್ವಾರ್ ಕಾರು ಅಪಘಾತ; ವಾಹನ ಪುಡಿ ಪುಡಿ!

Published : Jan 30, 2021, 09:35 PM ISTUpdated : Jan 30, 2021, 09:39 PM IST
ಸಿಎಂ ನಿವಾಸದ ಮುಂದೆ ಜಾಗ್ವಾರ್ ಕಾರು ಅಪಘಾತ; ವಾಹನ ಪುಡಿ ಪುಡಿ!

ಸಾರಾಂಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸದ ಮುಂದೆ ಐಷಾರಾಮಿ ಜಾಗ್ವಾರ್ ಕಾರು ಅಪಘಾತಕ್ಕೀಡಾಗಿದೆ. ಸಿಎಂ ನಿವಾಸಕ್ಕೆ ನುಗ್ಗುತ್ತಿದ್ದ ಕಾರು ಹಾಗೂ ಅಪಘಾತದ ಕುರಿತ ಹೆಚ್ಚಿನ ವಿವರ ಇಲ್ಲಿದೆ

ಬೆಂಗಳೂರು(ಜ.30):  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸ ಕಾವೇರಿ ಮುಂದೆ ಉದ್ಯಮಿಯೊಬ್ಬರ ಜಾಗ್ವಾರ್ ಕಾರು ಅಪಘಾತಕ್ಕೀಡಾಗಿದೆ. ಪರ್ಲೇ ವೇರ್ ಹೌಸ್ ಮಾಲೀಕನ ಪುತ್ರ ಕಾರು ಚಾಲನೆ ಮಾಡುತ್ತಿದ್ದ ವೇಳೆ ಅಪಘಾತಕ್ಕೀಡಾಗಿದೆ. 

ಲಾಕ್‌ಡೌನ್‌ನಿಂದ ಅಪಘಾತ ಕಡಿಮೆ: ಕಳೆದ ವರ್ಷ ಸಾವಿನ ಸಂಖ್ಯೆ ಇಳಿಮುಖ

ಅಪಘಾತದ ತೀವ್ರತೆದೆ ಐಷರಾಮಿ, ಗರಿಷ್ಠ ಸುರಕ್ಷತೆಯ ಜಾಗ್ವಾರ್ ಕಾರು ಪುಡಿ ಪುಡಿಯಾಗಿದೆ. ಇತ್ತ ಕಾರು ಚಾಲನೆ ಮಾಡುತ್ತಿದ್ದ ವೇಳೆ ಉದ್ಯಮಿ ಪರ್ಲ್ ವೇರ್ ಹೌಸ್ ಮಾಲೀಕ ಪುತ್ರ ಶೇನ್ ಷಾರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂಠಪೂರ್ತಿ ಕುಡಿದ ಅತೀ ವೇಗವಾಗಿ ಕಾರು ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿ ಹೇಳುತ್ತಿದೆ. ಸ್ವಲ್ಪ ಯಾಮಾರಿದ್ದರೂ, ತಡರಾತ್ರಿ ಮುಖ್ಯಮಂತ್ರಿ ನಿವಾಸ ಕಾವೇರಿಗೆ ಕಾರು ನುಗ್ಗುತ್ತಿತ್ತು. ಆದರೆ ನಿವಾಸದ ಸನಿಹದಲ್ಲೇ ಅಪಘಾತಕ್ಕೀಡಾಗಿದೆ. ಅದೃಷ್ಟವಶ ಸಿಎಂ ನಿವಾಸ ಕಾವೇರಿ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದು ಪೊಲೀಸರು ಅಪಘಾತದಿಂದ ಪಾರಾಗಿದ್ದಾರೆ.

ಹೈ ಗ್ರೌಂಡ್ ಸಂಚಾರ ಪೊಲೀಸರಿಂದ ಸ್ವಯಂ ಪ್ರೇರಿತ ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಸ್ಪತ್ರೆ ದಾಖಲಾಗಿರುವ ಶೇನ್ ಷಾ ಗಾಯದ ತೀವ್ರತೆ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ