
ಹುಬ್ಬಳ್ಳಿ, (ನ.22): ಬೇರೆ ಅಭ್ಯರ್ಥಿಯ ಹೆಸರಲ್ಲಿ ಪರೀಕ್ಷೆ ಬರೆಯುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸಿಕ್ಕಿಬಿದ್ದಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ರಾಯಭಾಗ ಮೂಲದ ಮಣಿಕಂಠ ಸಿಕ್ಕಿಬಿದ್ದಿರುವ ಪೊಲೀಸ್ ಕಾನ್ಸ್ಟೇಬಲ್. ಈತ ಹುಬ್ಬಳ್ಳಿ- ಧಾರವಾಡದಲ್ಲಿ ಪೊಲೀಸ್ ಕಾನ್ಸ್ಟೇಬಲ್ಗಳ ಭರ್ತಿಗೆ ನಡೆಯುತ್ತಿದ್ದ ಲಿಖಿತ ಪರೀಕ್ಷೆ. ಬೇರೊಬ್ಬನ ಹೆಸರಲ್ಲಿ ಪರೀಕ್ಷೆಗೆ ಹಾಜರಾಗಿದ್ದ.
ಟಿಇಟಿ: ಎರಡು ಲಕ್ಷ ಅಭ್ಯರ್ಥಿಗಳಲ್ಲಿ 8000 ಪಾಸ್..!
ಡಿಸಿಪಿ ಕೆ.ರಾಮರಾಜನ್ ಅವರಿಗೆ ಈ ಕುರಿತು ಮಾಹಿತಿ ಸಿಕ್ಕಿತ್ತು. ಡಿಸಿಪಿ ಮಾರ್ಗದರ್ಶನದಲ್ಲಿ ಗೋಕುಲ ರಸ್ತೆ ಠಾಣೆ ಪೊಲೀಸರ ಪರಿಶೀಲನೆ ವೇಳೆ ಬೇರೊಬ್ಬ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯುತ್ತಿದ್ದ ಕಾನ್ಸ್ಟೇಬಲ್ ಮಣಿಕಂಠ ಸಿಕ್ಕಿಬಿದ್ದಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ