ಬೆಂಗಳೂರು: ಫೋನ್‌ ಕರೆ ವಿವರ ಮಾರುವ ಗ್ಯಾಂಗ್‌ ಬಲೆಗೆ

Published : May 29, 2024, 12:38 PM IST
ಬೆಂಗಳೂರು: ಫೋನ್‌ ಕರೆ ವಿವರ ಮಾರುವ ಗ್ಯಾಂಗ್‌ ಬಲೆಗೆ

ಸಾರಾಂಶ

ಸಿಡಿಆರ್ ದಂಧೆ ಜಾಲ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಹರಡಿರುವುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಾನೂನು ಬಾಹಿರವಾಗಿ ಸಿಡಿಆರ್ ಸಂಗ್ರಹದಲ್ಲಿ ಕೆಲ ಪೊಲೀಸರು ಪಾತ್ರ ವಹಿಸಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು(ಮೇ.29):  ಅಕ್ರಮವಾಗಿ ಮೊಬೈಲ್ ಕರೆಗಳ ವಿವರ (ಸಿಡಿಆರ್) ಪಡೆದು ಸಾರ್ವಜನಿಕರಿಗೆ ₹18 ರಿಂದ ₹20 ಸಾವಿರವರೆಗೆ ಮಾರಾಟ ಮಾಡುತ್ತಿದ್ದ ಖಾಸಗಿ ಮೂರು ಪತ್ತೆದಾರಿ (ಡಿಟೆಕ್ಟಿವ್) ಏಜೆನ್ಸಿಗಳ ಮಾಲೀ ಕರು ಹಾಗೂ ಕೆಲಸಗಾರರನ್ನು ಸಿಸಿಬಿ ಬಂಧಿಸಿದೆ.

ಕೆಂಗೇರಿ ಉಪ ನಗರದ ಡೈಮಂಡ್ ಸ್ಟ್ರೀಟ್ ನಿವಾಸಿ ಪುರುಷೋತ್ತಮ್, ಮಾರತ್ತಹಳ್ಳಿಯ ಜಿ.ಕೆ.ತಿಪ್ಪೇ ಸ್ವಾಮಿ, ಭಾರತ್ ನಗರದ ಮಹಾಂತಗೌಡ ಪಾಟೀಲ್, ವಿಜಯನಗರದ ರೇವಂತ, ದಾಸನಪುರದ ಅಡಕ ಮಾರನಹಳ್ಳಿಯ ಗುರುಪಾದಸ್ವಾಮಿ, ಕೊತ್ತನೂರಿನ ರಾಜಶೇಖರ್, ಸತೀಶಕುಮಾರ್, ಜೆ.ಸಿ.ನಗರ ಕುರುಬರಹಳ್ಳಿಯ ವಿ.ಶ್ರೀನಿವಾಸ್, ಭರತ್ ಹಾಗೂ ಮಹಾರಾಷ್ಟ್ರದ ಪುಣೆ ಮೂಲದ ಪ್ರಸನ್ನ ದತ್ತಾತ್ರೇಯ ಗರುಡಾ ಬಂಧಿತರಾಗಿದ್ದಾರೆ. ಆರೋಪಿಗಳಿಂದ 43 ಮೊಬೈಲ್ ಸಂಖ್ಯೆಗಳ ಸಿಡಿಆರ್ ವಿವರ ಹಾಗೂ ಕೆಲ ಡಿಜಿಟಲ್ ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ರಮ ಸಿಡಿಆರ್‌ ದಂಧೆ ಮಾಹಿತಿ ಹಿನ್ನೆಲೆಯಲ್ಲಿ ನಗರ' ಹಾಗೂ 'ಎಲೆಗೆಂಟ್' ಹೆಸರಿನ ಡಿಟೆಕ್ಟಿವ್ ಏಜೆನ್ಸಿಗಳ ಮೇಲೆ ಸಿಸಿಬಿ ಪ್ರತ್ಯೇಕವಾಗಿ ದಾಳಿ ನಡೆಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಲಾಕಪ್ ಡೆತ್ ಆರೋಪ ಪ್ರಕರಣ; ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿ, ಪೆಟ್ರೋಲ್ ಸುರಿದು ಜೀಪ್‌ಗೆ ಬೆಂಕಿ ಹಚ್ಚಿದ ದುರುಳರು!

ಸಿಡಿಆರ್ ದಂಧೆ ಹೇಗೆ?: 

ಪ್ರಶಾಂತನಗರದಲ್ಲಿ ಮಹಾನಗರಿ ಡಿಟೆಕ್ಟಿವ್ ಆ್ಯಂಡ್ ಸೆಕ್ಯೂರಿಟಿ ಸರ್ವೀಸ್ ಅನ್ನು ಸತೀಶ್ ನಡೆಸುತ್ತಿದ್ದರೆ, ಗೋವಿಂದರಾಜನಗರದ 4ನೇಮುಖ್ಯ ರಸ್ತೆಯಲ್ಲಿ ರಾಜಧಾನಿಕಾರ್ಪೋರೇಷನ್ ಹೆಸರಿನ ಡಿಟೆಕ್ಟಿವ್ ಏಜೆನ್ಸಿಯನ್ನು ಪುರುಷೋತ್ತಮ್ ಹೊಂದಿದ್ದ. ಬಸವೇಶ್ವರನಗರದ 3ನೇ ಹಂತದ ಎಲ್‌ಐಸಿ ಕಾಲೋನಿಯಲ್ಲಿ ಏಜೆನ್ಸಿಯನ್ನು ಶ್ರೀನಿವಾಸ್ ನಡೆಸುತ್ತಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಈ ಸಿಡಿಆರ್‌ದಂಧೆಯಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಪ್ರಸನ್ನ ಪ್ರಮುಖ ಪಾತ್ರವಹಿಸಿದ್ದು, ಆತನ ಮೂಲಕ ಡಿಟೆಕ್ಟಿವ್ ಏಜೆನ್ಸಿಗಳ ಮಾಲೀಕರು ಸಿಡಿಆರ್ ಪಡೆಯುತ್ತಿದ್ದರು. ಅಲ್ಲದೆ ಈ ಕೃತ್ಯದಲ್ಲಿ ಸ್ಥಳೀಯರು ಸಾಥ್ ಕೊಟ್ಟಿದ್ದಾರೆ. ಹೀಗೆ ಸಂಗ್ರಹಿಸಿದ ಸಿಡಿಆರ್ ಗಳನ್ನು ತಮ್ಮ ಏಜೆನ್ಸಿ ಕೆಲಸಗಾರರ ಮೂಲಕ 18-20 ಸಾವಿರ ರು.ಗೆ ಮಾಲೀಕರು ಮಾರುತ್ತಿದ್ದರು ಎಂದು

ಗ್ರಾಹಕರ ಸೋಗಿನಲ್ಲಿ ಸಿಸಿಬಿ ದಾಳಿ : 

ಸಿಡಿಆರ್‌ ದಂಧೆ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ತಮಗೆ ಸಿಡಿಆರ್‌ ಬೇಕು ಎಂದು ಆರೋಪಿತ ಡಿಟೆಕ್ಟಿವ್ ಏಜೆನ್ಸಿಗಳನ್ನು ಗ್ರಾಹಕರ ಸೋಗಿನಲ್ಲಿ ಸಂಪರ್ಕಿಸಿದ್ದಾರೆ. ಆಗ ಹಣದ ಡೀಲ್ ನಡೆದು ಸಿಡಿಆರ್ ನೀಡಲು ಸತೀಶ್, ಶ್ರೀನಿವಾಸ್ ಹಾಗೂ ಪುರುಷೋತ್ತಮ್ ತಂಡ ಒಪ್ಪಿದೆ. ಪೂರ್ವ ಒಪ್ಪಂದಂತೆ ಪುಣೆಯ ಪ್ರಸನ್ನ ಮೂಲಕ ಸಿಸಿಡಿ ತಂಡಕ್ಕೆ ಸಿಡಿಆರ್ ಅನ್ನು ಏಜೆನ್ಸಿಗಳು ನೀಡಿದ್ದವು. ಆಗ ಆ ಏಜೆನ್ಸಿಗಳ ಮೇಲೆ ದಾಳಿ ನಡೆಸಿ ಮಾಲೀಕರು ಹಾಗೂ ಅವರ ಕೆಲಸಗಾರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಮಹಾರಾಷ್ಟ್ರ, ಆಂಧ್ರದಲ್ಲೂ ಇಂಥ ಜಾಲ; ಪೊಲೀಸರ ಮೇಲೂ ಶಂಕೆ

ಸಿಡಿಆರ್ ದಂಧೆ ಜಾಲ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಹರಡಿರುವುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಾನೂನು ಬಾಹಿರವಾಗಿ ಸಿಡಿಆರ್ ಸಂಗ್ರಹದಲ್ಲಿ ಕೆಲ ಪೊಲೀಸರು ಪಾತ್ರ ವಹಿಸಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ದಂಧೆಗೆ ಪೊಲೀಸರ ನೆರವಿಲ್ಲದೆ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.

ಮಹಿಳೆಯರ ಶೋಷಣೆ

ಮೊದಲು ರಾಜಧಾನಿ ಕಾರ್ಪೋರೇಷನ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಜನವರಿಯಲ್ಲಿ ಆ ಏಜೆನ್ಸಿಯಲ್ಲಿ ಕೆಲಸ ತೊರೆದು ಮಹಾನಗರ ಹೆಸರಿನಲ್ಲಿ ತಾನೇ ಹೊಸದಾಗಿ ಡಿಟಿ ಕ್ಟಿವ್ ಏಜೆನ್ಸಿ ಆರಂಭಿ ಸಿದ್ದ. ಇನ್ನು ಸುಬ್ರಹ್ಮಣ್ಯನಗರ, ಬಾಗಲ ಗುಂಟೆ ಹಾಗೂ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗಳಲ್ಲಿ ಆತನ ಮೇಲೆ ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದಡಿ ಮೇರೆಗೆ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಬ್ಬಳ್ಳಿ: ನೇಹಾ, ಅಂಜಲಿ ಹಂತಕರ ಪರ ವಕಾಲತ್ತು ವಹಿಸಲು ವಕೀಲರೇ ಸಿಗುತ್ತಿಲ್ಲ..!

ಪೊಲೀಸರಿಗೆ ಮಾತ್ರ ಅಧಿಕಾರ

ಅಪರಾಧ ಪ್ರಕರಣಗಳ ಆರೋಪಿಗಳಿಗೆ ಸಂಬಂಧಿಸಿದ ಮೊಬೈಲ್ ಕರೆಗಳ ವಿವರ (ಸಿಡಿಆರ್) ಪಡೆಯಲು ಕಾನೂನು ಪ್ರಕಾರ ತನಿಖಾಧಿಕಾರಿಗಳಿಗೆ ಅಧಿಕಾರವಿದೆ. ಈ ಸಿಡಿಆರ್ ಪಡೆಯಲು ನಗರಗಳಲ್ಲಿ ಡಿಸಿಪಿ ಹಾಗೂ ಜಿಲ್ಲೆಗಳಲ್ಲಿ ಎಸ್ಪಿ ಅವರ ಅನುಮತಿ ಪಡೆಯಬೇಕು. ಅಲ್ಲದೆ ಸಿಡಿಆರ್ ಸಂಗ್ರಹಿಸುವ ಮುನ್ನ ಆ ಅಪರಾಧ ಕೃತ್ಯದಲ್ಲಿ ಆರೋಪಿತನ ಪಾತ್ರದ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸಬೇಕು. ಈ ಕಾನೂನು ಪ್ರಕ್ರಿಯೆ ಬಳಿಕ ಸಿಡಿಆರ್ ತನಿಖಾಧಿಕಾರಿಗೆ ಸಿಗುತ್ತದೆ.

ಯಾರ ಸಿಡಿಆರ್‌ಗಳು ಬಳಕೆ?

ಪತ್ನಿಯರ ಮೇಲೆ ಶಂಕೆ ವ್ಯಕ್ತಪಡಿಸಿ ಪತಿಯರು, ಕೌಟುಂಬಿಕ ಕಲಹಗಳ ಪ್ರಕರಣಗಳ ಆರೋಪಿಗಳು, ವ್ಯವಹಾರಿಕ ಪಾಲುದಾರರು ಹಾಗೂ ರೌಡಿಗಳು ಸಹ ಸಿಡಿಆರ್ ಪಡೆದಿರುವ ಬಗ್ಗೆ ಶಂಕೆ ಇದೆ. ಈಗ ಡಿಟೆಕ್ಟಿವ್ ಏಜೆನ್ಸಿಗಳ ಬಳಿ 43 ಮೊಬೈಲ್ ಸಂಖ್ಯೆಗಳ ಮಾಹಿತಿ ಸಿಕ್ಕಿದ್ದು, ಇವುಗಳ ಪೂರ್ವಾಪರ ವಿವರ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ