
ಪುಣೆ (ಜ.30): 7ನೇ ತರಗತಿಯ ವಿದ್ಯಾರ್ಥಿಯೋರ್ವ ತನ್ನದೇ ತರಗತಿಯ ವಿದ್ಯಾರ್ಥಿನಿ ವಿರುದ್ಧ ಸೇಡು ತೀರಿಸಿಕೊಳ್ಳುವ ಸಲುವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಹತ್ಯೆ ಮಾಡಲು 9ನೇ ತರಗತಿ ಬಾಲಕನಿಗೆ 100 ರು.ನ ಸುಪಾರಿ ಕೊಟ್ಟ ಆಘಾತಕಾರಿ ಘಟನೆ ಮಹಾರಾಷ್ಟ್ರದ ದೌಂಡ್ ಜಿಲ್ಲೆಯಲ್ಲಿ ನಡೆದಿದೆ.
ಆದರೆ ಅದೃಷ್ಟವಶಾತ್ ಸುಪಾರಿ ಪಡೆದಿದ್ದ ಬಾಲಕ ಕೃತ್ಯ ಎಸಗುವ ಬದಲು ಈ ವಿಷಯವನ್ನು ಶಾಲೆಯ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದಾನೆ. ಹೀಗಾಗಿ ದುರಂತ ತಪ್ಪಿದೆ. ಆದರೆ ಪ್ರಕರಣದಲ್ಲಿ ಆರೋಪಿ ಬಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಪ್ರಿನ್ಸಿಪಾಲ್ ಮತ್ತು ಇಬ್ಬರು ಶಿಕ್ಷಕಿಯರು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಆದರೆ ವಿಷಯ ಬಹಿರಂಗವಾದ ಬಳಿಕ ಇದೀಗ ಮೂವರು ಶಿಕ್ಷಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸೇಡು: ಬಾಲಕ ತನ್ನ ರಿಪೋರ್ಟ್ ಕಾರ್ಡಿನಲ್ಲಿ ಪೋಷಕರ ನಕಲಿ ಸಹಿ ಮಾಡಿದ್ದ ಎಂದು ವಿದ್ಯಾರ್ಥಿನಿ ಶಿಕ್ಷಕರಿಗೆ ದೂರು ನೀಡಿದ್ದಳು. ಇದಕ್ಕೆ ಕುಪಿತಗೊಂಡಿದ್ದ ಬಾಲಕ, ಪಾಠ ಕಲಿಸಲು ಆಕೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲು 9ನೇ ಕ್ಲಾಸ್ ಹುಡುಗನಿಗೆ 100 ರು. ಸುಪಾರಿ ನೀಡಿದ್ದ
ಇದನ್ನೂ ಓದಿ: 35 ರೂಪಾಯಿಗಾಗಿ ಕೊಲೆ; 57 ವರ್ಷಗಳ ಬಳಿಕ ಆರೋಪಿ ಪೊಲೀಸರಿಗೆ ಸಿಕ್ಕಿದ್ದೇಗೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ