ಐಎಂಎ ವಂಚನೆ ಬಿಗ್ ಟ್ವಿಸ್ಟ್;  ನಿಂಬಾಳ್ಕರ್, ಹಿಲೋರಿ ವಿಚಾರಣೆಗೆ ಸಿಬಿಐಗೆ ಸಿಕ್ತು ಒಪ್ಪಿಗೆ

Published : Sep 14, 2020, 07:18 PM ISTUpdated : Sep 14, 2020, 07:23 PM IST
ಐಎಂಎ ವಂಚನೆ  ಬಿಗ್ ಟ್ವಿಸ್ಟ್;  ನಿಂಬಾಳ್ಕರ್, ಹಿಲೋರಿ ವಿಚಾರಣೆಗೆ ಸಿಬಿಐಗೆ ಸಿಕ್ತು ಒಪ್ಪಿಗೆ

ಸಾರಾಂಶ

ಐಎಂಎ ವಂಚನೆ ಪ್ರಕರಣ/ ಇಬ್ಬರು ಐಪಿಎಸ್ ಅಧಿಕಾರಗಳ ವಿಚಾರಣೆಗೆ ಸರ್ಕಾರದಿಂದ ಸಿಬಿಐಗೆ ಒಪ್ಪಿಗೆ/ ರಾಜಕಾರಣಿಗಳ ಹೆಸರು ಕೇಳಿ ಬಂದಿತ್ತು/ ಬಹುಕೋಟಿ ವಂಚನೆಯ ಐಎಂಎ ಹಗರಣ

ಬೆಂಗಳೂರು (ಸೆ 14)  ಬಹುಕೋಟಿ  ವಂಚನೆ ಐಎಂಎ ಹಗರಣದಲ್ಲಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ಅಜಯ್ ಹಿಲೋರಿ ವಿರುದ್ಧ ಕಾನೂನು ಕ್ರಮದಡಿ ವಿಚಾರಣೆ ನಡೆಸಬಹುದು ಎಂದು ಕರ್ನಾಟಕ ಸರ್ಕಾರವು ಸಿಬಿಐಗೆ ಹೇಳಿದೆ.

ಕರ್ನಾಟಕ ಪೊಲೀಸ್ ಕಾಯ್ದೆ 1963ರ ಅಪರಾಧ ದಂಡ ಸಂಹಿತೆ ಸೆಕ್ಷನ್ 197, 170ರ ಅಡಿ ಅನುಮತಿ ನೀಡಲಾಗಿದೆ.  ಐಎಂಎ ಜ್ಯುವೆಲ್ಲರಿ ಹಗರಣ 2019ರ ಜೂನ್ ನಲ್ಲಿ ಬಯಲಿಗೆ ಬಿತ್ತು.  ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಈ ವೇಳೆ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿತ್ತು. ರಾಜಕಾರಣಿಗಳ ಹೆಸರು ಕೇಳಿ ಬಂದಿತ್ತು. 

ಐಎಂಎ ಸಿಕ್ರೇಟ್ ಡೈರಿ ರಹಸ್ಯ

ಹೂಡಿಕೆದಾರರ ನೂರಾರು ಕೋಟಿ ರುಪಾಯಿ ವಂಚನೆಯಾದ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿ, ಐಎಂಎ ಜ್ಯುವೆಲ್ಲರಿ ಮಾಲೀಕ ಮೊಹ್ಮದ್ ಮನ್ಸೂರ್ ಖಾನ್ ನನ್ನು ಬಂಧಿಸಲಾಗಿದ್ದು ಜೈಲಿನಲ್ಲಿ ಇದ್ದಾನೆ. ಈತನಿಗೆ ರಾಜಕಾರಣಿಗಳ ಸಂಪರ್ಕ ಇರುವುದು ಬಯಲಾಗಿತ್ತು.

ಐಎಂಎ ಹಗರಣವನ್ನು ಸಿಬಿಐಗೆ ವಹಿಸಲಾಯಿತು. ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಸಾವಿರ ಪುಟಗಳ ಚಾರ್ಜ್ ಶೀಟ್ ದಾಖಲು ಮಾಡಿತ್ತು ಸಿಬಿಐ ಹಾಗೂ ಆರೋಪ ಪಟ್ಟಿಯಲ್ಲಿ ಸರ್ಕಾರಿ ಅಧಿಕಾರಿಗಳ ಹೆಸರುಗಳು ಇದ್ದವು.  ಬೆಂಗೂಳೂರು ಜಿಲ್ಲಾಧಿಕಾರಿಯಾಗಿದ್ದ ಬಿಎಂ ವಿಜಯಶಂಕರ್  ಹೆಸರು ಇದ್ದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.  ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ಅಜಯ್ ಹಿಲೋರಿ ಜತೆ ಇನ್ನು ಮೂರು ಅಧಿಕಾರಿಗಳ ವಿಚಾರಣೆ ಮಾಡಲು ಒಪ್ಪಿಗೆ ನೀಡಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರಿನಲ್ಲಿ ಮತ್ತೊಂದು ರಾಬರಿ, ಗುಟ್ಕಾ ವ್ಯಾಪಾರಿಯ ಕಿಡ್ನಾಪ್‌ ಮಾಡಿ ನಗದು ದೋಚಿದ ಮಾಜಿ ರೌಡಿಶೀಟರ್ ಗ್ಯಾಂಗ್!
Bhavana Menon: 'ಮಲಯಾಳಂ ಚಿತ್ರರಂಗದ ಹೆಮ್ಮೆ' ಎಂದ ಸಚಿವರು; ನಟಿ ಭಾವನಾಗೆ ಪ್ರಶಂಸೆ ಸುರಿಮಳೆ