
ನವದೆಹಲಿ(ಏ. 21) ಕೊರೋನಾ ಲಾಕ್ ಡೌನ್ ಕಾರಣದಿಂದ ಎಲ್ಲಿಯೂ ಮದ್ಯ ಸಿಗುತ್ತಿಲ್ಲ. ಮದ್ಯದ ಅಂಗಡಿ ಓಪನ್ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದವರೂ ಇದ್ದಾರೆ. ವ್ಯಕ್ತಿಯೊಬ್ಬರು ಮದ್ಯದ ಅಂಗಡಿ ತೆರೆಯುವಂತೆ ಹೈಕೋರ್ಟ್ ಮೊರೆ ಹೋಗಿದ್ದು ಸುದ್ದಿಯಾಗಿತ್ತು.
ಇದೀಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮದ್ಯದ ಬಾಟಲಿಯೊಂದಿಗೆ ಸಿಕ್ಕಿಬಿದ್ದಿದ್ದಾರೆ. ಕರ್ನಾಟಕದ ಮನೀಶ್ ಬಸವರಾಜು, ತೆಲಂಗಾಣದ ಶ್ರವಣ್ ರಾವ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ.
ಮದ್ಯದಂಗಡಿ ಕಳ್ಳತನದ ಬಗ್ಗೆ ಬಯಲಾದ ನಿಗೂಢ ಕಾರಣ
ತಪಾಸಣೆ ವೇಳೆ ಇವರ ಬಳಿ 12 ಮದ್ಯದ ಬಾಟಲ್ ಪತ್ತೆಯಾಗಿವೆ ಎಂದು ಹೇಳಲಾಗಿದ್ದು ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಈ ಬಗ್ಗೆ ಟ್ವೀಟ್ ಸಹ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರೇ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ವರ್ತನೆಯನ್ನು ತೋರಿಸುತ್ತದೆ. ರಾಹುಲ್ ಗಾಂಧಿಯವರೇ ಏನಿದು ನಿಮ್ಮ ಸ್ಟ್ರಾಟಜಿ ಎಂದು ಕೇಳಿದ್ದಾರೆ.
ಹಲವಾರು ಕಾಂಗ್ರೆಸ್ ನಾಯಕರು ಆಹಾರ ಒದಗಿಸುವ ಕೆಲಸ ಮಾಡುತ್ತಿದ್ದರೆ ರಾಷ್ಟ್ರ ರಾಜಧಾನಿಯ ನಾಯಕರು ಲಿಕ್ಕರ್ ಸಾಗಾಟದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ