
ಕೊಳ್ಳೇಗಾಲ (ಜೂ.21): ಸುವರ್ಣಾವತಿ ಹೊಳೆ ದಡದಲ್ಲಿ ದೊರೆತಿದ್ದ ಸೋನಾಕ್ಷಿ ಎಂಬ ಮಹಿಳೆಯ ಬ್ರೂಟಲ್ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಆಕೆಯ ಪ್ರಿಯಕರ ಮಾದೇಶನಿಂದಲೇ ಈ ಭೀಕರ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ.
ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನ ಸಹವಾಸ ಮಾಡಿ ಬೀದಿ ಹೆಣವಾದಳು ಸೋನಾಕ್ಷಿ, ಮದುವೆಯಾಗಿದ್ರೂ ಮಕ್ಕಳಿದ್ರೂ ಮಾದೇಶನ ಜೊತೆಗೆ ಪ್ರೇಮ ಸಂಬಂಧ ಹೊಂದಿದ್ದ ಸೋನಾಕ್ಷಿ ಬಳಿಕ ಮತ್ತೊರ್ವನ ಜೊತೆ ಸಂಪರ್ಕ ಬೆಳೆಸಿದ್ದಳು ಎನ್ನಲಾಗಿದೆ. ಈ ವಿಚಾರವನ್ನು ಮಾದೇಶ, ಸೋನಾಕ್ಷಿಯ ಕುಟುಂಬಸ್ಥರಿಗೆ ತಿಳಿಸಿದ್ದನು. ಇದರಿಂದ ಇಬ್ಬರ ನಡುವೆ ಜಗಳ ಉಂಟಾಗಿತ್ತು.
ನಾಲ್ಕು ದಿನಗಳ ಹಿಂದೆ ಮಾದೇಶ, ಸೋನಾಕ್ಷಿಯನ್ನು ಮನೆಗೆ ಕರೆಸಿಕೊಂಡಿದ್ದ. ವಾಗ್ವಾದ ತಾರಕಕ್ಕೇರಿದಾಗ, ಕೋಪಗೊಂಡ ಮಾದೇಶ ಸೋನಾಕ್ಷಿಯ ತಲೆಗೆ ಹೊಡೆದಿದ್ದಾನೆ. ಒಂದೇ ಏಟಿಗೆ ಸೋನಾಕ್ಷಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನಂತರ, ಪಾತಕಿ ಮಾದೇಶ ಆಕೆಯ ಮೃತದೇಹವನ್ನು ಸುವರ್ಣಾವತಿ ಹೊಳೆ ದಡಕ್ಕೆ ತಂದು ಹೂತಿದ್ದಾನೆ.
ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಆರೋಪಿ ಮಾದೇಶನನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ ಹಳೆ ಹಂಪಾಪುರದಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ