ರೇಣುಕಾಸ್ವಾಮಿ ಕೊಲೆ ಕೇಸ್‌: ಸಾಕ್ಷ್ಯ ಸಂಗ್ರಹ ಬಳಿಕ ನಟ ದರ್ಶನ್ ಕೇಸಲ್ಲಿ ಚಾರ್ಜ್‌ಶೀಟ್‌, ಪರಂ

Published : Jul 09, 2024, 09:00 AM ISTUpdated : Jul 09, 2024, 09:47 AM IST
ರೇಣುಕಾಸ್ವಾಮಿ ಕೊಲೆ ಕೇಸ್‌: ಸಾಕ್ಷ್ಯ ಸಂಗ್ರಹ ಬಳಿಕ ನಟ ದರ್ಶನ್ ಕೇಸಲ್ಲಿ ಚಾರ್ಜ್‌ಶೀಟ್‌, ಪರಂ

ಸಾರಾಂಶ

ರೇಣುಕಾಸ್ವಾಮಿ ಕೊಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ಚಾರ್ಜ್‌ಶೀಟ್‌ ಸಲ್ಲಿಸಲಾಗುವುದು. ಅದಕ್ಕೆ ತನ್ನದೇ ಆದಪ್ರಕ್ರಿಯೆಗಳಿವೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಅದನ್ನು ಮಾಡುವುದಿಲ್ಲ ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ 

ಬೆಂಗಳೂರು(ಜು.09): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ಚಿತ್ರನಟ ದರ್ಶನ್, ಅವರ ಆಪ್ತ ಪವಿತ್ರಾ ಗೌಡ ಮತ್ತಿತರ 15 ಮಂದಿ ಆರೋಪಿಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಂಗ್ರಹದ ನಂತರ ಚಾರ್ಜ್‌ ಶೀಟ್‌ಸಲ್ಲಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ಚಾರ್ಜ್‌ಶೀಟ್‌ ಸಲ್ಲಿಸಲಾಗುವುದು. ಅದಕ್ಕೆ ತನ್ನದೇ ಆದಪ್ರಕ್ರಿಯೆಗಳಿವೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಅದನ್ನು ಮಾಡುವುದಿಲ್ಲ ಎಂದರು. 

ಮಾಡದೇ ಇರುವ ಕೊಲೆಗೆ ಜೈಲಿನಲ್ಲಿ ಇದ್ದಾರೆ, ನೋವು ಆಗಲ್ವಾ ಅಂದ್ರು ನಿರ್ಮಾಪಕ ಕೆ ಮಂಜು!

ಮುಡಾ ಪ್ರಕರಣ ಮುಚ್ಚಿ ಹಾಕಲು ಹುನ್ನಾರ ನಡೆಯುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ನಾವು ಯಾವ ಕೇಸನ್ನೂ ಮುಚ್ಚಿಹಾಕುವುದಿಲ್ಲ. ಎಲ್ಲದರ ತನಿಖೆ ನಡೆಯುತ್ತದೆ. ಈಗಾಗಲೇ ಇದರ ಬಗ್ಗೆ ಮುಖ್ಯಮಂತ್ರಿ ಯವರು ಸ್ಪಷ್ಟಿಕರಣ ಕೊಟ್ಟಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?