ಚಾಮರಾಜನಗರದಲ್ಲಿ ಮನಿ ಡಬ್ಲಿಂಗ್ ಶಾಕಿಂಗ್ ಕೇಸ್, ವಂಚಕರಿಗೆ ಪೊಲೀಸರಿಂದಲೇ ಸಾಥ್!?

Published : Jul 27, 2025, 09:32 PM IST
Chamarajanagar money dubling case

ಸಾರಾಂಶ

ಚಾಮರಾಜನಗರದಲ್ಲಿ ಮನಿ ಡಬ್ಲಿಂಗ್ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ 3 ಲಕ್ಷ ರೂಪಾಯಿ ವಂಚಿಸಲಾಗಿದೆ. ಆಘಾತಕಾರಿಯಾಗಿ, ಈ ವಂಚನೆಯಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಒಟ್ಟು ಏಳು ಮಂದಿಯ ವಿರುದ್ಧ ದೂರು ದಾಖಲಾಗಿದೆ.

ಚಾಮರಾಜನಗರ (ಜುಲೈ.27): ಮನಿ ಡಬ್ಲಿಂಗ್ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆಯೊಂದು ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದ್ದು, ಆಘಾತಕಾರಿಯೆಂದರೆ ಈ ವಂಚನೆಗೆ ಪೊಲೀಸರೇ ಸಾಥ್ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ತಮಿಳುನಾಡು ಮೂಲದ ಸಚ್ಚಿದಾನಂದಮೂರ್ತಿ ಎಂಬವರು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಅನ್ಸಾರಿ ಎಂಬಾತನು ಮನಿ ಡಬ್ಲಿಂಗ್ ಮಾಡಿಕೊಡುವುದಾಗಿ ಸಚ್ಚಿದಾನಂದಮೂರ್ತಿಯವರಿಗೆ ನಂಬಿಸಿದ್ದಾನೆ. ಈ ಮಾತಿನ ಮೇಲೆ ಭರವಸೆಯಿಟ್ಟು ಸಚ್ಚಿದಾನಂದಮೂರ್ತಿ 3 ಲಕ್ಷ ರೂಪಾಯಿಗಳನ್ನು ಅವರು ಹೇಳಿದ್ದ ಖಾಸಗಿ ಹೋಟೆಲ್‌ನ ರೂಂಗೆ ತಂದಿದ್ದಾರೆ. ಮೂರು ಲಕ್ಷ ರೂಪಾಯಿಗಳನ್ನು ಕೊಡುತ್ತಿದ್ದ ವೇಳೆ ದಿಢೀರ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಪೊಲೀಸರು 3 ಲಕ್ಷ ರೂಪಾಯಿಗಳನ್ನು ಕಿತ್ತುಕೊಂಡು, ಮತ್ತೆ ಒಂದು ಲಕ್ಷ ರೂಪಾಯಿ ಕೊಡುವಂತೆ ಸಚ್ಚಿದಾನಂದಮೂರ್ತಿಯವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ, ಸೈಯದ್ ಇಮ್ರಾನ್ ಎಂಬಾತನ ಖಾತೆಗೆ 70 ಸಾವಿರ ರೂಪಾಯಿಗಳನ್ನು ಗೂಗಲ್ ಪೇ ಮೂಲಕ ವರ್ಗಾಯಿಸುವಂತೆ ಪೊಲೀಸರು ಒತ್ತಾಯಿಸಿದ್ದಾರೆ. ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರು ಈ ವಂಚನೆಯಲ್ಲಿ ಆರೋಪಿಗಳೊಂದಿಗೆ ಸೇರಿಕೊಂಡು ಪೂರ್ವನಿಯೋಜಿತವಾಗಿ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಒಟ್ಟು ಏಳು ಮಂದಿಯ ವಿರುದ್ಧ ದೂರು ದಾಖಲಾಗಿದೆ.

ಈ ಘಟನೆಯಿಂದಾಗಿ ಚಾಮರಾಜನಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಮನಿ ಡಬ್ಲಿಂಗ್, ವಂಚನೆ ವಿರುದ್ಧ ಕ್ರಮ ಜರುಗಿಸಬೇಕಾದ ಪೊಲೀಸರೇ ವಂಚಕರೊಂದಿಗೆ ಸೇರಿಕೊಂಡ ಅಮಾಯಕ ಜನರ ಹಣ ದೋಚುತ್ತಿರುವುದು ಇಡೀ ಪೊಲೀಸ್ ಇಲಾಖೆ ಕಳಂಕವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!