
ಬೆಂಗಳೂರು(ಜೂ. 13) ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳ ಹಾಜರು ಪ್ರಕರಣಕ್ಕೆ ಸಂಬಂಧಿಸಿ ಸಿಐಡಿಯಿಂದ ನಾಲ್ವರು ಆರೋಪಿಗಳನ್ನು ಬಂಧಿಸಿದೆ.
ಲಕ್ಷ್ಮಣ ಉದ್ಧಪ್ಪ ಬಂಡಿ, ಭೀಮಪ್ಪ ಮಹಾದೇವ್ ಹುಲ್ಲೋಳಿ, ಲಕ್ಷ್ಮಣ್ ಮತ್ತಪ್ಪ ಪರಣ್ಣವರ್ ಮತ್ತು ಮಲ್ಲಿಕಾರ್ಜುನ ಯಮುನಪ್ಪ ಬಲಣ್ಣನವರ್ ಬಂಧಿತರು. 2020ರ ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಕಾನ್ಸ್ಟೇಬಲ್ ಹುದ್ದೆಗೆ ಪರೀಕ್ಷೆ ನಡೆದಿತ್ತು.
ಗ್ರಾಮೀಣ ಬ್ಯಾಂಕ್ಗಳಲ್ಲಿ ಉದ್ಯೋಗ ಅವಕಾಶ ಇದೆ
ಲಿಖಿತ ಮತ್ತು ದೇಹದಾರ್ಢ್ಯ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಹಾಜರಾಗಿದ್ದರು. ಈ ಬಗ್ಗೆ ರಾಜ್ಯದ ವಿವಿಧ ಠಾಣೆಗಳಲ್ಲಿ 21 ಪ್ರಕರಣಗಳು ದಾಖಲಾಗಿದ್ದವು. ನಂತರ ಸಿಐಡಿಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು.
ಇದುವರೆಗಿನ ತನಿಖೆಯಲ್ಲಿ ಒಟ್ಟು 61 ಆರೋಪಿಗಳ ಬಂಧನವಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಐವರು ಕಾನ್ಸ್ಟೇಬಲ್ ಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಒಟ್ಟು 1 ಲಕ್ಷದ 54 ಸಾವಿರ ರೂ, ಪೆನ್ ಡ್ರೈವ್ , ಹಾರ್ಡ್ ಡಿಸ್ಕ್, ಮೊಬೈಲ್ಸ್ ವಶಕ್ಕೆ ಪಡೆಯಲಾಗಿದ್ದು ನಾಪತ್ತೆಯಾಗಿರುವ ಪ್ರಮುಖ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ