ಬೆಂಗಳೂರು: ತನ್ನ ತಪ್ಪಿಲ್ಲದಿದ್ದರೂ ಕಾಲೇಜಿಂದ ಸಸ್ಪೆಂಡ್, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

Published : Dec 29, 2023, 10:56 AM ISTUpdated : Dec 29, 2023, 01:10 PM IST
ಬೆಂಗಳೂರು: ತನ್ನ ತಪ್ಪಿಲ್ಲದಿದ್ದರೂ ಕಾಲೇಜಿಂದ ಸಸ್ಪೆಂಡ್, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಸಾರಾಂಶ

ಬನ್ನೇರುಘಟ್ಟದ ಎಎಮ್‌ಸಿ ಕಾಲೇಜಿನಲ್ಲಿ ಮೊದಲ ವರ್ಷದ ಹೋಟೇಲ್ ಮ್ಯಾನೇಜ್ ಮೆಂಟ್ ಕೋರ್ಸ್‌ಗೆ ಒಂದೂವರೆ ಲಕ್ಷ ಫೀಸ್ ಕೊಟ್ಟು ವ್ಯಾಸಂಗ ಮಾಡುತ್ತಿದ್ದ ನಿಖಿಲ್. ಸದ್ಯ ಕಾಲೇಜಿನ ಮುಂಭಾಗ ಪ್ರತಿಭಟನೆ ಮಾಡಲು ನಿಖಿಲ್ ಸುರೇಶ್ ಪೋಷಕರು ನಿರ್ಧಾರ. 

ಬೆಂಗಳೂರು(ಡಿ.29): ಸಸ್ಪೆಂಡ್ ಮಾಡಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗರಬಾವಿಯ ವಿನಾಯಕ ಲೇಔಟ್‌ನಲ್ಲಿ ನಿನ್ನೆ(ಗುರುವಾರ) ರಾತ್ರಿ ನಡೆದಿದೆ. ನಿಖಿಲ್ ಸುರೇಶ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ. 

ಮೃತ ನಿಖಿಲ್ ಸುರೇಶ್ ಬನ್ನೇರುಘಟ್ಟದ ಎಎಮ್‌ಸಿ ಕಾಲೇಜಿನಲ್ಲಿ ಹೋಟೇಲ್ ಮ್ಯಾನೇಜ್ ಮೆಂಟ್ ಕೋರ್ಸ್ ಮಾಡುತ್ತಿದ್ದನು. ಕಳೆದ 15 ದಿನಗಳ ಹಿಂದೆ ನಿಖಿಲ್ ವಿದ್ಯಾರ್ಥಿನಿಯೊಬ್ಬಳ ಜೊತೆ ಜಗಳ ಮಾಡಿಕೊಂಡಿದ್ದನಂತೆ. ತನ್ನ ತಪ್ಪಿಲ್ಲದಿದ್ದರೂ ಕಾಲೇಜು ಆಡಳಿತ ಮಂಡಳಿ ನಿಖಿಲ್‌ನನ್ನ ಸಸ್ಪೆಂಡ್ ಮಾಡಿದ್ದರು. ಇದರಿಂದ ನಿಖಿಲ್ ತಾಯಿಯೊಂದಿಗೆ ಮತ್ತೆ ಕಾಲೇಜಿಗೆ ಹೋಗಿ ಕ್ಷಮೆ ಕೇಳಿದ್ದನು. ಅಪಾಲಜಿ ಲೆಟರ್‌ ಬರೆದುಕೊಟ್ಟಿದ್ರು ಮತ್ತೆ ಕಾಲೇಜಿಗೆ ಬರಲು ಅವಕಾಶ ಕೊಟ್ಟಿರಲಿಲ್ಲವಂತೆ. ಅಷ್ಟೇ ಅಲ್ಲದೆ ಕಾಲೇಜು ಸಿಬ್ಬಂದಿ ಹಲ್ಲೆ ಮಾಡಿ ಬೈದು ಕಾಲೇಜಿನಿಂದ ಹೊರಹಾಕಿದ್ದಾಗಿ ಪೋಷಕರು ಆರೋಪಿಸಿದ್ದಾರೆ. 

ಕುಂದಾಪುರ: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ, ಕಾರಣ?

ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸರು ನಿರ್ಲಕ್ಷ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. 15 ದಿನ ಬಿಟ್ಟು ಮತ್ತೆ ಬರೋದಾಗಿ ಪೊಲೀಸರು ಹೇಳಿದ್ದರು. ಆದ್ರೆ, ನಿಖಿಲ್ ಸುರೇಶ್ ನಿನ್ನೆ ರಾತ್ರಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಬನ್ನೇರುಘಟ್ಟದ ಎಎಮ್‌ಸಿ ಕಾಲೇಜಿನಲ್ಲಿ ಮೊದಲ ವರ್ಷದ ಹೋಟೇಲ್ ಮ್ಯಾನೇಜ್ ಮೆಂಟ್ ಕೋರ್ಸ್‌ಗೆ ಒಂದೂವರೆ ಲಕ್ಷ ಫೀಸ್ ಕೊಟ್ಟು ವ್ಯಾಸಂಗ ಮಾಡುತ್ತಿದ್ದ ನಿಖಿಲ್. ಸದ್ಯ ನಿಖಿಲ್ ಸುರೇಶ್ ಪೋಷಕರು ಕಾಲೇಜಿನ ಮುಂಭಾಗ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ