ನಾಯಿ ತಿಂದುಳಿದ ಆಹಾರ ಮಕ್ಕಳಿಗೆ ತಿನ್ನಿಸಿದ ಸರ್ಕಾರಿ ಶಾಲೆ! 78 ವಿದ್ಯಾರ್ಥಿಗಳಿಗೆ ರೇಬಿಸ್ ವಿರೋಧಿ ಚುಚ್ಚುಮದ್ದು!

Published : Aug 03, 2025, 01:12 PM IST
Dog-contaminated food incident

ಸಾರಾಂಶ

ಛತ್ತೀಸ್‌ಗಢದ ಶಾಲೆಯೊಂದರಲ್ಲಿ ಮಕ್ಕಳಿಗೆ ನಾಯಿ ತಿಂದು ಉಳಿದ ಆಹಾರವನ್ನು ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆರೋಪ. 78 ವಿದ್ಯಾರ್ಥಿಗಳಿಗೆ ರೇಬೀಸ್ ಚುಚ್ಚುಮದ್ದು ನೀಡಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.

ಛತ್ತೀಸ್‌ಗಢದ ಬಲೋದಬಜಾರ್ ಜಿಲ್ಲೆಯ ಪಲಾರಿ ಬ್ಲಾಕ್‌ನ ಲಚನ್‌ಪುರ ಗ್ರಾಮದ ಸರ್ಕಾರಿ ಮಧ್ಯಮ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಲೆಯ ಮಕ್ಕಳಿಗೆ ಬೀದಿ ನಾಯಿಗಳು ತಿಂದುಳಿದ ಆಹಾರವನ್ನು ಮಧ್ಯಾಹ್ನದ ಬಿಸಿಯೂಟದಲ್ಲಿ ಬಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಘಟನೆಯಿಂದ 78 ವಿದ್ಯಾರ್ಥಿಗಳಿಗೆ ರೇಬೀಸ್ ವಿರೋಧಿ ಇಂಜೆಕ್ಷನ್ ನೀಡಲಾಗಿದೆ.

ಜುಲೈ 29, 2025ರಂದು, ಜೈ ಸ್ವಸಹಾಯ ಗುಂಪಿನ ಮಹಿಳೆಯರು ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಊಟ ತಯಾರಿಸುತ್ತಿದ್ದಾಗ, ಬೀದಿ ನಾಯಿಗಳು ಆಹಾರವನ್ನು ತಿಂದು ಕೊಳಕುಗೊಳಿಸಿದ್ದವು. ಕೆಲವು ಮಕ್ಕಳು ಈ ವಿಷಯವನ್ನು ಶಿಕ್ಷಕರಿಗೆ ತಿಳಿಸಿದರೂ, ನಿರ್ಲಕ್ಷ್ಯ ಮಾಡಿ ಶಿಕ್ಷಕರು ಆಹಾರ ಬಡಿಸದಂತೆ ಸೂಚಿಸಿದ್ದರು. ಅದರಂತೆ ಆಹಾರ ಶುದ್ಧವಾಗಿದೆ ಎಂದು ಹೇಳಿ, ಸ್ವಸಹಾಯ ಗುಂಪಿನ ಮಹಿಳೆಯರು 84 ಮಕ್ಕಳಿಗೆ ನಾಯಿ ತಿಂದು ಬಿಟ್ಟ ತರಕಾರಿಗಳನ್ನು ಬಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೋಷಕರ ಆಕ್ರೋಶ :

ಮಕ್ಕಳು ಈ ವಿಷಯವನ್ನು ಕುಟುಂಬ ಸದಸ್ಯರಿಗೆ ತಿಳಿಸಿದ ನಂತರ, ಪೋಷಕರು ಮತ್ತು ಗ್ರಾಮಸ್ಥರು ಶಾಲೆಗೆ ಧಾವಿಸಿದರು. ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದ ನಂತರ, 78 ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ರೇಬೀಸ್ ವಿರೋಧಿ ಚುಚ್ಚುಮದ್ದು ನೀಡಲಾಯಿತು. ಈ ಘಟನೆಯ ಬಗ್ಗೆ ಉನ್ನತ ಅಧಿಕಾರಿಗಳಿಗೆ ದೂರು ದಾಖಲಿಸಲಾಗಿದೆ.

ತನಿಖೆಗೆ ಆಗ್ರಹ:

ಸ್ಥಳೀಯ ಶಾಸಕ ಸಂದೀಪ್ ಸಾಹು ಅವರು ಘಟನೆಯ ಬಗ್ಗೆ ಗಂಭೀರ ಆತಂಕ ವ್ಯಕ್ತಪಡಿಸಿ, ಮುಖ್ಯಮಂತ್ರಿಗೆ ಪತ್ರ ಬರೆದು, ಸಂಪೂರ್ಣ ತನಿಖೆಗೆ ಒತ್ತಾಯಿಸಿದ್ದಾರೆ. ಶಾಲೆಗೆ ಭೇಟಿ ನೀಡಿ ಮಕ್ಕಳು ಮತ್ತು ಶಾಲಾ ಆಡಳಿತದೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಘಟನೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಎಸ್‌ಡಿಎಂ ದಿನೇಶ್ ನಿಕುಂಜ್, ಬಿಇಒ ನರೇಶ್ ವರ್ಮಾ ಸೇರಿದಂತೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, ಮಕ್ಕಳು, ಶಿಕ್ಷಕರು, ಕುಟುಂಬ ಸದಸ್ಯರು ಮತ್ತು ಗ್ರಾಮ ಸಮಿತಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಸ್ವಸಹಾಯ ಗುಂಪಿನ ಸದಸ್ಯರ ವಿಚಾರಣೆ ಇನ್ನೂ ಬಾಕಿಯಿದ್ದು, ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಸ್‌ಡಿಎಂ ತಿಳಿಸಿದ್ದಾರೆ.

ಈ ಘಟನೆಯಿಂದ ಶಾಲಾ ಆಡಳಿತದ ನಿರ್ಲಕ್ಷ್ಯ ಮತ್ತು ಮಕ್ಕಳ ಆರೋಗ್ಯದೊಂದಿಗೆ ರಾಜಿ ಮಾಡಿಕೊಂಡಿರುವ ಆರೋಪಗಳು ಕೇಳಿಬಂದಿವೆ. ಸಂಪೂರ್ಣ ತನಿಖೆಯ ನಂತರ ಸತ್ಯಾಂಶ ಬಯಲಾಗುವುದು ಎಂದು ನಿರೀಕ್ಷಿಸಲಾಗಿದೆ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ರಿಸ್‌ಮಸ್ ಹಬ್ಬದ ದಿನವೇ ಭೀಕರ ಅಪಘಾತ: ಎತ್ತಿನ ಬಂಡಿಗೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ!
Rapido Bike ಬುಕ್ ಮಾಡುವ ಮುನ್ನ ಎಚ್ಚರ! ರೈಡರ್ ಎಡವಟ್ಟಿಗೆ ಹಿಂಬದಿ ಕುಳಿತ ಗ್ರಾಹಕನ ಮಂಡಿ ಚಿಪ್ಪು ಪುಡಿ ಪುಡಿ!