ಚಿಕ್ಕಮಗಳೂರು: ಸಹೋದ್ಯೋಗಿಗಳ ವಿರುದ್ಧ ಪಿತೂರಿ ಆರೋಪ; ಕಾನ್ಸ್‌ಟೇಬಲ್ ಅಮಾನತ್ತು

Published : Mar 02, 2023, 11:39 AM IST
ಚಿಕ್ಕಮಗಳೂರು: ಸಹೋದ್ಯೋಗಿಗಳ ವಿರುದ್ಧ ಪಿತೂರಿ ಆರೋಪ; ಕಾನ್ಸ್‌ಟೇಬಲ್ ಅಮಾನತ್ತು

ಸಾರಾಂಶ

ಸಹೋದ್ಯೋಗಿಗಳ ವಿರುದ್ಧವೇ ಸಂಚು ನಡೆಸಿದ ಆರೋಪದ ಮೇಲೆ ಪೊಲೀಸ್ ಪೇದೆಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತು ಮಾಡಿರುವ ಘಟನೆ ಮೂಡಿಗೆರೆ ಠಾಣೆಯಲ್ಲಿ ನಡೆದಿದೆ.

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಚಿಕ್ಕಮಗಳೂರು (ಮಾ.2): ಸಹೋದ್ಯೋಗಿಗಳ ವಿರುದ್ಧವೇ ಸಂಚು ನಡೆಸಿದ ಆರೋಪದ ಮೇಲೆ ಪೊಲೀಸ್ ಪೇದೆಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತು ಮಾಡಿರುವ ಘಟನೆ ಮೂಡಿಗೆರೆ ಠಾಣೆಯಲ್ಲಿ ನಡೆದಿದೆ.

ಮೂಡಿಗೆರೆ ಠಾಣೆಯ ಪೊಲೀಸ್(Mudigere police station) ಪೇದೆ ಉಮೇಶ್ (Umesh Police Constable) ಅಮಾನತಾಗಿರುವ ಸಿಬ್ಬಂದಿ. ತನ್ನ ಸಹೋದ್ಯೋಗಿಗಳ ಮೇಲೆ ಕೇಸು ದಾಖಲಿಸಲು ಮತ್ತು ಹಣಕ್ಕೆ ಬೇಡಿಕೆ ಇಡುವಂತೆ ದೂರುದಾರರಿಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಈ ಮೂಲಕ ಮೂಡಿಗೆರೆ ಠಾಣೆಯಲ್ಲಿ ಕಳ್ಳತನದ ಆರೋಪದ ಮೇಲೆ ಕರೆತಂತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಹಲ್ಲೆ ಪ್ರಕರಣ ತಿರುವು ಪಡೆದುಕೊಂಡಿದೆ.

ಚಿಕ್ಕಮಗಳೂರು: ಅಪ್ರಾಪ್ತ ಕ್ರೀಡಾಪಟುಗೆ ಲೈಂಗಿಕ ದೌರ್ಜನ್ಯ

ಏನಿದು ಪ್ರಕರಣ ? : 

ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮ(Daradahalli village)ದಲ್ಲಿ ನಡೆದಿತ್ತು ಎನ್ನಲಾದ ಕಳ್ಳತನ ಪ್ರಕರಣ(Theft case)ಕ್ಕೆ ಸಂಬಂಧಿಸಿದಂತೆ ಕಳ್ಳತನವಾದ ಮನೆಯ ಬಾಗಿಲಿನ ಚಿಲಕದ ಮೇಲೆ ಬೆರಳಚ್ಚು ಇತ್ತು ಎಂದು ಮಂಜು ಎಂಬಾತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿತ್ತು.

ವಿಚಾರಣೆಯ ಸಂದರ್ಭದಲ್ಲಿ ಮಂಜು ಮೇಲೆ ಪೊಲೀಸರು ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಂಜು ಪತ್ನಿ ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ಎಸ್ಪಿಯವರು ಮೂಡಿಗೆರೆ ಠಾಣೆಯ ಪೊಲೀಸ್ ಪೇದೆಗಳಾದ ವಸಂತ ಮತ್ತು ಲೋಹಿತ್ ಇವರುಗಳನ್ನು ಅಮಾನತು ಮಾಡಿದ್ದರು. ಪೊಲೀಸ್ ಪೇದೆಗಳ ವಿರುದ್ಧ ಎಫ್.ಐ.ಆರ್. ದಾಖಲಿಸಬೇಕು ಎಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಮತ್ತೊಂದೆಡೆ ಪೊಲೀಸರ ಮೇಲೆ ಒತ್ತಡ ಹಾಕಿ ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸಲಾಗುತ್ತಿದೆ ಎಂದು ಪೊಲೀಸ್ ಸಿಬ್ಬಂದಿ ಪರವಾಗಿಯೂ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು.

ಪೊಲೀಸ್ ಹಲ್ಲೆ ಪ್ರಕರಣ ತಿರುವು : 

ಇದೀಗ ಕಳ್ಳತನ ಪ್ರಕರಣಕ್ಕೆ ಬೇರಯೊಂದು ತಿರುವು ಸಿಕ್ಕಿದೆ. ಕಳ್ಳತನ ಆರೋಪದ ಮೇಲೆ ಪೊಲೀಸರ ವಿಚಾರಣೆಯ ವೇಳೆ ದೈಹಿಕ ಹಲ್ಲೆಗೆ ಒಳಗಾಗಿದ್ದ ಮಂಜು ಕಡೆಯವರನ್ನು ಸಂಪರ್ಕಿಸಿ ಪೊಲೀಸರ ವಿರುದ್ಧ ದೂರು ನೀಡುವಂತೆ ಮತ್ತು ಪೊಲೀಸರಿಂದ 50 ಸಾವಿರ ಹಣಕ್ಕೆ ಬೇಡಿಕೆ ಇಡುವಂತೆ ಪೊಲೀಸ್ ಪೇದೆ ಉಮೇಶ್ ಕುಮ್ಮಕ್ಕು ನೀಡಿದ್ದ ಎಂಬ ಆರೋಪ ಈಗ ಕೇಳಿಬಂದಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ಸೋಮೇಗೌಡ ಅವರು ನೀಡಿದ ವರದಿಯನ್ನು ಆದರಿಸಿ ಪೇದೆ ಉಮೇಶ್ ನನ್ನು ಎಸ್ಪಿ ಉಮಾಪ್ರಶಾಂತ್ ಅಮಾನತು ಮಾಡಿ ಆದೇಶಿಸಿದ್ದಾರೆ.

ಅಂತರ್ಜಾತಿ ವಿವಾಹ ಆಗಿದ್ದ ಯುವತಿ ನೇಣಿಗೆ ಶರಣು: ಕುಟುಂಬಸ್ಥರಿಂದ ಭಾರೀ ಕಿರುಕುಳ

ಹದಿನೈದು ದಿನಗಳ ಅವಧಿಯಲ್ಲಿ ಮೂಡಿಗೆರೆ ಠಾಣೆಯ ಮೂವರು ಪೊಲೀಸ್ ಪೇದೆಗಳು ಅಮಾನತಾಗಿದ್ದಾರೆ. ಈ ಮೂಲಕ ದಾರದಹಳ್ಳಿ ಕಳ್ಳತನ ಪ್ರಕರಣ ಮತ್ತು ಆ ನಂತರ ನಡೆದ ಘಟನಾವಳಿಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?