‘ಆದಿತ್ಯ ಆಳ್ವಾ ಡ್ರಗ್ಸ್‌ ಪೆಡ್ಲರ್‌, ಆತನ ಕೇಸ್‌ ರದ್ದು ಮಾಡಬೇಡಿ’

Kannadaprabha News   | Asianet News
Published : Oct 17, 2020, 07:55 AM ISTUpdated : Oct 17, 2020, 08:15 AM IST
‘ಆದಿತ್ಯ ಆಳ್ವಾ ಡ್ರಗ್ಸ್‌ ಪೆಡ್ಲರ್‌, ಆತನ ಕೇಸ್‌ ರದ್ದು ಮಾಡಬೇಡಿ’

ಸಾರಾಂಶ

ಆಳ್ವಾ ವಿರುದ್ಧ ಸಾಕ್ಷ್ಯಾಧಾರಗಳಿವೆ, ಹೈಕೋರ್ಟ್‌ಗೆ ಸಿಸಿಬಿ ಮನವಿ|ಆಳ್ವಾ ಇತರೆ ಆರೋಪಿಗಳಿಗೆ ಡ್ರಗ್ಸ್‌ ಮಾರಾಟ ಮಾಡಿರುವ ಬಗ್ಗೆ ತನಿಖೆ ವೇಳೆ ಸಾಕ್ಷ್ಯಧಾರಗಳು ತನಿಖೆ ವೇಳೆ ಲಭ್ಯ| ನ್ಯಾಯಾಲಯವು ಎಫ್‌ಐಆರ್‌ ರದ್ದುಪಡಿಸಿದರೆ ಅಥವಾ ತಡೆಯಾಜ್ಞೆ ನೀಡಿದರೆ ತನಿಖೆಗೆ ಅಡ್ಡಿ| 

ಬೆಂಗಳೂರು(ಅ.17): ಡ್ರಗ್ಸ್‌ ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಆದಿತ್ಯ ಆಳ್ವಾ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದು ಪಡಿಸಬಾರದು ಎಂದು ಸಿಸಿಬಿ ಪೊಲೀಸರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಡ್ರಗ್ಸ್‌ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದು ಪಡಿಸುವಂತೆ ಕೋರಿ ಆದಿತ್ಯಾ ಆಳ್ವಾ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ ಮುಂದೆ ಶುಕ್ರವಾರ ಬಂದಾಗ ಸಿಸಿಬಿ ಪೊಲೀಸರ ಪರ ವಕೀಲರು ಹಾಜರಾಗಿ ಆಕ್ಷೇಪಣೆ ಸಲ್ಲಿಸಿದ್ದಾರೆ. 

ಎಲ್ಲಿದ್ದರೂ ಬಲೆಗೆ ಬೀಳಲೇಬೇಕು, ಅಂಥಾ ಪ್ಲಾನ್ ಮಾಡಿದೆ ಸಿಸಿಬಿ!

ಡ್ರಗ್ಸ್‌ ಪ್ರಕರಣದಲ್ಲಿ ಭಾಗಿಯಾಗಿರುವ ಆದಿತ್ಯ ಆಳ್ವಾ ಡ್ರಗ್ಸ್‌ ಪೆಡ್ಲರ್‌ ಆಗಿದ್ದು, ಪ್ರಕರಣದ ಇತರೆ ಆರೋಪಿಗಳಿಗೆ ಡ್ರಗ್ಸ್‌ ಮಾರಾಟ ಮಾಡಿರುವ ಬಗ್ಗೆ ತನಿಖೆ ವೇಳೆ ಸಾಕ್ಷ್ಯಧಾರಗಳು ತನಿಖೆ ವೇಳೆ ಲಭ್ಯವಾಗಿದೆ. ಡ್ರಗ್ಸ್‌ ಮಾರಾಟದ ಜತೆಗೆ ಸೇವನೆ ಮಾಡಿರುವ ಬಗ್ಗೆಯೂ ತನಿಖೆ ವೇಳೆ ತಿಳಿದು ಬಂದಿದೆ. ಸದ್ಯ ತಲೆ ಮರೆಸಿಕೊಂಡಿರುವ ಆತನ ಪತ್ತೆಗೆ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.

ಅಲ್ಲದೆ, ಆದಿತ್ಯಾ ಆಳ್ವಾ ವಿರುದ್ಧದ ಪ್ರಕರಣ ತನಿಖಾ ಹಂತದಲ್ಲಿರುವ ಸಂದರ್ಭದಲ್ಲಿ ಎಫ್‌ಐಆರ್‌ ರದ್ದತಿಗೆ ಅರ್ಜಿ ಸಲ್ಲಿಸಿರುವುದು ಅಪ್ರಸ್ತುತ ಹಾಗೂ ಅಪಕ್ವತೆಯಿಂದ ಕೂಡಿದೆ. ಒಂದೊಮ್ಮೆ ನ್ಯಾಯಾಲಯವು ಎಫ್‌ಐಆರ್‌ ರದ್ದುಪಡಿಸಿದರೆ ಅಥವಾ ತಡೆಯಾಜ್ಞೆ ನೀಡಿದರೆ ತನಿಖೆಗೆ ಅಡ್ಡಿಯಾಗಲಿದೆ. ಆದ್ದರಿಂದ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು. ಈ ಆಕ್ಷೇಪಣೆ ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಒಂದು ವಾರ ಮುಂದೂಡಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!