
ಬೆಂಗಳೂರು(ಜು. 01) ಬಹುಕೋಟಿ ವಂಚನೆ ಆರೋಪದ ಮೇಲೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಪಿಎ ಬಂಧನವಾಗಿದೆ. ಸಚಿವರ ಹೆಸರಲ್ಲಿ ಕೋಟ್ಯಂತರ ರೂ. ವಸೂಲಿ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶ್ರೀರಾಮುಲು ಪಿಎ ರಾಜು ವಿರುದ್ದ ಸಿಸಿಬಿಗೆ ದೂರುಗಳು ಬಂದಿದ್ದವು. ದೂರುಗಳ ಹಿನ್ನೆಲೆ ಅಧಿಕಾರಿಗಳಿಂದ ಸಚಿವರ ಪಿಎ ಬಂಧನವಾಗಿದೆ. ವಂಚನೆ ಸಂಬಂಧಿಸಿದ ಸಾಕ್ಷಿಗಳನ್ನ ಕಲೆ ಹಾಕಿ ಬಂಧಿಸಲಾಗಿದೆ.
ಯುವಕರೇ ಹುಷಾರ್, ಬಣ್ಣದ ಮಾತಿಗೆ ಮರುಳಾದರೆ ಟೋಪಿ
ಸಿಎಂ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹಾಗೂ ಶ್ರೀರಾಮುಲು ಹೆಸರು ಹೇಳಿಕೊಂಡು ವಂಚನೆ ಮಾಡಿದ್ದಾರೆ ಎನ್ನುವುದು ಆರೋಪ. ಕೆಲಸ ಕೊಡಿಸುತ್ತೇನೆ ಎಂದು ಹೇಳಿ ವಂಚಿಸಿದ್ದರು ಎನ್ನಲಾಗಿದೆ.
ಗುರುವಾರ ಸಂಜೆ ಸಚಿವ ಶ್ರೀರಾಮುಲು ಮನೆಯ ಬಳಿ ಪಿಎ ರಾಜುವನ್ನು ವಶಕ್ಕೆ ಪಡೆಯಲಾಗಿದೆ. ಹಲವು ವರ್ಷಗಳಿಂದ ಶ್ರೀರಾಮುಲು ಜತೆಗಿದ್ದು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಜನಾರ್ದನ ರೆಡ್ಡಿ ಅವವರಿಗೂ ಆಪ್ತವಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ