10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!

Published : Dec 13, 2025, 05:06 PM IST
Chikkamagaluru Sharath Ashwini case Man Cheats Woman After 10 Year Relationship

ಸಾರಾಂಶ

ಕಳೆದ 10 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ, ಯುವತಿಯಿಂದ 4.5 ಲಕ್ಷ ರೂ. ಹಣ ಪಡೆದು, ತಾನು ವಿಚ್ಛೇದಿತ ಎಂಬ ಸತ್ಯ ಮುಚ್ಚಿಟ್ಟು ಈಗ ಬೇರೆ ಮದುವೆಗೆ ಸಿದ್ಧತೆ. ಇದರಿಂದ ಆಕ್ರೋಶಗೊಂಡ ಸಂತ್ರಸ್ತ ಯುವತಿ, ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿರುವ ಯುವಕನ ಮನೆ ಮುಂದೆ ನ್ಯಾಯಕ್ಕಾಗಿ ಗಲಾಟೆ ನಡೆಸಿದ್ದಾರೆ.

ಚಿಕ್ಕಮಗಳೂರು(ಡಿ.13): ಬರೋಬ್ಬರಿ 10 ವರ್ಷಗಳಿಂದ ಪ್ರೀತಿಸಿದ ಯುವತಿಗೆ ಮೋಸ ಮಾಡಿ, ಆಕೆಯಿಂದ ಹಣ ಪಡೆದು, ಈಗ ಬೇರೆ ಮದುವೆಗೆ ಸಿದ್ಧನಾಗಿದ್ದ ಯುವಕನ ಮನೆ ಮುಂದೆ ಸಂತ್ರಸ್ತ ಯುವತಿ ಗಲಾಟೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ನಡೆದಿದೆ.

ಡಿವೋರ್ಸ್ ಆದ ವಿಷಯ ಮುಚ್ಚಿಟ್ಟು ಪ್ರೀತಿ!

ಹಾಸನ ಜಿಲ್ಲೆಯ ಬೇಲೂರು ಮೂಲದವರಾದ ಅಶ್ವಿನಿ ಎಂಬ ಯುವತಿ, ಕಲ್ಯಾಣ ನಗರದ ನಿವಾಸಿ ಶರತ್ ಎಂಬ ಯುವಕನನ್ನು ಕಳೆದ 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ನಡುವೆ ಶರತ್‌ನು ಅಶ್ವಿನಿಯಿಂದ 4.5 ಲಕ್ಷ ರೂಪಾಯಿ ಹಣವನ್ನೂ ಪಡೆದಿದ್ದ ಎನ್ನಲಾಗಿದೆ. ಆದರೆ, ಶರತ್‌ಗೆ ಈ ಮೊದಲೇ ಮದುವೆಯಾಗಿ ಕೇವಲ ಎರಡು ತಿಂಗಳಲ್ಲಿ ವಿಚ್ಛೇದನ (Divorce) ಆಗಿರುವ ವಿಷಯವನ್ನು ಮುಚ್ಚಿಟ್ಟು ಅಶ್ವಿನಿಯನ್ನು ಪ್ರೀತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮದುವೆಯಾಗುವುದಾಗಿ ಅಶ್ವಿನಿಯ ತಾಯಿಯ ಬಳಿಗೂ ಹೋಗಿ ಭರವಸೆ ನೀಡಿದ್ದ ಕಾರಣ, ಅಶ್ವಿನಿ ತಾಯಿ ಮಗಳಿಗೆ ಬಂದಿದ್ದ ಐದು ಉತ್ತಮ ಮದುವೆ ಸಂಬಂಧಗಳನ್ನು ನಿರಾಕರಿಸಿದ್ದರು.

ನ್ಯಾಯಕ್ಕಾಗಿ ಯುವಕನ ಮನೆಮುಂದೆ ಅಶ್ವಿನಿ ಗಲಾಟೆ:

ಸದ್ಯ ಶರತ್ ನಾಳೆ ಬೇರೆ ಹುಡುಗಿಯೊಂದಿಗೆ ಮದುವೆಯಾಗಲು ಸಿದ್ಧತೆ ನಡೆಸಿದ್ದಾನೆ. ಇದರಿಂದ ಆಕ್ರೋಶಗೊಂಡ ಅಶ್ವಿನಿ, ಇಂದು ಚಿಕ್ಕಮಗಳೂರು ತಾಲೂಕಿನ ಕಲ್ಯಾಣ ನಗರದಲ್ಲಿರುವ ಶರತ್‌ನ ಮನೆ ಮುಂದೆ ಬಂದು ನ್ಯಾಯಕ್ಕಾಗಿ ಗಲಾಟೆ ಮಾಡಿದ್ದಾರೆ. 'ಈಗ ನನಗೆ ಮೋಸ ಮಾಡಿದ್ದಾನೆ, ನಾಳೆ ಬೇರೆ ಹುಡುಗಿಗೂ ಮೋಸ ಮಾಡ್ತಾನೆ. ಇವನನ್ನು ಹೀಗೆ ಬಿಡಬಾರದು' ಎಂದು ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಅಶ್ವಿನಿ ಈಗಾಗಲೇ ಆರೋಪಿ ಶರತ್‌ ವಿರುದ್ಧ ಅಟ್ರಾಸಿಟಿ ಸೇರಿದಂತೆ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ ಶರತ್ ಎಲ್ಲಾ ಕೇಸ್‌ಗಳಿಗೂ ನ್ಯಾಯಾಲಯದಿಂದ ಸ್ಟೇ ತಂದು ಬೇರೆ ಮದುವೆಯಾಗಲು ಮುಂದಾಗಿರುವುದು ಆಶ್ಚರ್ಯ ತಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಿವ್ಯಾಂಗ ಯುವತಿ ಮೇಲೆ ಬಲಾತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!
ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!