ಬೆಂಗಳೂರು ಬಳಿಕ ಚಾಮರಾಜನಗರದಲ್ಲೂ ಸಿನಿಮಾ ಸ್ಟೈಲ್ ರಾಬರಿ: 1.3 ಕೆಜಿ ಚಿನ್ನ ದರೋಡೆ

Published : Nov 22, 2025, 04:36 PM IST
crime news

ಸಾರಾಂಶ

ಕಾರನ್ನು ಫಾಲೋ ಮಾಡಿಕೊಂಡು ಬಂದ ಗ್ಯಾಂಗ್ ಸಿನಿಮಾ ಸ್ಟೈಲ್ ನಲ್ಲಿ ಬಂಡೀಪುರದ ಅರಣ್ಯದಲ್ಲಿ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಚಿನ್ನ ದರೋಡೆ ಮಾಡಿ ಹೋಗಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ.

ವರದಿ: ಪುಟ್ಟರಾಜು.ಆರ್. ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.

ಚಾಮರಾಜನಗರ (ನ.22): ಬೆಂಗಳೂರು ರಾಬರಿ ಪ್ರಕರಣ ಮರೆಮಾಚುವ ಮುನ್ನವೇ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೂಡ ರಾಬರಿ ಪ್ರಕರಣ ನಡೆದಿದೆ. ಕಾರನ್ನು ಫಾಲೋ ಮಾಡಿಕೊಂಡು ಬಂದ ಗ್ಯಾಂಗ್ ಸಿನಿಮಾ ಸ್ಟೈಲ್ ನಲ್ಲಿ ಬಂಡೀಪುರದ ಅರಣ್ಯದಲ್ಲಿ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಚಿನ್ನ ದರೋಡೆ ಮಾಡಿ ಹೋಗಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ. ಹೌದು ಬೆಂಗಳೂರು ರಾಬರಿ ಪ್ರಕರಣ ಮರೆ ಮಾಚುವ ಮುನ್ನವೇ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೂಡ ದರೋಡೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಿಂದ ಕೇರಳಕ್ಕೆ ಹಾದು ಹೋಗುವ ರಸ್ತೆಯಲ್ಲಿ ಈ ದರೋಡೆ ನಡೆದಿದೆ.

ಮೂರು ಕಾರಿನಿಂದ ಬಂದ ದರೋಡೆ ಗ್ಯಾಂಗ್ ಬ್ರಿಜಾ ಕಾರಿನಲ್ಲಿ ಚಿನ್ನ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನ ಹಿಂಭಾಗ ಹಾಗೂ ಮುಂಭಾಗಕ್ಕೆ ಡಿಕ್ಕಿ ಹೊಡೆದು ಕಾರು ನಿಲ್ಲಿಸಿ ಕಾರಿನ ಸೀಟು ಹರಿದು 1.3 ಕೆಜಿ ತೂಕದ ಚಿನ್ನದ ಗಟ್ಟಿಯನ್ನು ಹೊತ್ತೊಯ್ದಿದ್ದಾರೆ. ಕಾರಿನಲ್ಲಿದ್ದ ವಿನು ಹಾಗೂ ಸಮೀರ್ ಎಂಬ ಇಬ್ಬರಿಗೂ ಕೂಡ ಹಲ್ಲೆ ನಡೆಸಿ ಚಿನ್ನವನ್ನು ಹೊತ್ತು ಹೋಗಿದ್ದಾರೆ. ಅಲ್ಲದೇ ವಿನು ಹಾಗೂ ಕಾರು ಚಾಲಕ ಇಬ್ಬರನ್ನೂ ಕೂಡ ಕಾರಿನಲ್ಲಿ ಕಿಡ್ನಾಪ್ ಮಾಡಿ ಮೈಸೂರಿನ ವಿರಾಜಪೇಟೆ ರಸ್ತೆಯಲ್ಲಿ ಇಳಿಸಿ ಹೋಗಿದ್ದಾರೆ.

ಇನ್ನೂ ಈ ಪ್ರಕರಣದ ಬಗ್ಗೆ ಪ್ರತಿಕ್ರಯಿಸಿದ ಎಸ್ಪಿ ಡಾ ಕವಿತಾ ಮಂಡ್ಯದಿಂದ ಚಿನ್ನ ತೆಗೆದುಕೊಂಡು ಕೇರಳಕ್ಕೆ ಹೋಗುತ್ತಿದ್ದರು.ಎರಡು ಇರಟಿಗಾ ಹಾಗೂ ಒಂದು ಇನ್ನೊವಾ ಕಾರಿನಲ್ಲಿ ಬಂದ 12 ಜನರ ಗುಂಪು ಪೂರ್ವ ನಿಯೋಜಿತ ಪ್ಲ್ಯಾನ್ ಮಾಡಿ ಬಂಡೀಪುರದ ಅರಣ್ಯದಲ್ಲಿ ಕಾರು ನಿಲ್ಲಿಸಿ ಚಿನ್ನವನ್ನು ಕದ್ದಿದ್ದಾರೆ. ಯಾವ ಸ್ಥಳದಲ್ಲಿ, ಯಾವ ವೇಳೆ ದರೋಡೆ ಮಾಡಬೇಕು ಎಂದು ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದರು. ಅಲ್ಲದೇ ಎರಡು ವರ್ಷದ ಹಿಂದೆ ಕೂಡ ಗುಂಡ್ಲುಪೇಟೆ ಭಾಗದಲ್ಲಿ ಇದೇ ರೀತಿಯ ದರೋಡೆ ನಡೆದಿತ್ತು.

ದರೋಡೆ ಪತ್ತೆಗೆ 5 ತಂಡಗಳ ರಚನೆ

ಅದೇ ಗ್ಯಾಂಗ್ ಈ ದರೋಡೆ ನಡೆಸಿರೋ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಪ್ರಕರಣ ಪತ್ತೆಗೆ 5 ತಂಡ ಕೂಡ ರಚಿಸಲಾಗಿದೆ. ಎಲ್ಲಾ ಕಡೆಯೂ ಕೂಡ ಸಿಸಿಟಿವಿ ಪರಿಶೀಲನೆ ಮಾಡಲಾಗ್ತಿದೆ. ಆದಷ್ಟು ಬೇಗ ದರೋಡೆಕೋರರ ಬಂಧಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಟ್ನಲ್ಲಿ ಕೇರಳಕ್ಕೆ ಚಿನ್ನದ ಗಟ್ಟಿಯನ್ನು ಕೊಂಡೊಯ್ಯುತ್ತಿದ್ದ ವ್ಯಕ್ತಿಯ ಕಾರನ್ನು ಯಾರೂ ಇಲ್ಲದ ವೇಳೆ ಬಂಡೀಪುರದ ಕಾಡಿನ ರಸ್ತೆಯಲ್ಲಿ ದರೋಡೆ ಮಾಡಿದ್ದು,ಪ್ರಯಾಣಿಕರಲ್ಲಿ ಭಯ ಸೃಷ್ಟಿಸಿದೆ. ರಾತ್ರಿ ವೇಳೆ ಸಂಚಾರ ಎಷ್ಟು ಸೇಫ್ ಅನ್ನೋ ಪ್ರಶ್ನೆ ಕೂಡ ಉದ್ಬವವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ