ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಸ್ತ್ರೀ ಸಂಘಗಳಿಂದ ಹಣ ಸುಲಿಗೆ?: ಅಸಲಿಗೆ ಆಗಿದ್ದೇನು?

Published : Feb 10, 2024, 06:03 AM IST
ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಸ್ತ್ರೀ ಸಂಘಗಳಿಂದ ಹಣ ಸುಲಿಗೆ?: ಅಸಲಿಗೆ ಆಗಿದ್ದೇನು?

ಸಾರಾಂಶ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನಸಾಮಾನ್ಯರಿಂದ ಕೋಟ್ಯಂತರ ರುಪಾಯಿ ಪಡೆದು ವಂಚಿಸಿರುವ ಘಟನೆ ಆನೇಕಲ್ ಸೂರ್ಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಆನೇಕಲ್ (ಫೆ.10): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನಸಾಮಾನ್ಯರಿಂದ ಕೋಟ್ಯಂತರ ರುಪಾಯಿ ಪಡೆದು ವಂಚಿಸಿರುವ ಘಟನೆ ಆನೇಕಲ್ ಸೂರ್ಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೆರೆಯ ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಜನರಿಗೆ ವಂಚಿಸಿದವರು. ತಮ್ಮ ಟ್ರಸ್ಟ್‌ಗೆ ನಿರ್ಮಲಾ ಸೀತಾರಾಮನ್ ಅವರಿಂದ ₹17,000 ಕೋಟಿ ಬಂದಿದೆ. ಈ ಹಣವನ್ನು ಸ್ತ್ರೀ ಶಕ್ತಿ ಗುಂಪುಗಳ ಮೂಲಕ ಸಾಲ ನೀಡಬೇಕು. ತಲಾ ಗುಂಪಿಗೆ ₹10 ಲಕ್ಷ ಸಾಲ ನೀಡುತ್ತೇವೆ. ಇದರಲ್ಲಿ ₹5 ಲಕ್ಷ ಸಬ್ಸಿಡಿ ಎಂದು ನಂಬಿಸಿದರು. ಇದಕ್ಕಾಗಿ ಕೇಂದ್ರದಿಂದ ಹಣ ಸಂದಾಯ ಆಗಿರುವ ನಕಲಿ ಪ್ರಮಾಣಪತ್ರವನ್ನು ತಯಾರಿಸಿದ್ದರು.

ನಾವು ಹೊಸೂರಿನಲ್ಲಿ ಟ್ರಸ್ಟ್ ಆರಂಭಿಸಿದ್ದೇವೆ. ನಮ್ಮ ಟ್ರಸ್ಟ್‌ಗೆ ಕೇಂದ್ರ ಸರ್ಕಾರದಿಂದ ಹಣ ಬಂದಿದೆ. ಅಮೆರಿಕದಿಂದಲೂ ನಮ್ಮ ಟ್ರಸ್ಟ್‌ಗೆ ಹಣ ಸಂದಾಯ ಆಗಿದೆ ಎಂದು ಜನರಿಗೆ ಪವಿತ್ರಾ ಹೇಳುತ್ತಿದ್ದಳು. ಒಂದು ತಂಡವನ್ನು ಕಟ್ಟಿಕೊಂಡು ‘ನೀವು ಸಾಲ ಪಡೆಯಲು ಮುಂಚಿತವಾಗಿ ಸ್ವಲ್ಪ ಹಣ ಕಟ್ಟಬೇಕು’ ಎಂದು ನೂರಾರು ಜನ ಮಹಿಳೆಯರಿಂದ ₹5 ಸಾವಿರದಿಂದ ₹25 ಸಾವಿರದವರೆಗೆ ಹಣ ವಸೂಲಿ ಮಾಡಿದ್ದಳು. ಹಣ ಕಟ್ಟಿದವರು ಸಾಲ ಕೇಳಿದಾಗ ವಂಚಕೀಯ ನಾಟಕ ಬಟಾ ಬಯಲಾಗಿದೆ. ಈಕೆಯ ವಿರುದ್ಧ ಆನೇಕಲ್, ಚಂದಾಪುರ, ಸೂರ್ಯನಗರ, ಹೊಸಕೋಟೆ, ಅತ್ತಿಬೆಲೆ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಪವಿತ್ರಾಳನ್ನು ಸೂರ್ಯನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರೈತನಿಗೆ ₹1.80 ಲಕ್ಷ ವಂಚನೆ: ರೈತರೊಬ್ಬರ ಮಗನಿಗೆ ನ್ಯಾಯಾಲಯದಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ₹1.80 ಲಕ್ಷ ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಗ್ರಾಮದ ದುಂಡಯ್ಯ(63) ವಂಚನೆಗೆ ಒಳಗಾದವರು. ಇವರು ನೀಡಿದ ದೂರಿನ ಮೇರೆಗೆ ಗೌರಿಬಿದನೂರಿನ ಪದ್ಮರಾಜ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೆ ವಿಷಯಕ್ಕೆ ವರ್ತಕರ ಜೋಡಿ ಕೊಲೆ ಆಗಿದ್ದು: ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದ್ದೇನು?

ಏನಿದು ಪ್ರಕರಣ?: ದೂರುದಾರ ದುಂಡಯ್ಯ 2021ನೇ ಸಾಲಿನಲ್ಲಿ ವಿಧಾನಸೌಧದ ಬಳಿ ಇರುವ ಮಾಹಿತಿ ಆಯೋಗದ ಬಳಿಗೆ ಬಂದಿದ್ದರು. ಈ ವೇಳೆ ಪದ್ಮರಾಜ್‌ ಎಂಬಾತ ಸಿಕ್ಕಿ ಪರಿಚಯ ಮಾಡಿಕೊಂಡಿದ್ದಾನೆ. ‘ನಾನು ಮಾಹಿತಿ ಆಯೋಗದಲ್ಲಿ ಕೆಲಸ ಮಾಡುತ್ತಿದ್ದೇನೆ. ನ್ಯಾಯಾಲಯಗಳಲ್ಲಿ ಕೆಲಸಗಳು ಖಾಲಿಯಿವೆ. 10ನೇ ತರಗತಿ ಪಾಸ್‌ ಆದವರಿಗೆ ಕೆಲಸ ಕೊಡಿಸುತ್ತೇನೆ. ಮೂರು ಲಕ್ಷ ರುಪಾಯಿ ಕೊಟ್ಟರೆ ಕೆಲಸ ಕೊಡಿಸುತ್ತೇನೆ. ಯಾರಾದರೂ ಇದ್ದರೆ ತಿಳಿಸಿ’ ಎಂದು ಹೇಳಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು