ವಾಹನ ಮಾಲೀಕರೇ ಎಚ್ಚರ: ಇವರಿಗೆ ಬಾಡಿಗೆ ಕೊಟ್ಟರೆ ಕಾರ್‌ ಗಾಯಬ್‌!

Suvarna News   | Asianet News
Published : Feb 19, 2020, 12:34 PM ISTUpdated : Feb 19, 2020, 12:37 PM IST
ವಾಹನ ಮಾಲೀಕರೇ ಎಚ್ಚರ: ಇವರಿಗೆ ಬಾಡಿಗೆ ಕೊಟ್ಟರೆ ಕಾರ್‌ ಗಾಯಬ್‌!

ಸಾರಾಂಶ

ಸಿಲಿಕಾನ್ ಸಿಟಿಯಲ್ಲಿ ನಟೋರಿಯಸ್ ಗ್ಯಾಂಗ್ ಅಂದರ್| ಕಾರು ಕಳ್ಳರ ಬಂಧನ| ಕಾರು ಸಮೇತ ಪರಾರಿಯಾಗುತ್ತಿದ್ದ ಖದೀಮರು| 

ಬೆಂಗಳೂರು(ಫೆ.19): ಕಾರು ಬಾಡಿಗೆಗೆ ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡುತ್ತಿದ್ದ ಖದೀಮರನ್ನ ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಲೀಲ್ ಉಲ್ಲಾ, ಅಕ್ಷಯ್ ಬಂಧಿತ ಆರೋಪಿಗಳಾಗಿದ್ದಾರೆ. 

ಬಂಧಿತ ಆರೋಪಿಗಳು ಸಿನಿಮೀಯ ರೀತಿಯಲ್ಲಿ ಕಾರು ಮಾಲೀಕರನ್ನ ಪರಿಚಯ ಮಾಡಿಕೊಳ್ಳುತಿದ್ದರು. ಬಳಿಕ  ಪರಿಚಯಸ್ಥರಿಗೆ ಕಾರು ಬಾಡಿಗೆ ಬೇಕು, ಹೆಚ್ಚು ಹಣ ನೀಡುತ್ತಾರೆ ಅಂತ ಸುಳ್ಳು ಕಥೆ ಹೇಳಿ ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದರು. ಈ ಬಗ್ಗೆ ಬಂಧಿತ ಆರೋಪಿ ಅಕ್ಷಯ್‌ನನ್ನ ಪೊಲೀಸರು ವಿಚಾರಣೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ.  

ಸಿರಾಜ್ ಆದ ಸಿದ್ದಹನುಮಯ್ಯ: 25 ವರ್ಷದ ನಂತ್ರ ಸಿಕ್ಕ ಅತ್ಯಾಚಾರಿ

ಈ ಖದೀಮರು ನೀಡುತ್ತಿದ್ದ ಕೆಲ ದಾಖಲೆಗಳನ್ನು ಪಡೆದು ಕಾರು ಮಾಲೀಕರು ಬಾಡಿಗೆಗೆ ನೀಡುತ್ತಿದ್ದರು. ಬಾಡಿಗೆ ಪಡೆದ ಕಾರ್‌ಗೆ ತಿಂಗಳಿಗೆ ಇಂತಿಷ್ಟು ಹಣ ಎಂದು ನೀಡುತ್ತಿದ್ದರು. ಹೀಗೆ ಹಲವು ಬಾರಿ ಕಾರ್ ಪಡೆದು ಸರಿಯಾಗಿ ಹಣ ನೀಡಿ ಕಾರು ಮಾಲೀಕನಿಗೆ ಹತ್ತಿರವಾಗುತಿದ್ದರು. ಹತ್ತಿರವಾದ ಬಳಿಕ ಯಾವುದೇ ದಾಖಲೆ ನೀಡದೆ ಕಾರು ಬಾಡಿಗೆಗೆ ಪಡೆಯುತ್ತಿದ್ದರು. ಬಳಿಕ ಈ ಖದೀಮರು ಕಾರು ಕದ್ದು ಪರಾರಿಯಾಗುತ್ತಿದ್ದರು ಎಂದು ತಿಳಿದು ಬಂದಿದೆ. 

ಮೊಬೈಲ್ ಕಳೆದಿದ್ದಕ್ಕೆ ಬೈದ ಪೋಷಕರು: ಬಾಲಕ ಆತ್ಮಹತ್ಯೆ

ನಂತರ ಕದ್ದ ಕಾರನ್ನು ಈ ಗ್ಯಾಂಗ್‌ ಬೇರೊಬ್ಬರಿಗೆ ಲಕ್ಷ ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಜಯ್ ಗೌಡ ಎಂಬುವವರು ದೂರು ದಾಖಲಿಸಿದ್ದರು. 
ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪೊಲೀಸರ ವಿಚಾರಣೆ ವೇಳೆ 10 ಕಾರುಗಳನ್ನು ಇದೇ ಮಾದರಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಬಂಧಿತರಿಂದ 8 ವಿವಿಧ ಮಾದರಿಯ ಕಾರುಗಳನ್ನ  ವಶಕ್ಕೆ ಪಡೆದಿದ್ದಾರೆ. ಪರಾರಿಯಾದ ಪ್ರಮುಖ ಆರೋಪಿ ನಿರಂಜನ್‌ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!