
ಲಕ್ನೋ(ಅ. 11) ಹತ್ರಾಸ್ ಅತ್ಯಾಚಾರ ಪ್ರಕರಣ ವಿರೋಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತ್ರಸ್ತೆಯ ಮನೆಗೆ ತೆರಳುವ ವೇಳೆ ಉತ್ತರ ಪ್ರದೇಶ ಪೊಲೀಸರು ತಡೆದಿದ್ದು ದೊಡ್ಡ ಸುದ್ದಿಯಾಗಿತ್ತು. ಆದರೆ ಈಗ ಅದೆ ಪಕ್ಷದಲ್ಲಿ ಮಹಿಳೆಯರ ಮೇಲೆ ಹಲ್ಲೆಯಾಗಿದೆ.
ಅತ್ಯಾಚಾರ ಆರೋಪಿಗೆ ಟಿಕೆಟ್ ನೀಡಿದ್ದೀರಿ ಎಂದು ವಿರೋಧ ಮಾಡಿದ ಕಾಂಗ್ರೆಸ್ ನಾಯಕಿ ಮೇಲೆ ಅದೆ ಪಕ್ಷದ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಮುಕುಂದ್ ಭಾಸ್ಕರ್ ಮಣಿ ಎಂಬುವರಿಗೆ ಟಿಕೆಟ್ ನೀಡಿದ್ದನ್ನು ತಾರಾ ಯಾದವ್ ವಿರೋಧಿಸಿದ್ದಾರೆ. ಇದೆ ಕಾರಣಕ್ಕೆ ಅವರ ಮೇಲೆ ಹಲ್ಲೆಯಾಗಿದೆ.
ಬೈ ಎಲೆಕ್ಷನ್ ನಡುವೆ ಜೋಡೆತ್ತುಗಳ ಜಾತಿ ವಾರ್!
ನಮ್ಮ ಪಾರ್ಟಿಯ ಇಮೇಜ್ ಗೆ ಈ ನಿರ್ಧಾರ ಧಕ್ಕೆ ತರುತ್ತದೆ , ಬೇರೆಯವರಿಗೆ ಟಿಕೆಟ್ ಕೊಡಿ ಎಂದು ತಾರಾ ಒತ್ತಾಯ ಮಾಡಿದ್ದಕ್ಕೆ ಅವರ ಮೇಲೆಯೇ ಹಲ್ಲೆಯಾಗಿದೆ.
ಈ ಪ್ರಕರಣ ತಲೆಕೆಟ್ಟವರು ನಡೆದುಕೊಂಡ ರೀತಿಯಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕು ಆಯೋಗದ ರೇಖಾ ಶರ್ಮ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ