
ಬೆಂಗಳೂರು(ಜು. 06) ನವರಸ ನಾಯಕ ಜಗ್ಗೇಶ್ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್ ಐಟಿ ಸೇಲ್ ನ ಉಸ್ತುವಾರಿ ಸಂದೀಪ್ ಅನಬೇರು ದೂರು ನೀಡಿದ್ದಾರೆ.
ಕಾಂಗ್ರೆಸ್ ಸೋಷಿಯಲ್ ಮೀಡಿಯಾ ದ ಉಸ್ತುವಾರಿಯಿ ಸಂದೀಪ್ ದೂರು ನೀಡಿದ್ದಾರೆ. ಮಾತನಾಡಿದ್ದ ಯುವಕ ಬಿಜೆಪಿಯನ್ನು ತೆಗಳಿದ್ದ. ಬೆಂಗಳೂರು ಬಿಟ್ಟು ಊರಿಗೆ ತೆರಳುತ್ತಿದ್ದ ಯುವಕ ಮೋದಿ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದ.
ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಸಿಇಒ ವಾಸುದೇವ್ ಮಯ್ಯ ಆತ್ಮಹತ್ಯೆ
ಇದಾದ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಆ ವ್ಯಕ್ತಿ ಸಂದೀಪ್ ಎಂದು ಬಿಂಬಿತವಾಗಿತ್ತು. ಬಿಜೆಪಿಯವರು ನನ್ನ ಫೋಟೋ ಎಡಿಟ್ ಮಾಡಿ ನನ್ನ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಸಂದೀಪ್ ದೂರು ನೀಡಿದ್ದಾರೆ.
ನಟ ಜಗ್ಗೇಶ್ ಸಹ ಈ ಪೋಟೋ ಹಂಚಿಕೊಂಡಿದ್ದರು. ಇದರಿಂದ ತನ್ನ ಗೌರವಕ್ಕೆ ಧಕ್ಕೆಯಾಗಿದೆ ಅಂತ ಸಂದೀಪ್ ದೂರು ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ