ಚಿತ್ರದುರ್ಗ: ಮರಕ್ಕೆ ನೇಣು ಬಿಗಿದುಕೊಂಡು ASI ಆತ್ಮಹತ್ಯೆ, ಕಾರಣ ನಿಗೂಢ

Published : Oct 03, 2021, 05:42 PM IST
ಚಿತ್ರದುರ್ಗ: ಮರಕ್ಕೆ ನೇಣು ಬಿಗಿದುಕೊಂಡು ASI ಆತ್ಮಹತ್ಯೆ, ಕಾರಣ ನಿಗೂಢ

ಸಾರಾಂಶ

* ಚಿತ್ರದುರ್ಗ ದಂಡಿನ ಕುರುಬರ ಹಟ್ಟಿ ಬಳಿ ನೇಣು ಬಿಗಿದುಕೊಂಡು ASI ಆತ್ಮಹತ್ಯೆ. * ಗುರುಮೂರ್ತಿ (50) ಆತ್ಮಹತ್ಯೆ ಮಾಡಿಕೊಂಡಿರುವ ASI. * ನಾಹಕನಹಟ್ಟಿ ಠಾಣೆಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ASI. * ಹಿಂದೂ ಗಣಪತಿ ವಿಸರ್ಜನಾ ಮೆರವಣಿಗೆ ಕರ್ತವ್ಯಕ್ಕೆ ಬಂದಿದ್ದ ಗುರುಮೂರ್ತಿ.

ಚಿತ್ರದುರ್ಗ(ಅ. 03)  ದಂಡಿನ ಕುರುಬರ ಹಟ್ಟಿ ಬಳಿ ನೇಣು ಬಿಗಿದುಕೊಂಡು ASI ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುಮೂರ್ತಿ (50) ಆತ್ಮಹತ್ಯೆ ಮಾಡಿಕೊಂಡಿರುವ ASI.

ಚಿತ್ರದುರ್ಗ ತಾಲ್ಲೂಕಿನ ದಂಡಿನ ಕುರುಬರ ಹಟ್ಟಿ ಗ್ರಾಮದಿಂದ ಪ್ರಕರಣ ವರದಿಯಾಗಿದೆ. ನಾಹಕನಹಟ್ಟಿ ಠಾಣೆಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ASI ಸುಸೈಡ್ ಮಾಡಿಕೊಂಡಿದ್ದಾರೆ. ಶನಿವಾರ ಹಿಂದೂ ಗಣಪತಿ ವಿಸರ್ಜನಾ ಮೆರವಣಿಗೆ ಕರ್ತವ್ಯಕ್ಕೆ ಹಾಜರಾಗಿದ್ದರು.

ರಾತ್ರಿ ಊರಿಗೆ ವಾಪಾಸ್ ಆಗುವಾಗ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಗ್ರಾಮಾಂತರ ಠಾಣೆ CPI ಬಾಲಚಂದ್ರ ನಾಯ್ಕ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಜೀವನ ಸಾಕೆಂದು ಮಗಳೊಂದಿಗೆ ನದಿಗೆ ಹಾರಿದ ಗದಗದ ತಾಯಿ

ತಾಲ್ಲೂಕಿನ ದಂಡಿನ ಕುರುಬರಹಟ್ಟಿ ಗ್ರಾಮದ ಬಳಿ ಅವರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಅವರ ಬೈಕ್ ಕೂಡ ಪತ್ತೆಯಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್‌ಐ ಗುರುಮೂರ್ತಿ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅವರ ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಇರಬಹುದು ಎಂದು ಅನುಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು ದೊಡ್ಡ ಸುದ್ದಿಯಾಗಿತ್ತು. ತಂದೆ ಮತ್ತು ಗಂಡನ ಮನೆಯವರಿಂದ ಕಿರುಕುಳ ಆಗುತ್ತಿದೆ ಎಂದು ಸುಸೈಡ್ ಮಾಡಿಕೊಂಡ ಮಹಿಳೆಯರು ಡೆತ್ ನೋಟ್ ಬರೆದಿಟ್ಟಿದ್ದರು. ದೊಡ್ಡ  ಬಂಗಲೆಯಲ್ಲಿ ಎಲ್ಲರೂ ನೇಣಿಗೆ ಶರಣಾಗಿದ್ದು ಮಗುವೊಂದು ಪವಾಡದ ರೀತಿ ಬದುಕಿತ್ತು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರು: ಮನೆ ದರೋಡೆಗಾಗಿ 5 ವರ್ಷದ ಮಗಳ ಮುಂದೆ ಫ್ಲವರ್ ಅಂಗಡಿ ಮಾಲೀಕನನ್ನು ಕೊಂದ ತಮಿಳುನಾಡು ಹಂತಕರು ಅರೆಸ್ಟ್
ಅವನಿಗೆ ಮೊದಲನೆಯದ್ದು, ಅವಳಿಗೆ ಮೂರನೆಯದ್ದು! ಬೆ*ತ್ತಲೆ ಓಡಾಟ, ಸೈಕೋ ಪತಿ ಪ್ರಕರಣಕ್ಕೆ ​​ ಟ್ವಿಸ್ಟ್!