ಮದುವೆ ಆಗುವುದಾಗಿ ನಂಬಿಸಿ ಕೈ ಕೊಟ್ಟ, ಪ್ರಿಯಕರ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!

By Suvarna NewsFirst Published Apr 2, 2022, 2:51 PM IST
Highlights

* ಪ್ರಿಯಕರನ ಮನೆಯಲ್ಲೇ ಪ್ರಿಯತಮೆ ವಿಷ ಸೇವಿಸಿ ಆತ್ಮಹತ್ಯೆ ಯತ್ನ.

* ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಘಟನೆ.

* ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆ.

* ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ.

ಮೈಸೂರು(ಏ.02): ಮದುವೆ ಆಗುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಪ್ರಿಯಕರ ಮೋಸ ಮಾಡಿದ್ದಾರೆ. ಪ್ರೀತಿಸಿದಾತನ ಮೋಸದಾಟದಿಂದ ಬೇಸತ್ತ ಯುವತಿ ತನ್ನ ಹುಟ್ಟುಹಬ್ಬದ ದಿನವೇ ಆತನದ್ದೇ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ.

ಹೌದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದ ಪ್ರಭುಸ್ವಾಮಿ ಎಂಬುವರ ಪುತ್ರ ತ್ಯಾಗರಾಜ್ ಹಾಗೂ ಅದೇ ಗ್ರಾಮದ ಕಾವ್ಯ ನಡುವೆ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವಕ ಮದುವೆ ಆಗುವುದಾಗಿ ನಂಬಿಸಿ ಕಾವ್ಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ. ಅಲ್ಲದೇ ಕಳೆದ ಮೂರು ದಿನಗಳ ಹಿಂದೆ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಲು ಮುಂದಾದ ತ್ಯಾಗರಾಜ್ ಕಾವ್ಯಾಳನ್ನೂ ಸಹ ಆಹ್ವಾನಿಸಿದ್ದ. ಆದರೆ ಈ ವೇಳೆ ಕಾವ್ಯಾ ಮದುವೆ ವಿಚಾರವನ್ನು ಪ್ರಸ್ತಾಪಿಸಿದ್ದಾಳೆ. 

Latest Videos

ಆದರೆ ಈ ಅನಿರೀಕ್ಷಿತ ಪ್ರಶ್ನೆಯಿಂದ ಮುಜುಗರಕ್ಕೀಡಾದ ತ್ಯಾಗರಾಜ್ ಸ್ನೇಹಿತರೆದುರೇ ಪ್ರೀತಿಸಿದ ಯುವತಿಯ ಕಪಾಳಕ್ಕೆ ಹೊಡೆದು ಅವಮಾನ ಮಾಡಿದ್ದಾನೆ. ಪ್ರೀತಿಸಿದಾತನ ಈ ನಡೆಯಿಂದ ಮನನೊಂದ ಯುವತಿ ಪ್ರಿಯಕರನ ಮನೆಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಕಾವ್ಯಾ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಕಾವಿತೊಟ್ಟು ಜನರ ವಂಚಿಸುತ್ತಿದ್ದ ಇಬ್ಬರಿಗೆ ಧರ್ಮದೇಟು

 

ಕಾವಿ ತೊಟ್ಟು ಜನರನ್ನು ವಂಚಿಸುತ್ತಿದ್ದ ಇಬ್ಬರು ನಕಲಿ ಸ್ವಾಮೀಜಿಗಳಿಗೆ (Fake swamiji) ಧರ್ಮದೇಟು ಕೊಟ್ಟಿರುವ ಘಟನೆ ಸವಣೂರು ತಾಲೂಕಿನ ಕಾರಡಗಿ (Kaaradagi)ಗ್ರಾಮದ ಬಳಿ ಇರುವ ಜೇಕಿನಕಟ್ಟಿರಸ್ತೆಯಲ್ಲಿ ಗುರುವಾರ ಸಂಭವಿಸಿದೆ. ವಿಜಯನಗರ (Vijayanagara) ಜಿಲ್ಲೆಯ ಮೂಲದವರಾಗಿರುವ ಇವರು ಕಾವಿ ತೊಟ್ಟು ಮನೆಮನೆಗೆ ತೆರಳಿ ಜನರಿಂದ ಹಣ ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ. ನಂತರ ಗ್ರಾಮದ ಹೊರವಲಯಕ್ಕೆ ಬಂದು ಕಾವಿ ಕಳಚಿ ಬೇರೆ ಬಟ್ಟೆ (cloth) ತೊಟ್ಟು ಓಡಾಡುತ್ತಿದ್ದರು ಎಂಬ ಆರೋಪದ ಮೇಲೆ ಇಬ್ಬರನ್ನು ಬೆನ್ನಟ್ಟಿ ಹಿಡಿದು ಧರ್ಮದೇಟು ನೀಡಿದ ಗ್ರಾಮಸ್ಥರು ನಂತರ ಬಿಟ್ಟು ಕಳುಹಿಸಿದ್ದಾರೆ.

ಕಾವಿ ತೊಟ್ಟು ಮನೆಮನೆಗೆ ತೆರಳಿ ಜನರಿಗೆ ಇಲ್ಲಸಲ್ಲದ್ದು ಹೇಳುತ್ತಿದ್ದರು. ಮಾದಾಪುರ (Madapura), ಕಾರಡಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾವಿ ತೊಟ್ಟು ಮನೆಮನೆಗೆ ಹೋಗಿ ಜನರಿಂದ ಹಣ (Money) ಸಂಗ್ರಹಿಸ್ತಿದ್ದರು ಎಂಬ ಆರೋಪವಿದೆ. ಕಾವಿ ತೊಟ್ಟು ಹಿಂದೂ ಧರ್ಮಕ್ಕೆ (Hindu Religion) ಅವಮಾನ ಮಾಡುತ್ತಿದ್ದೀರಿ ಎಂದು ಜನರು ಧರ್ಮದೇಟು ನೀಡಿದ್ದಾರೆ. ಧರ್ಮದೇಟು ನೀಡಿ ಕಾವಿ ಕಳಚಿ ಬೇರೆ ಬಟ್ಟೆ ಹಾಕಿಸಿ ಗ್ರಾಮಸ್ಥರು ಕಳಿಸಿದ್ದಾರೆ. ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದ ಇಬ್ಬರು ನಕಲಿ ಸ್ವಾಮೀಜಿಗಳಿಗೆ ಧರ್ಮದೇಟು ನೀಡಿ ಕಳಿಸಿದ್ದ ವಿಡಿಯೋ ವೈರಲ್‌ ಆಗಿದೆ. ಸವಣೂರು (Savanur) ಪೊಲೀಸ್‌ ಠಾಣೆ (Police station) ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಡುಗಿಗೆ ವರನ ವೇಷ ಹಾಕಿ ಹರಕೆ ಸಲ್ಲಿಕೆ, ಹೀಗೆ ಮಾಡಿದ್ರೆ ಆರೋಗ್ಯ ಭಾಗ್ಯ!

ವರ್ಷದ ಹಿಂದೆ ಬೆಂಗಳೂರಿನಲ್ಲಿ ಪೂಜೆ ಮಾಡುವ ನೆಪದಲ್ಲಿ, ಹೋಮ ಹವನ ಮಾಡಿಸಿ ಮನೆಗಳ್ಳತನ ಮಾಡುತ್ತಿದ್ದ ನಕಲಿ ಸ್ವಾಮೀಜಿಗಳನ್ನು ಬೆಂಗಳೂರಿನ (Banglore) ಸಂಪಿಗೆಹಳ್ಳಿ (Sampige Halli) ಪೊಲೀಸರು ಬಂಧಿಸಿದ್ದರು. ಬಂಧಿತರನ್ನ ನಾಗರಾಜ್ (Nagaraj) ಹಾಗೂ ಲಕ್ಷ್ಮಣ್ (Laxman)ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಮೊದಲು ಸ್ವಾಮೀಜಿಗಳ ರೀತಿ ಎಂಟ್ರಿ ಕೊಡುತ್ತಿದ್ದರು. ಬಳಿಕ ಮನೆಯ ವಿಚಾರಗಳನ್ನು ಅರಿತು ಮರುದಿನ ಕಳ್ಳತನ (theft) ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.  ಈ ಖದೀಮರ ಗ್ಯಾಂಗ್‌ ದೊಡ್ಡ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. 

ಸ್ವಾಮೀಜಿಗಳ ವೇಷದಲ್ಲಿ ಮನೆಗೆ ತೆರಳುತಿದ್ದ ಈ ಗ್ಯಾಂಗ್‌, ನಿಮ್ಮ ಮನೆಯಲ್ಲಿ ದೋಷ ಇದೆ ಎಂದು ಹೇಳಿ, ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸುತ್ತಿದ್ದರು. ಇವರ ಮಾತು ಕೇಳಿದ ಮನೆ ಮಾಲೀಕರು ಪೂಜೆಗೆ (Pooja)  ಒಪ್ಪುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ನಕಲಿ ಸ್ವಾಮೀಜಗಳು ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. ಇವರ ಮಾತಿಗೆ ಒಪ್ಪಿದ ಮನೆಯ ಮಾಲೀಕರು ಚಿನ್ನವನ್ನೆಲ್ಲಾ (gold) ಒಂದು ಕಡೆ ಇಡುತ್ತಿದ್ದರು. 

 

click me!