ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು!

Published : Apr 13, 2024, 08:43 AM ISTUpdated : Apr 13, 2024, 12:44 PM IST
ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು!

ಸಾರಾಂಶ

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತವಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.  ಟ್ರಕ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರಂತವಾಗಿದೆ.

ವಿಜಯಪುರ (ಏ.13): ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತವಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.  ಟ್ರಕ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರಂತವಾಗಿದ್ದು, ಕಾರನಲ್ಲಿದ್ದ ನಾಲ್ವರ ಸಾವು ಸ್ಥಳದಲ್ಲೆ ಸಾವು ಕಂಡಿದ್ದಾರೆ. ಓರ್ವ ಬಾಲಕ, ಮಹಿಳೆ, ಇನ್ನಿಬ್ಬರು ವ್ಯಕ್ತಿಗಳು  ಮೃತಪಟ್ಟಿದ್ದಾರೆ. 

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಘಟನೆ ನಡೆದಿದೆ. ವಿಜಯಪುರದಿಂದ ಜಮಖಂಡಿ ಕಡೆಗೆ ಹೊರಟಿದ್ದ ಕಾರು ಮತ್ತು ಜಮಖಂಡಿಯಿಂದ ವಿಜಯಪುರದ ಕಡೆಗೆ ಬರ್ತಿದ್ದ ಸಿಮೆಂಟ್‌ ಟ್ರಕ್ ನಡುವೆ ನಸುಕಿನ ಜಾವ ಈ ಅವಘಡವಾಗಿದೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸರ ದೌಡಾಯಿಸಿದ್ದಾರೆ.

Rameshwaram Cafe Blast case ಹುಬ್ಬಳ್ಳಿಯಲ್ಲಿ ಶಂಕಿತ ಉಗ್ರ ವಶಕ್ಕೆ 

ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಗುರುತು ಪತ್ತೆಯಾಗಿದ್ದು, ವಿಜಯಪುರ ಮೂಲದ ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಸುನಿಲಾಲ್ ಪತ್ತಾರ ( 52 ), ಪುಷ್ಟಾ ರವಿನಾಥ ಪತ್ತಾರ ( 40), ಮೇಘರಾಜ ಅರ್ಜುನಸಿಂಗ್ ರಜಪೂತ (12) ಎಂದು ಗುರುತಿಸಲಾಗಿದೆ. ಮೃತರು ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ KA 28 D 1021 ನಂಬರಿನ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ  ಜಮಖಂಡಿಯಿಂದ ಸಿಮೆಂಟ್ ಲೋಡ್ ಇದ್ದ KA 16 B 6472 ನಂಬರಿನ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಬಬಲೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶವಗಳ ಹೊರತೆಗೆದಿದ್ದಾರೆ.  ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನೆವಣೆ ಹಾಗೂ ಇತರ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಟ್ಟು 7 ಜನರು ಕಾರ್ ನಲ್ಲಿದ್ದರು. ಅದರಲ್ಲಿ ನಾಲ್ವರ ದುರ್ಮರಣ ಹೊಂದಿದ್ದಾರೆ. ಇನ್ನುಳಿದ ಮೂವರು ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಜಿಲ್ಲಾಸ್ಪತ್ರೆಗೆ  ದಾಖಲು ಮಾಡಲಾಗಿದೆ. ಮರೋಣತ್ತರ ಪರೀಕ್ಷೆಗಾಗಿ ಮೃತ ದೇಹಗಳು ಜಿಲ್ಲಾ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿದ್ದ 47 ಅಪ್ರಾಪ್ತ ಮಕ್ಕಳ ರಕ್ಷಣೆ, 36 ಮಹಿಳೆಯರು ಕೂಡ ವಶಕ್ಕೆ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ