ಹುಬ್ಬಳ್ಳಿ: ಫ್ರೆಂಡ್‌ ಹೆಸ​ರಿ​ನಲ್ಲಿ ಫೋನ್‌ ಮಾಡಿ ಲಕ್ಷಾಂತರ ರೂ. ವಂಚಿಸಿದ ಖತರ್ನಾಕ್‌ ಖದೀಮ..!

Kannadaprabha News   | Asianet News
Published : Mar 26, 2021, 11:03 AM IST
ಹುಬ್ಬಳ್ಳಿ: ಫ್ರೆಂಡ್‌ ಹೆಸ​ರಿ​ನಲ್ಲಿ ಫೋನ್‌ ಮಾಡಿ ಲಕ್ಷಾಂತರ ರೂ. ವಂಚಿಸಿದ ಖತರ್ನಾಕ್‌ ಖದೀಮ..!

ಸಾರಾಂಶ

ಹುಬ್ಬಳ್ಳಿ ನಗರದಲ್ಲಿ ನಡೆದ ಘಟನೆ| ಪಿ.ಕೆ. ರವಿಚಂದ್ರನ್‌ ಮೋಸ ಹೋದ ವ್ಯಕ್ತಿ| ವಾಟ್ಸಾಪ್‌ ಮೂಲಕ ಸಂಪರ್ಕಿಸಿದ ಖದೀಮ| ಈ ಸಂಬಂಧ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು| ತನಿಖೆ ಕೈಗೊಂಡ ಪೊಲೀಸರು| 

ಹುಬ್ಬಳ್ಳಿ(ಮಾ.26): ಸ್ನೇಹಿತನ ಹೆಸರಿನಲ್ಲಿ ಕರೆ ಮಾಡಿದ ಅಪರಿಚಿತ ವಿದೇಶದಲ್ಲಿ ಇರುವ ತನ್ನ ಸಂಬಂಧಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣ ಬೇಕೆಂದು 4ಲಕ್ಷ ರು. ಪಡೆದು ವಂಚನೆ ಮಾಡಿರುವ ಪ್ರಕರಣ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಗೋಕುಲ ರಸ್ತೆ ನಿವಾಸಿ ಪಿ.ಕೆ. ರವಿಚಂದ್ರನ್‌ ಅವರು ಮೋಸ ಹೋಗಿದ್ದಾರೆ. ವಾಟ್ಸಾಪ್‌ ಮೂಲಕ ಸಂಪರ್ಕಿಸಿದ ಅಪರಿಚಿತ ತಾನು ನಿಮ್ಮ ಸ್ನೇಹಿತ ಚಂದ್ರಶೇಖರ್‌ ಎಂದು ಸುಳ್ಳು ಹೇಳಿ ನಂಬಿಸಿದ್ದಾನೆ. 

ರಿಸರ್ವ್ ಬ್ಯಾಂಕಿನ ನೌಕರರೆಂದು ವಂಚನೆ : ಹುಷಾರ್!

ಬಳಿಕ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಇರುವ ಸಂಬಂಧಿಕರಿಗೆ ಅರಾಮಿಲ್ಲ ಎಂದು ಹಂತ ಹಂತವಾಗಿ ಹಣ ಪಡೆದಿದ್ದಾನೆ. ಮೂರ್ನಾಲ್ಕು ದಿನಗಳಲ್ಲಿ ವಾಪಸ್‌ ನೀಡುವುದಾಗಿ ಹೇಳಿ ಬಳಿಕ ವಂಚಿಸಿದ್ದಾನೆ. ಸೈಬರ್‌ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!