
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಮೇ.24): ಪಾಕಿಸ್ತಾನ ಜಿಂದಾಬಾದ್ ನರೇಂದ್ರ ಮೋದಿ ಕೂ... ಎಂದು ಫೇಸ್ ಬುಕ್ನಲ್ಲಿ ಪೋಸ್ಟ್ ಹಾಕಿದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಸ್ಕರ್ ಕೊಪ್ಪ ಎಂಬಾತನನ್ನು ಕೊಪ್ಪ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಎನ್ ಆರ್ ಪುರ ಕೋರ್ಟ್ ಆರೋಪಿಗೆ ಜೂನ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಫೇಸ್ ಬುಕ್ ನಲ್ಲಿ ಪೋಸ್ಟ್: ಪಾಕಿಸ್ತಾನ ಜಿಂದಾಬಾದ್ , ಮೋದಿ , ಕೊಪ್ಪ ಭಜರಂಗದಳದ ವಿರುದ್ಧ ಸಹಾ ಅವಹೇಳನಕಾರಿ ಆಗಿ ಆಸ್ಗರ್ ಕೊಪ್ಪ ಎಂಬ ಫೇಸ್ಬುಕ್ ಅಕೌಂಟ್ನಲ್ಲಿ ಪೋಸ್ಟ್ ಹಾಕಿದ್ದು ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೋಸ್ಟ್ ಮಾಡಿದ ಬಳಿಕ ಆಕೌಂಟನ್ನೇ ಡಿಲೀಟ್ ಮಾಡಿದ ಭೂಪ ಅಸ್ಗರ್ನನ್ನು ಕೊಪ್ಪ ಪೊಲೀಸರು ಇಂದು ಬೆಳಿಗ್ಗೆ ವಶಕ್ಕೆ ಪಡೆದಿದ್ದರು. ಸುಮೋಟೋ ಕೇಸ್ ಅನ್ನು ದಾಖಲಿಸಿ ವಿಚಾರಣೆ ನಡೆಸಿದ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಧರ್ಮಸ್ಥಳ ದರ್ಶನ ಮುಗಿಸಿ ಬರುವಾಗ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು!
ವಿಚಾರಣೆ ನಡೆಸಿದ ಎನ್ ಆರ್ ಪುರ ಕೋರ್ಟ್ ಆರೋಪಿಗೆ ಜೂನ್ 6ರವರೆಗೆ ನ್ಯಾಯಾಂಗ ಬಂಧನದ ಆದೇಶವನ್ನು ನೀಡಿತ್ತು. ಕೊಪ್ಪ ಭಜರಂಗದಳದ ವಿರುದ್ಧ ಕೂಡಾ ಪೋಸ್ಟ್ ಹಾಕಿರುವ ಇವನ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಯನ್ನು ಸಾರ್ವಜನಿಕರಿಗೆ ಒಪ್ಪಿಸುವಂತೆ ಒತ್ತಾಯ ಸಹಾ ಕೇಳಿ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ