ಉತ್ತರ ಕನ್ನಡ: ಯುವತಿಯ ಕಳ್ಳ ಸಾಗಣೆಗೆ ಯತ್ನ, ಮೂವರ ವಿರುದ್ಧ ದೂರು

Published : Nov 20, 2023, 02:00 AM IST
ಉತ್ತರ ಕನ್ನಡ: ಯುವತಿಯ ಕಳ್ಳ ಸಾಗಣೆಗೆ ಯತ್ನ, ಮೂವರ ವಿರುದ್ಧ ದೂರು

ಸಾರಾಂಶ

ಕೊಂಡ್ಲಿ ಮೂಲದ ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಯುವತಿಗೆ ಆರೋಪಿತರು ನೀನು ತುಂಬಾ ಚೆನ್ನಾಗಿದ್ದೀಯ, ನೀನು ಒಪ್ಪಿದರೆ ಒಳ್ಳೆ ಗಿರಾಕಿ ಕೊಡಿಸುತ್ತೇವೆ, ಹೇರಳ ಹಣ ಸಂಪಾದಿಸಬಹುದು ಎಂದು ಒತ್ತಾಯಿಸಿದ್ದ ಆರೋಪಿಗಳು

ಸಿದ್ದಾಪುರ(ನ.20):  ಯುವತಿಯೋರ್ವಳನ್ನು ವೇಶ್ಯೆವಾಟಿಕೆಯಲ್ಲಿ ತೊಡಗಿಕೊಳ್ಳುವಂತೆ ಪ್ರಚೋದಿಸಿ ಕಳ್ಳ ಸಾಗಣೆಗೆ ಯತ್ನಿಸುತ್ತಿದ್ದ ಮೂವರ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಆಕಾಶ ಕೊಂಡ್ಲಿ, ಮಹೇಶ ನಾರಾಯಣ ಮಡಿವಾಳ ಕೊಂಡ್ಲಿ, ಪಾರ್ವತಮ್ಮ ಬೆಂಗಳೂರು ಎನ್ನುವವರ ಮೇಲೆ ಪ್ರಕರಣ ದಾಖಲಾಗಿದೆ.

ಕೊಂಡ್ಲಿ ಮೂಲದ ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಯುವತಿಗೆ ಆರೋಪಿತರು ನೀನು ತುಂಬಾ ಚೆನ್ನಾಗಿದ್ದೀಯ, ನೀನು ಒಪ್ಪಿದರೆ ಒಳ್ಳೆ ಗಿರಾಕಿ ಕೊಡಿಸುತ್ತೇವೆ, ಹೇರಳ ಹಣ ಸಂಪಾದಿಸಬಹುದು ಎಂದು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಪಟ್ಟಣದ ಐಬಿ ಬಳಿ ಕರೆಯಿಸಿ ಒತ್ತಾಯಿಸಿದ್ದಾರೆ. 

ದೀಪಾವಳಿ ವಿಶೇಷ "ಹೊಂಡೆಯಾಟ": ಉತ್ತರಕನ್ನಡದಲ್ಲಿ ಗ್ರಾಮೀಣ ಕ್ರೀಡೆ ಇಂದಿಗೂ ಜೀವಂತ..!

ಇದಕ್ಕೆ ಯುವತಿ ಒಪ್ಪದಿದ್ದಾಗ ಪಾರ್ವತಮ್ಮ ಯುವತಿಯ ಮೇಲೆ ಹಲ್ಲೆ ಮಾಡಿ ಹೆದರಿಸಿ ಯುವತಿಯ ಕಳ್ಳ ಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಾಸಿ ತನಿಖೆ ಮುಂದುವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ