ರಾಗಿಣಿ ಸ್ನೇಹಿತನ ಲಕ್ಷುರಿ ಲೈಫ್‌ಗೆ ಬೆಚ್ಚಿಬಿದ್ದ ಸಿಸಿಬಿ..!

Kannadaprabha News   | Asianet News
Published : Sep 06, 2020, 08:36 AM ISTUpdated : Sep 06, 2020, 10:10 AM IST
ರಾಗಿಣಿ ಸ್ನೇಹಿತನ ಲಕ್ಷುರಿ ಲೈಫ್‌ಗೆ ಬೆಚ್ಚಿಬಿದ್ದ ಸಿಸಿಬಿ..!

ಸಾರಾಂಶ

ಬಂಧಿತ ರವಿಶಂಕರ್‌ ಆರ್‌ಟಿಒ ಕಚೇರಿ ದ್ವಿತೀಯ ದರ್ಜೆ ಸಹಾಯಕ|ರಾಗಿಣಿ ಜತೆ ಹೋಟೆಲ್‌, ಪಾರ್ಟಿ, ಸುತ್ತಾಟ| ಶ್ರೀಮಂತರಿಗೆ ಫ್ಯಾನ್ಸಿ ನಂಬರ್‌ ಕೊಡಿಸುತ್ತಿದ್ದ ಆರೋಪಿ ಜೊತೆಗೆ ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಸಿ ಹಣ ಸಂಪಾದನೆ| 

ಬೆಂಗಳೂರು(ಸೆ.06): ಕನ್ನಡ ಚಿತ್ರರಂಗದ ಮಾದಕ ವಸ್ತು ನಂಟು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಖ್ಯಾತ ನಟಿ ರಾಗಿಣಿ ದ್ವಿವೇದಿಯ ಆಪ್ತನೂ ಆದ ಸಾರಿಗೆ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ರವಿಶಂಕರ್‌ನ ಐಷಾರಾಮಿ ಜೀವನ ನೋಡಿ ಸಿಸಿಬಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.

"

ಜಯನಗರ ಆರ್‌ಟಿಒ ಕಚೇರಿಯಲ್ಲಿ ಸಾಮಾನ್ಯ ದ್ವಿತೀಯ ದರ್ಜೆ ಸಹಾಯಕನ ಹುದ್ದೆಯಲ್ಲಿದ್ದ ಈತ ನಿತ್ಯ ಹೋಟೆಲ್‌, ಪಾರ್ಟಿ ಎಂದು ಬೇಕಾಬಿಟ್ಟಿ ಹಣ ಖರ್ಚು ಮಾಡುತ್ತಿದ್ದ. ಸರ್ಕಾರದಿಂದ ಅಂದಾಜು 35 ಸಾವಿರ ವೇತನ ಪಡೆಯುತ್ತಿದ್ದ ಆರೋಪಿಗೆ ಇಂತಹ ಬದುಕು ಹೇಗೆ ಸಾಧ್ಯ ಎಂದು ಅಧಿಕಾರಿಗಳು ಕಂಗಾಲಾಗಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ರವಿಶಂಕರ್‌ ಲ್ಯಾವೆಲ್ಲೆ ರಸ್ತೆಯಲ್ಲಿ ವಾಸವಿದ್ದ. ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದು, ಪುತ್ರಿಯೊಂದಿಗೆ ವಾಸವಿದ್ದ ಎನ್ನಲಾಗಿದೆ. ಜಯನಗರ ಆರ್‌ಟಿಒ ಕಚೇರಿಯಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಸಿರಿವಂತರಿಗೆ ತಮ್ಮಿಷ್ಟದ ಕಾರಿನ ನೋಂದಣಿ ಸಂಖ್ಯೆ ಹಾಗೂ ಫ್ಯಾನ್ಸಿ ನಂಬರ್‌ ಕೊಡಿಸುತ್ತಿದ್ದ. ಈ ಮೂಲಕ ಹಲವು ಪ್ರಭಾವಿಗಳ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.

ಡ್ರಗ್ಸ್‌ ಮಾಫಿಯಾ: ರಾಗಿಣಿ ಸ್ನೇಹಿತ ರವಿಶಂಕರ್‌ ವಿರುದ್ಧ ಪ್ರತ್ಯೇಕ FIR

ಕಳೆದ ನಾಲ್ಕು ವರ್ಷಗಳ ಹಿಂದೆ ರವಿಶಂಕರ್‌ಗೆ ನಟಿ ರಾಗಿಣಿ ಪಾರ್ಟಿಯೊಂದರಲ್ಲಿ ಪರಿಚಯವಾಗಿದ್ದರು. ಕ್ರಮೇಣ ರಾಗಿಣಿ ಮತ್ತು ರವಿಶಂಕರ್‌ ನಡುವೆ ಹೆಚ್ಚು ಆಪ್ತತೆ ಮೂಡಿತ್ತು. ರಾಗಿಣಿಯ ಸಿನಿಮಾದ ಪ್ರತಿಯೊಂದು ಕಾರ್ಯಕ್ರಮ ಹಾಗೂ ಪಾರ್ಟಿಯಲ್ಲಿ ರವಿಶಂಕರ್‌ ಪಾಲ್ಗೊಳ್ಳುತ್ತಿದ್ದ. ನಿತ್ಯ, ಹೋಟೆಲ್‌, ಪಬ್‌, ಪಾರ್ಟಿ ಎಂದು ರಾಗಿಣಿ ಹಾಗೂ ಆರೋಪಿ ಸುತ್ತಾಡುತ್ತಿದ್ದರು. ಅಲ್ಲದೆ, ಬೆಂಗಳೂರು ಹೊರತುಪಡಿಸಿ ಗೋವಾ ಸೇರಿದಂತೆ ಹೊರ ರಾಜ್ಯಗಳಿಗೂ ತೆರಳಿ ಪಾರ್ಟಿ ಮಾಡಿದ್ದಾರೆ.

ಇನ್ನು ಮತ್ತೊಬ್ಬ ಬಂಧಿತ ವೀರೇನ್‌ ಖನ್ನಾ ಆಯೋಜಿಸುತ್ತಿದ್ದ ಡ್ರೈವ್‌ ಇನ್‌ ಥಿಯೇಟರ್‌ ಈವೆಂಟ್‌ ಕಾರ್ಯಕ್ರಮದಲ್ಲೂ ಇವರು ಪಾಲ್ಗೊಳ್ಳುತ್ತಿದ್ದರು. ಇದಕ್ಕೆ ತಗಲುವ ವೆಚ್ಚವನ್ನು ಆರೋಪಿಯೇ ಭರಿಸುತ್ತಿದ್ದ ಎಂದು ತಿಳಿದುಬಂದಿದೆ. ಸರ್ಕಾರಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕನೊಬ್ಬ ಈ ರೀತಿ ಐಷಾರಾಮಿ ಜೀವನ ಸಾಗಿಸಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಇದೀಗ ಎದ್ದಿದೆ. ಆರ್‌ಟಿಓ ಕಚೇರಿಯಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾನೆಯೇ? ಅಥವಾ ಮಾದಕ ವಸ್ತುವನ್ನು ಚಿತ್ರರಂಗಕ್ಕೆ ಪೂರೈಸಿ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾನೆಯೇ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.

ಇನ್ನು ರವಿಶಂಕರ್‌ ದ್ವಿತೀಯ ದರ್ಜೆ ಸಹಾಯಕ ಹುದ್ದೆಯನ್ನು ಪರೀಕ್ಷೆ ಬರೆದು ಪಡೆದು ಪಡೆದಿಲ್ಲ. ಬದಲಿಗೆ ಆತನ ತಂದೆ ಉದ್ಯೋಗದಲ್ಲಿದ್ದ ವೇಳೆ ನಿಧನರಾಗಿದ್ದರು. ಅನುಕಂಪದ ಆಧಾರದ ಹಿನ್ನೆಲೆಯಲ್ಲಿ ಆರೋಪಿ ಸರ್ಕಾರಿ ಹುದ್ದೆ ಗಿಟ್ಟಿಸಿದ್ದ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!