ಆರೋಪ ಸಾಬೀತಾದರೆ ನನ್ನೆಲ್ಲಾ ಆಸ್ತಿ ಸರ್ಕಾರಕ್ಕೆ: ಜಮೀರ್‌

Kannadaprabha News   | Asianet News
Published : Sep 11, 2020, 08:22 AM ISTUpdated : Sep 11, 2020, 08:45 AM IST
ಆರೋಪ ಸಾಬೀತಾದರೆ ನನ್ನೆಲ್ಲಾ ಆಸ್ತಿ ಸರ್ಕಾರಕ್ಕೆ: ಜಮೀರ್‌

ಸಾರಾಂಶ

ನನ್ನ ಮೇಲಿನ ಡ್ರಗ್ ಆರೋಪ ಸಾಬೀತಾದರೆ ನನ್ನೆಲ್ಲಾ ಆಸ್ತಿಯನ್ನು ಸರ್ಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಸವಾಲು ಹಾಕಿದ್ದಾರೆ.

ಬೆಂಗಳೂರು (ಸೆ.11):  ಸ್ಯಾಂಡಲ್‌ವುಡ್‌ ಡ್ರಗ್‌ ದಂಧೆ ಪ್ರಕರಣದ ಹಿನ್ನೆಲೆಯಲ್ಲಿ ನನ್ನ ಮೇಲೆ ಹೊರಿಸಲಾಗುತ್ತಿರುವ ಆರೋಪಗಳ ಬಗ್ಗೆ ಮುಖ್ಯಮಂತ್ರಿಯವರ ನೇತೃತ್ವದಲ್ಲೇ ತನಿಖೆ ನಡೆಯಲಿ. ಸಾಬೀತಾದರೆ ನನ್ನ ಸಮಸ್ತ ಆಸ್ತಿಯನ್ನು ಸರ್ಕಾರಕ್ಕೆ ಬರೆದುಕೊಡುತ್ತೇನೆ.

ಹೀಗಂತ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಸವಾಲು ಹಾಕಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ ಈ ಸವಾಲು ಹಾಕಿರುವ ಜಮೀರ್‌, ಈ ಸಂಬಂಧ ನಾನು ಯಾವುದೇ ತನಿಖೆಗೂ ಸಿದ್ಧ. ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲೇ ತನಿಖೆ ನಡೆಯಲಿ. ಆರೋಪ ಸಾಬೀತಾದರೆ ನನ್ನ ಎಲ್ಲ ಆಸ್ತಿ ಸರ್ಕಾರಕ್ಕೆ ಬರೆಯುತ್ತೇನೆ. ಆರೋಪ ಸುಳ್ಳಾದರೆ ಸಂಬರಗಿಯಗೆ ಏನು ಮಾಡಲಾಗುವುದು ಎಂಬುದನ್ನು ಸರ್ಕಾರ ತಿಳಿಸಬೇಕು ಎಂದರು.

ಆಪ್ತ ಶೇಖ್‌ನಿಂದ ಜಮೀರ್‌ಗೂ ಸುತ್ತಿಕೊಳ್ಳುತ್ತಾ ಡ್ರಗ್ ಉರುಳು?

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಂಜನಾ ಜೊತೆ ಹೋಗಿದ್ದೆ ಎಂಬ ಸಂಬರಗಿ ಆರೋಪ ಶುದ್ಧ ಸುಳ್ಳು. ಈ ಬಗ್ಗೆ ನನ್ನನ್ನು ತನಿಖೆಗೆ ಒಳಪಡಿಸಲು. ಅದಕ್ಕೆ ನನ್ನ ಯಾವುದೇ ಆಕ್ಷೇಪ ಇಲ್ಲ. ನನ್ನ ವಿಮಾನ ಪ್ರಮಾಣದ ದಾಖಲೆಗಳನ್ನು ಪರಿಶೀಲಿಸಲಿ. ಯಾವುದೇ ರೀತಿಯ ತನಿಖೆಯನ್ನು ಬೇಕಾದರೂ ಮಾಡಲಿ ನಾನು ಸಿದ್ಧನಿದ್ದೇನೆ ಎಂದರು.

ಸಂಬರಗಿ ಆರೋಪಿಸಿರುವಂತೆ ನಾನು ಸಂಜನಾ ಅವರ ಜೊತೆ ಶ್ರೀಲಂಕಾ ಪಾರ್ಟಿಯಲ್ಲಿ ಇದ್ದದ್ದು, ನಾನು ಅವರೊಂದಿಗೆ ಕೈಜೋಡಿಸಿದ್ದೇನೆ ಎಂಬುದು ತನಿಖೆಯಲ್ಲಿ ಸಾಬೀತಾದರೆ ನನ್ನ ಆಸ್ತಿಯನ್ನೂ ಸರ್ಕಾರಕ್ಕೆ ಬರೆದುಕೊಡುತ್ತೇನೆ. ಸರ್ಕಾರ ನನಗೆ ಏನು ಶಿಕ್ಷೆ ಬೇಕಾದರೂ ವಿಧಿಸಲಿ ಎಂದು ಹೇಳಿದರು.

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಮಾಫಿಯಾ ಪ್ರಕರಣದ ಪ್ರಮುಖ ಆರೋಪಿ ನಟಿ ಸಂಜನಾ ಗಿಲ್ರಾನಿ ಅವರ ಜೊತೆ ಮಾಜಿ ಸಚಿವರೂ ಆದ ಜಮೀರ್‌ ಅಹಮದ್‌ ಖಾನ್‌ ಶ್ರೀಲಂಕಾ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ನಿರಾಕರಿಸಿದ್ದ ಜಮೀರ್‌ ಅಹಮದ್‌ ಸುಳ್ಳು ಆರೋಪ ಮಾಡುವ ಮೂಲಕ ಸಂಬರಗಿ ನನ್ನ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿ ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಇತ್ತೀಚೆಗೆ ದೂರು ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!