ತುಮಕೂರು: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಮನನೊಂದು ಪೌರ ಕಾರ್ಮಿಕ ಆತ್ಮಹತ್ಯೆ

Published : Nov 02, 2024, 08:56 PM IST
ತುಮಕೂರು: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಮನನೊಂದು ಪೌರ ಕಾರ್ಮಿಕ ಆತ್ಮಹತ್ಯೆ

ಸಾರಾಂಶ

ಅರುಣ್ ಕುಮಾರ್ ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಅರುಣ್ ಕುಮಾರ್ 1 ಲಕ್ಷ ಹಣವನ್ನ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದರು. ಸಾಲ ಪಡೆದಿದ್ದ 1 ಲಕ್ಷ ಹಣಕ್ಕೆ 5 ಲಕ್ಷ ಹಣ ಕೊಡುವಂತೆ ಮೀಟರ್ ಬಡ್ಡಿ ದಂಧೆಕೋರರು ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ.   

ತುಮಕೂರು(ನ.02):  ನೇಣು ಬಿಗಿದುಕೊಂಡು ಪೌರ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಬ್ಬಿ ಪಟ್ಟಣದ ಹೊಸ ಕಾಲೋನಿಯಲ್ಲಿ ಇಂದು(ಶನಿವಾರ) ನಡೆದಿದೆ. ಅರುಣ್ ಕುಮಾರ್ (34) ಆತ್ಮಹತ್ಯೆಗೆ ಶರಣಾದ ದುರ್ದೈವಿ. 

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅರುಣ್ ಕುಮಾರ್ ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಅರುಣ್ ಕುಮಾರ್ 1 ಲಕ್ಷ ಹಣವನ್ನ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದರು. ಸಾಲ ಪಡೆದಿದ್ದ 1 ಲಕ್ಷ ಹಣಕ್ಕೆ 5 ಲಕ್ಷ ಹಣ ಕೊಡುವಂತೆ ಮೀಟರ್ ಬಡ್ಡಿ ದಂಧೆಕೋರರು ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. 

ಕೊಪ್ಪಳ: ಬರೀ ಹೆಣ್ಣು ಹೆತ್ತಳು ಅಂದಿದ್ದಕ್ಕೆ ಆತ್ಮಹತ್ಯೆ, 4 ತಿಂಗಳ ಹಸುಗೂಸು ಸೇರಿ 3 ಮಕ್ಕಳು ತಬ್ಬಲಿ!

ಇದರಿಂದ ಮನನೊಂದ ಅರುಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.  ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ