2 ಕೋಟಿ ಲಂಚ ಕೇಳಿದ್ದ ಇಡಿ ಸಿಬ್ಬಂದಿ ಸಿಬಿಐ ವಶಕ್ಕೆ

Kannadaprabha News   | Asianet News
Published : Feb 16, 2021, 08:00 AM IST
2 ಕೋಟಿ ಲಂಚ ಕೇಳಿದ್ದ ಇಡಿ ಸಿಬ್ಬಂದಿ ಸಿಬಿಐ ವಶಕ್ಕೆ

ಸಾರಾಂಶ

ಪ್ರಕರಣ ಮುಚ್ಚಿಹಾಕಲು 2 ಕೋಟಿ ಲಂಚ ಕೇಳಿದ್ದ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯ ಸಿಬ್ಬಂದಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ನವದೆಹಲಿ (ಫೆ.16): ಪ್ರಕರಣ ಮುಚ್ಚಿಹಾಕಲು 2 ಕೋಟಿ ಲಂಚ ಕೇಳಿದ್ದ ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯ ಸಿಬ್ಬಂದಿ ಚನ್ನಕೇಶವಲು ಎಂಬಾತನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ತಾನು ಇಡಿ ಅಧಿಕಾರಿ ಎಂದು ಹೇಳಿಕೊಂಡಿದ್ದ ಚನ್ನಕೇಶವಲು ಲಂಚ ಕೇಳಿದ್ದ. ಈ ಪೈಕಿ ಮೊದಲ ಕಂತಿನಲ್ಲಿ 6 ಲಕ್ಷ ಸ್ವೀಕರಿಸಿ, 2ನೇ ಕಂತಿನ ಹಣ ಸ್ವೀಕರಿಸಲು ಯತ್ನಿಸಿದ್ದ ವೇಳೆ ಸಿಬಿಐ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಪ್ರಕರಣ ಸಂಬಂಧ ಈತನ ಆಪ್ತ ವಿರೇಶ್‌ ಎಂಬಾತನನ್ನು ಕೂಡಾ ಸಿಬಿಐ ವಶಕ್ಕೆ ಪಡೆದಿದೆ.

ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ್ದ ಚನ್ನಕೇಶವಲು, ನಿಮ್ಮ ಮೇಲೆ ಇಡಿಗೆ ಹಲವು ದೂರುಗಳು ಬಂದಿವೆ. ಈ ಸಂಬಂಧ ದಾಳಿ ಮಾಡುವುದಾಗಿ ಬೆದರಿಸಿದ್ದ. ಬಳಿಕ ಆತನ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆಯನ್ನೂ ನಡೆಸಿದ್ದ. ಈ ವೇಳೆ 2 ಕೋಟಿ ಕೊಟ್ಟರೆ ಪ್ರಕರಣ ಮುಚ್ಚಿ ಹಾಕುವುದಾಗಿ ಹೇಳಿದ್ದ.

ಹುಬ್ಬಳ್ಳಿ: ಬಿಟ್ ‌ಕಾಯಿನ್‌‌ ನೀಡೋದಾಗಿ 45 ಲಕ್ಷ ವಂಚನೆ .

ಅದರಂತೆ ದೂರುದಾರ ವ್ಯಕ್ತಿ ಆದಿಕೇಶವಲುನ ಆಪ್ತ ವೀರೇಶ್‌ಗೆ 6 ಲಕ್ಷ ರು. ನೀಡಿದ್ದರು. ಉಳಿದ ಹಣವನ್ನು ಮಾರನೇ ದಿನ ನೀಡುವಂತೆ ಸೂಚಿಸಲಾಗಿತ್ತು. ಈ ವೇಳೆ ಹಣ ಸ್ವೀಕರಿಸಲು ಸ್ವತಃ ಆದಿಕೇಶವಲು ಬರಬೇಕೆಂದು ಒತ್ತಾಯಿಸಿದ್ದ ದೂರುದಾರ, ಈ ವೇಳೆ ಸಿಬಿಐ ಅಧಿಕಾರಿಗಳಿಗೆ ಮೊದಲೇ ಮಾಹಿತಿ ನೀಡಿ ಆತನನ್ನು ಖೆಡ್ಡಾಗೆ ಕೆಡವಿದ್ದಾರೆ. ಬಳಿಕ ಆದಿಕೇಶವಲುನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನನ್ನು 5 ದಿನಗಳ ಪೊಲೀಸ್‌ ವಶಕ್ಕೆ ಒಪ್ಪಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!