ಬಾಗಲಕೋಟೆ: ನಕಲಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ, ಪೊಲೀಸ್ ಅಧಿಕಾರಿಗಳಿಂದ ದಾಳಿ

Published : Jun 18, 2024, 09:20 PM ISTUpdated : Jun 18, 2024, 09:27 PM IST
ಬಾಗಲಕೋಟೆ: ನಕಲಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ, ಪೊಲೀಸ್  ಅಧಿಕಾರಿಗಳಿಂದ ದಾಳಿ

ಸಾರಾಂಶ

ಯಾವುದೇ ವೈದ್ಯಕೀಯ ಪದವಿ ಪಡೆಯದೇ, ನಕಲಿ ಆಸ್ಪತ್ರೆ ತೆರೆದು ಬಡರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಕುಂಬಾರ ಗಲ್ಲಿಯಲ್ಲಿ ನಡೆದಿದೆ. ಸುರೇಖಾ ಚರ್ಕಿ (60) ಅನಧಿಕೃತವಾಗಿ ಆಸ್ಪತ್ರೆ  ನಡೆಸುತ್ತಿದ್ದ ಆರೋಪಿ ಮಹಿಳೆ.

ಬಾಗಲಕೋಟೆ (ಜೂ.18): ಯಾವುದೇ ವೈದ್ಯಕೀಯ ಪದವಿ ಪಡೆಯದೇ, ನಕಲಿ ಆಸ್ಪತ್ರೆ ತೆರೆದು ಬಡರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಕುಂಬಾರ ಗಲ್ಲಿಯಲ್ಲಿ ನಡೆದಿದೆ.

ಸುರೇಖಾ ಚರ್ಕಿ (60) ಎಂಬಾಕೆ ಅನಧಿಕೃತವಾಗಿ ಆಸ್ಪತ್ರೆ ನಡೆಸುತ್ತಿದ್ದಳು. ಈಕೆ ಯಾವುದೇ ವೈದ್ಯಕೀಯ ಪದವಿ ಪಡೆದಿಲ್ಲ. ವೈದ್ಯಕೀಯ ಬಗ್ಗೆ ಯಾವುದೇ ಜ್ಞಾನವಿಲ್ಲದಿದ್ರೂ ಬಡರೋಗಿಗಳನ್ನು ಬಂಡವಾಳ ಮಾಡಿಕೊಂಡು ಹಣ ಮಾಡುವ ದುರುದ್ದೇಶದಿಂದ ನಕಲಿ ಆಸ್ಪತ್ರೆ ನಡೆಸುತ್ತಿದ್ದ ಮಹಿಳೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ನಕಲಿ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆಸ್ಪತ್ರೆಯಲ್ಲಿ ಹೆರಿಗೆ ಸ್ಕ್ಯಾನಿಂಗ್ ಪತ್ತೆಯಾಗಿಲ್ಲ. ಆದರೆ ಹಲವು ವಸ್ತುಗಳು ನಕಲಿ ಔಷಧಿಗಳನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯ ತಲುಪಲಿಸಿ: ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ವಿ.ವೆಂಕಟೇಶನ್

ಜನವಸತಿ ಹೆಚ್ಚಿರುವ ಕುಂಬಾರಗಲ್ಲಿ. ಹೆಚ್ಚಾಗಿ ಬಡವರೇ ವಾಸಿಸುತ್ತಿದ್ದಾರೆ. ಈ ಸ್ಥಳದಲ್ಲಿ ಯಾವುದೇ ಮಾನ್ಯತೆ, ವೈದ್ಯಕೀಯ ಪದವಿ ಇಲ್ಲದೇ ಆಸ್ಪತ್ರೆ ತೆರೆದಿದ್ದ ಖತರ್ನಾಕ್ ನಕಲಿ ವೈದ್ಯ. ಹಿಂದಿನಿಂದಲೂ ಅನಾರೋಗ್ಯದಿಂದ ಆಸ್ಪತ್ರೆ ಬಂದ ರೋಗಿಗಳಿಗೆ ನಕಲಿ ಔಷಧ ಕೊಟ್ಟಿರುವ ಬಗ್ಗೆ ಮಾಹಿತಿ. ಆದರೆ ಈ ಆಸ್ಪತ್ರೆಗೆ ಎಲ್ಲಿಂದ ಔ‍ಷಧ ತಯಾರಾಗುತ್ತಿತ್ತು? ಯಾರು ಸರಬರಾಜು ಮಾಡುತ್ತಿದ್ದರು ಎಂಬುದು ರಹಸ್ಯವಾಗಿದೆ. ಇದೇ ರೀತಿ ಅನೇಕ ಕಡೆ ನಕಲಿ ಆಸ್ಪತ್ರೆ ಜಾಲ ತಲೆ ಎತ್ತಿರುವ ಸಾಧ್ಯತೆ ಇದೆ. ಹೀಗಾಗಿ ಮೊದಲಿಗೆ ಔಷಧ ಎಲ್ಲಿಂದ ತರಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆಗೆ ಮುಂದಾಗಿರುವ ಪೊಲೀಸರು.

ದಸರಾ ಆನೆ ಅಶ್ವತ್ಥಾಮ ಸಾವಿನ ಬೆನ್ನಲ್ಲೇ ಗಂಗಶ್ರೀ ಸಾವು!

ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಟಿಹೆಚ್ಓ ಗೈಬುಸಾಬ್ ಗಲಗಲಿ, ಜಮಖಂಡಿ ಪೊಲೀಸರಿಂದ ದಾಳಿ ನಡೆದಿರುವ ದಾಳಿ. ನಕಲಿ ಆಸ್ಪತ್ರೆ ನಡೆಸುತ್ತಿರುವ ಬಗ್ಗೆ ಹಲವು ದಿನಗಳಿಂದ ಮಾಹಿತಿ ಕಲೆಹಾಕಿದ್ದ ಪೊಲೀಸರು. ಇದೀಗ ದಾಳಿ ನಡೆಸಿ ನಕಲಿ ಆಸ್ಪತ್ರೆ ಜಾಲದ ಬಗ್ಗೆ ಸಂಪೂರ್ಣ ತನಿಖೆ ಕೈಗೊಂಡು ಕ್ರಮ ಜರುಗಿಸಲು ಮುಂದಾಗಿರುವ ಪೊಲೀಸರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!