ಮಹಿಳೆಗೆ ಕೊಲೆ ಬೆದರಿಕೆ: ಕೊಟ್ಟೂರು ಸ್ವಾಮಿ ಮೇಲೆ ದೂರು ದಾಖಲು

Published : May 26, 2022, 05:45 AM IST
ಮಹಿಳೆಗೆ ಕೊಲೆ ಬೆದರಿಕೆ: ಕೊಟ್ಟೂರು ಸ್ವಾಮಿ ಮೇಲೆ ದೂರು ದಾಖಲು

ಸಾರಾಂಶ

*  ಕಲ್ಮಠದ ಡಾ. ಕೊಟ್ಟೂರು ಸ್ವಾಮೀಜಿ ವಿರುದ್ಧ ದೂರು ದಾಖಲು *  ಸ್ವಾಮೀಜಿ ವಿರುದ್ಧ ದೂರು ದಾಖಲಿಸಿದ್ದ ಮಹಿಳೆ  *  ಸ್ವಾಮೀಜಿ ವಿರುದ್ಧ ಕಲಂ 323, 324, 504 ಮತ್ತು 506 ದೂರು ದಾಖಲು  

ಗಂಗಾವತಿ(ಮೇ.26): ಕಾಲೇಜಿನ ಅಡುಗೆ ಮಾಡುವ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆ ಕಲ್ಮಠದ ಡಾ. ಕೊಟ್ಟೂರು ಸ್ವಾಮೀಜಿ ಮೇಲೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲಿಯ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಅಡುಗೆ ಮಾಡುತ್ತಿರುವ ಕಮಲಾಕ್ಷಿ ಅಲಿಯಾಸ್‌ ನಿರ್ಮಲಾ ಮಲ್ಲಯ್ಯಸ್ವಾಮಿ ಹಿರೇಜಂತಗಲ್‌ ಎನ್ನುವ ಮಹಿಳೆ ಸ್ವಾಮೀಜಿ ವಿರುದ್ಧ ದೂರು ದಾಖಲಿಸಿದ್ದಾರೆ.

ಗದಗ: ಆಂಟಿ ಮೋಹಕ್ಕೆ ಸಿಲುಕಿದ ರೌಡಿಶೀಟರ್: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ಪಾಲಿಗೆ ವಿಲನ್!

ಕಮಲಾಕ್ಷಿಯು ಮೇ 21ರಂದು ಕಾಲೇಜಿನಲ್ಲಿ ಅಡುಗೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಬಸಲಿಂಗಮ್ಮ ದಿ. ಶಿವಾನಂದ ಎನ್ನುವರು, ನೀನು ಏಕೆ ಇಲ್ಲಿಗೆ ಬಂದಿಯಾ, ನಿನ್ನನ್ನು ಕಲ್ಮಠ ಸ್ವಾಮೀಜಿಗೆ ಹೇಳಿ ಮುಖ್ಯ ಅಡುಗೆದಾರರ ಕೆಲಸದಿಂದ ತೆಗೆದು ಹಾಕಿಸುತ್ತೇನೆ. ಸ್ವಾಮೀಜಿ ಬಳಿ ಪಿಸ್ತೂಲ್‌ ಇದೆ, ನಿನ್ನ ಗಂಡ ಮತ್ತು ಪುತ್ರನನ್ನು ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆಂದು ಕಮಲಾಕ್ಷಿ ದೂರಿನಲ್ಲಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾಲೇಜಿನ ಗೇಟ್‌ ಬಳಿ ಇದ್ದ ಸ್ವಾಮೀಜಿಯು ಸಹ ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆ ಹಾಕಿದ್ದರಿಂದ ನಗರ ಪೊಲೀಸ್‌ ಠಾಣೆಯಲ್ಲಿ ಕೊಟ್ಟೂರು ಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ. ಸ್ವಾಮೀಜಿ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಕಲಂ 323, 324, 504 ಮತ್ತು 506 ದೂರು ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?